Paris Olympics ; ಮೊದಲ ಎರಡು ಚಿನ್ನದ ಪದಕ ಗೆದ್ದ ಚೀನಾ!

ಭಾರತಕ್ಕೆ ಮೊದಲ ದಿನ ಶೂಟಿಂಗ್ ನಲ್ಲಿ ಭಾರೀ ನಿರಾಸೆ

Team Udayavani, Jul 27, 2024, 4:29 PM IST

1-aasa

ಪ್ಯಾರಿಸ್ : 2024 ರ ಒಲಂಪಿಕ್ ಕ್ರೀಡಾಕೂಟದ ಮೊದಲ ಚಿನ್ನದ ಪದಕವನ್ನು ಚೀನಾ ತನ್ನದಾಗಿಸಿಕೊಂಡಿತು.ಐಫೆಲ್ ಟವರ್‌ನಿಂದ ಸುಮಾರು 250 ಕಿಮೀ ದೂರದಲ್ಲಿರುವ ಚಟೌರೌಕ್ಸ್‌ನ ಹೊರವಲಯದಲ್ಲಿರುವ ಮಿಲಿಟರಿ ನೆಲೆಯಲ್ಲಿ ನಡೆದ 10 ಮೀಟರ್ ಮಿಶ್ರ ಏರ್ ರೈಫಲ್ ಟೀಮ್ ಈವೆಂಟ್‌ನ ವಿಶ್ವ ಚಾಂಪಿಯನ್ ಮತ್ತು ಫೇವರಿಟ್‌ಗಳಾದ ಹುವಾಂಗ್ ಯುಟಿಂಗ್ ಮತ್ತು ಶೆಂಗ್ ಲಿಹಾವೊ ಅವರು ಬೆಳಗ್ಗೆ 11.22 ಕ್ಕೆ ಜಯ ತನ್ನದಾಗಿಸಿಕೊಂಡರು.

ದಕ್ಷಿಣ ಕೊರಿಯಾದ ಕೆಯುಮ್ ಜಿ-ಹಿಯಾನ್ ಮತ್ತು ಪಾರ್ಕ್ ಹಾ-ಜುನ್ ಬೆಳ್ಳಿ ಪದಕ ಗೆದ್ದರು. ಗೆಲುವಿಗೆ 16 ಅಂಕಗಳ ಗುರಿಯೊಂದಿಗೆ ಚೀನಾ ನಾಲ್ಕು ಸುತ್ತುಗಳ ನಂತರ 6-2 ಮುನ್ನಡೆ ಸಾಧಿಸಿತು. ಕಜಕಿಸ್ಥಾನದ ಜೋಡಿ ಕಂಚಿನ ಪದಕ ಗೆದ್ದಿತು.

ಮಹಿಳೆಯರ ಸಿಂಕ್ರೊನೈಸ್ಡ್ 3 ಮೀ ಸ್ಪ್ರಿಂಗ್‌ಬೋರ್ಡ್ ಫೈನಲ್‌ನಲ್ಲಿ ಯಾನಿ ಚಾಂಗ್ ಮತ್ತು ಯಿವೆನ್ ಚೆನ್ ಅವರಿಂದ 2 ನೇ ಚಿನ್ನದ ಪದಕ ಚೀನಾ ತನ್ನದಾಗಿಸಿಕೊಂಡಿತು. ಅಮೆರಿಕದ ಕೆ. ಕುಕ್, ಎಸ್. ಬೇಕನ್ ಬೆಳ್ಳಿ ಪದಕ ಗೆದ್ದರೆ, ಬ್ರಿಟನ್ ನ ಹಾರ್ಪರ್ ಮತ್ತು ಜೆನ್ಸನ್ ಕಂಚಿನ ಪದಕ ಗೆದ್ದರು.

ಭಾರತಕ್ಕೆ ಶೂಟಿಂಗ್ ನಲ್ಲಿ ಭಾರೀ ನಿರಾಸೆ

ಇಂದು ಭಾರತೀಯ ಶೂಟರ್‌ಗಳಿಗೆ ಅದೃಷ್ಟವಿಲ್ಲದಾಯಿತು. ಚೀಮಾ, ಸರಬ್ಜೋತ್ ಪದಕ ಸುತ್ತಿಗೆ ಅರ್ಹತೆ ಪಡೆಯುವಲ್ಲಿ ವಿಫಲವಾದರು. ಮಿಶ್ರ ಹಾಗೂ ಪುರುಷರ ಎರಡೂ ತಂಡಗಳು ಪದಕ ಸುತ್ತಿಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿವೆ. ರಮಿತಾ ಜಿಂದಾಲ್ ಮತ್ತು ಅರ್ಜುನ್ ಬಾಬುತಾ ಒಟ್ಟು 628.7 ಅಂಕಗಳೊಂದಿಗೆ ಆರನೇ ಸ್ಥಾನ ಗಳಿಸಿದರೆ, ಎಲವೆನಿಲ್ ವಲರಿವನ್ ಮತ್ತು ಸಂದೀಪ್ ಸಿಂಗ್ ಒಟ್ಟು 626.3 ಅಂಕಗಳೊಂದಿಗೆ 12 ನೇ ಸ್ಥಾನದಲ್ಲಿ ಉಳಿದರು. ರಮಿತಾ ಮತ್ತು ಅರ್ಜುನ್ ಬಾಬುತಾ ಜೋಡಿಯು ಮೂರು ಗುರಿಗಳು ಉಳಿದಿರುವಾಗ ಐದನೇ ಸ್ಥಾನವನ್ನು ಪಡೆದರು ಆದರೆ ಪದಕ ಸುತ್ತಿನ ಕಟ್-ಆಫ್‌ನ 1.0 ಪಾಯಿಂಟ್‌ಗಳಷ್ಟು ಕಡಿಮೆ ಸಿಕ್ಕಿತು. ಮತ್ತೊಂದೆಡೆ, ಸರಬ್ಜೋತ್ 9 ನೇ ಶ್ರೇಯಾಂಕದೊಂದಿಗೆ ತನ್ನ ಆಟವನ್ನು ಕೊನೆಗೊಳಿಸಿದರು, ಪದಕ ಸುತ್ತಿಗೆ ಒಂದು ಸ್ಥಾನವನ್ನು ಕಳೆದುಕೊಂಡರು.

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

15

Junior World Cup shooting: ಭಾರತದ ಆತಿಥ್ಯದಲ್ಲಿ ಜೂ. ವಿಶ್ವಕಪ್‌ ಶೂಟಿಂಗ್‌

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.