Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ


Team Udayavani, Jul 27, 2024, 3:45 PM IST

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

ಪ್ರೊಬೇಷನರಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಸುಳ್ಳು ದಾಖಲೆಪತ್ರಗಳನ್ನು ಸಲ್ಲಿಸಿ, ನಿಗದಿತ ಅವಕಾಶಗಳಿಗಿಂತ ಅಧಿಕ ಬಾರಿ ಪರೀಕ್ಷೆಗೆ ಹಾಜರಾದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)ವು ತಾನು ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಡಿಜಿಟಲ್‌ ತಂತ್ರಜ್ಞಾನವನ್ನು ಬಳಸಲು ಮುಂದಾಗಿದೆ. ವಿವಿಧ ಸರಕಾರಿ ಹುದ್ದೆಗಳ ನೇಮಕಕ್ಕಾಗಿ ನಡೆಸಲಾಗುವ ಎಲ್ಲ ತೆರನಾದ ಸ್ಪರ್ಧಾತ್ಮಕ
ಪರೀಕ್ಷೆಗಳನ್ನು ಇನ್ನಷ್ಟು ಪಾರದರ್ಶಕ ಮತ್ತು ವಿಶ್ವಾಸಾರ್ಹವನ್ನಾಗಿಸಲು ಯುಪಿಎಸ್‌ಸಿ ಈ ಮಹತ್ತರ ನಿರ್ಧಾರ ಕೈಗೊಂಡಿದೆ.

ಪ್ರಸಕ್ತ ಸಾಲಿನ ನೀಟ್‌-ಯುಜಿ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ಸಹಿತ ವಿವಿಧ ಅಕ್ರಮಗಳು ನಡೆದು ಭಾರೀ ವಿವಾದಕ್ಕೀಡಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತೀವ್ರ ಮುಜುಗರ ಅನುಭವಿಸುವಂತಾಗಿತ್ತು. ಇದರ ಬೆನ್ನಲ್ಲೇ ಪ್ರೊಬೆಷನರಿ ಐಎಎಸ್‌
ಅಧಿಕಾರಿಯಾಗಿರುವ ಪೂಜಾ ಖೇಡ್ಕರ್‌ ಅವರ ಪ್ರಕರಣ ಬೆಳಕಿಗೆ ಬಂದಿತ್ತು.

ಈ ಪರೀಕ್ಷಾ ಅಕ್ರಮಗಳು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವಂತೆಯೇ ಸ್ಪರ್ಧಾತ್ಮಕ ಪರೀಕ್ಷೆಗಳ ವಿಶ್ವಾಸಾರ್ಹತೆಯ ಬಗೆಗೆ ದೇಶದ ಜನತೆಯಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿವೆ. ಈ ಹಿನ್ನೆಲೆಯಲ್ಲಿ ಎನ್‌ಟಿಎ ತನ್ನ ಪರೀಕ್ಷಾ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲು ಮುಂದಡಿ ಇರಿಸಿರುವಂತೆಯೇ ಈಗ ಯುಪಿಎಸ್‌ಸಿ ಕೂಡ ವಿವಿಧ ಹುದ್ದೆಗಳಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ತಂತ್ರಜ್ಞಾನವನ್ನು ಬಳಸಿಕೊಂಡು ಅಕ್ರಮಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.

ಯುಪಿಎಸ್‌ಸಿ ಪ್ರತೀ ವರ್ಷ ಕೇಂದ್ರ ಸರಕಾರದ ಗ್ರೂಪ್‌ ಎ ಹುದ್ದೆಗಳಾದ ಐಎಎಸ್‌, ಐಪಿಎಸ್‌, ಐಎಫ್ಎಸ್‌, ಐಇಎಸ್‌, ಐಎಸ್‌ಎಸ್‌, ಐಇಎಸ್‌ ಮಾತ್ರವಲ್ಲದೆ ರಕ್ಷಣ ಇಲಾಖೆಗೆ ಸಂಬಂಧಿಸಿದ ವಿವಿಧ ಪರೀಕ್ಷೆಗಳು ಮತ್ತು ಕೆಲವು ಗ್ರೂಪ್‌ ಬಿ ಪರೀಕ್ಷೆಯನ್ನೂ ನಡೆಸುತ್ತದೆ. ಈ ಪರೀಕ್ಷೆಗಳಿಗೆ ಪ್ರತೀ ವರ್ಷ ಹತ್ತು ಲಕ್ಷಕ್ಕೂ ಅಧಿಕ ಮಂದಿ ಹಾಜರಾಗುತ್ತಾರೆ.

ಹೀಗಾಗಿ ಈ ಎಲ್ಲ ಪರೀಕ್ಷೆಗಳಲ್ಲಿ ಅಕ್ರಮಗಳಿಗೆ ಕಡಿವಾಣ ಹಾಕಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಕೃತಕ ಬುದ್ಧಿಮತ್ತೆ, ಸಿಸಿಟಿವಿ, ಫೇಸ್‌ ರೆಕಗ್ನಿಶನ್‌, ಆಧಾರ್‌ ಆಧಾರಿತ ಬೆರಳಚ್ಚು ಪರಿಶೀಲನೆ, ಇ-ಪ್ರವೇಶ ಪತ್ರಗಳ ದೃಢೀಕರಣಕ್ಕಾಗಿ ಕ್ಯುಆರ್‌ ಕೋಡ್‌ ಸ್ಕ್ಯಾನಿಂಗ್‌ ತಂತ್ರಜ್ಞಾನ ಆದಿಯಾಗಿ ಆಧುನಿಕ ತಂತ್ರಜ್ಞಾನವನ್ನು ಪರೀಕ್ಷಾ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಬಳಸಲು ಯುಪಿಎಸ್‌ಸಿ ಉದ್ದೇಶಿಸಿದೆ. ಅಷ್ಟು ಮಾತ್ರವಲ್ಲದೆ ಈ ಎಲ್ಲ ತಾಂತ್ರಿಕ ಸೇವೆಯನ್ನು ಒದಗಿಸಲು ಸಾರ್ವಜನಿಕ ಕಂಪೆನಿಗಳಿಂದ ಬಿಡ್‌ ಅನ್ನು ಆಹ್ವಾನಿಸಿದೆ.

ಐಎಎಸ್‌, ಐಪಿಎಸ್‌ನಂತಹ ಉನ್ನತ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಇನ್ನಷ್ಟು ವಿಶ್ವಾಸಾರ್ಹವನ್ನಾಗಿಸಲು ಯುಪಿಎಸ್‌ಸಿಯ ಈ ನಿರ್ಧಾರ ಸಹಕಾರಿ. ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ತೋರುವ ಅರ್ಹ ಪ್ರತಿಭಾನ್ವಿತರಿಗೆ ಈ ಉನ್ನತ ಹುದ್ದೆಗಳು ಲಭಿಸುವುದನ್ನು ಖಾತರಿಪಡಿಸಿದಂತಾಗಲಿದೆ.

ಪರೀಕ್ಷೆಯ ಸಂದರ್ಭದಲ್ಲಿ ಇಷ್ಟೊಂದು ಕಠಿನತಮ ನಿಲುವನ್ನು ಅನುಸರಿಸುವುದರಿಂದ ಉನ್ನತ ಹುದ್ದೆಗಳ ಆಕಾಂಕ್ಷಿಗಳು ಸಂಕಷ್ಟಕ್ಕೊಳಗಾಗದಂತೆ ಎಚ್ಚರ ವಹಿಸುವ ಮಹತ್ತರ ಹೊಣೆಗಾರಿಕೆಯೂ ಯುಪಿಎಸ್‌ಸಿಯ ಮೇಲಿದೆ. ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆಯ ಸಂದರ್ಭದಲ್ಲಿ ವ್ಯಕ್ತಿಯ ಖಾಸಗಿ ಮತ್ತು ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗುತ್ತಿದ್ದು ಇವು ಇನ್ನಿಲ್ಲದ ಸಮಸ್ಯೆಗಳನ್ನು ತಂದೊಡ್ಡುತ್ತಿವೆ.

ಯುಪಿಎಸ್‌ಸಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರತಿಯೊಂದು ಹಂತದಲ್ಲೂ ತಂತ್ರಜ್ಞಾನ ಬಳಕೆಯಾಗುವುದರಿಂದ ಇಂತಹ ಸಾಧ್ಯತೆಗಳು ಅಧಿಕವಾಗಿದ್ದು, ಈ ಬಗ್ಗೆ ಯುಪಿಎಸ್‌ಸಿ ಹೆಚ್ಚಿನ ಗಮನ ಹರಿಸಬೇಕಿದೆ. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಭರದಲ್ಲಿ ಲಕ್ಷಾಂತರ ಸಂಖ್ಯೆಯ ಅಭ್ಯರ್ಥಿಗಳ ವೈಯಕ್ತಿಕ ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗಿ ಸೈಬರ್‌ ದಂಧೆಕೋರರ ಕೈವಶವಾಗಿ ಮತ್ತೂಂದು ಬಲುದೊಡ್ಡ ತಲೆನೋವು ಸೃಷ್ಟಿಯಾಗದಂತೆ ಅಗತ್ಯ ಮುಂಜಾಗ್ರತೆ ಕೈಗೊಳ್ಳುವುದು ಅತ್ಯಗತ್ಯ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.