Tungabhadra ಡ್ಯಾಂನಿಂದ ನದಿಗೆ 1.50 ಲಕ್ಷ ಕ್ಯೂಸೆಕ್ ನೀರು; ನದಿಪಾತ್ರದಲ್ಲಿ ನಿಷೇಧಾಜ್ಞೆ
Team Udayavani, Jul 27, 2024, 4:56 PM IST
ಕೊಪ್ಪಳ: ತುಂಗಭದ್ರಾ ಜಲಾಶಯದ 33 ಗೇಟ್ಗಳ ಮೂಲಕ ಶನಿವಾರ ಮತ್ತೆ 1.50 ಲಕ್ಷ ಕ್ಯೂಸೆಕ್ ನೀರು ನದಿಪಾತ್ರಕ್ಕೆ ಬಿಡುಗಡೆ ಮಾಡಲಾಗಿದೆ. ಮುನಿರಾಬಾದ್ ನೀರಾವರಿ ವೃತ್ತ ಹಾಗೂ ಕೊಪ್ಪಳ ಜಿಲ್ಲಾಡಳಿತವು ನದಿಪಾತ್ರದ ಹಳ್ಳಿಗಳ ಜನತೆಗೆ ನದಿಯ ಸ್ಥಳಕ್ಕೆ ತೆರಳದಂತೆ ನಿಷೇಧಾಜ್ಞೆ ಹೊರಡಿಸಿದೆ.
ತುಂಗಭದ್ರಾ ಜಲಾಶಯವು ಭರ್ತಿಯಾಗಿ ನಾಲ್ಕೈದು ದಿನಗಳಾಗಿವೆ. ಆದರೆ ಮಲೆನಾಡು ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಾಗಿದ್ದರಿಂದ ಬಯಲು ಸೀಮೆಯ ತುಂಗಭದ್ರೆಗೆ ಹೆಚ್ಚು ನೀರು ಹರಿದು ಬರುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಒಳ ಹರಿವಿನ ಪ್ರಮಾಣ ಒಂದು ಲಕ್ಷ ಕ್ಯೂಸೆಕ್ ನಷ್ಟಿದೆ. ಶುಕ್ರವಾರ ಡ್ಯಾಂನ ಒಳ ಹರಿವು 1,00,871 ಕ್ಯೂಸೆಕ್ ನಷ್ಟಿದ್ದರೆ, ಶನಿವಾರದ ವೇಳೆಗೆ ಡ್ಯಾಂನ ಒಳ ಹರಿವು 1,17,950 ಕ್ಯೂಸೆಕ್ ನಷ್ಟು ಹೆಚ್ಚಾಗಿದೆ. ಡ್ಯಾಂನಲ್ಲಿನ ನೀರು ಸಂಗ್ರಹ ಸಾಮರ್ಥ್ಯ, ಒಳ ಹರಿವಿನ ಲೆಕ್ಕಾಚಾರದಲ್ಲಿಯೇ ನದಿಪಾತ್ರಗಳಿಗೆ ನೀರನ್ನು ಹರಿ ಬಿಡಲಾಗುತ್ತಿದೆ. ಶುಕ್ರವಾರ ಡ್ಯಾಂನಿಂದ ಒಂದು ಲಕ್ಷ ಕ್ಯೂಸೆಕ್ ನಷ್ಟು ನೀರು ಬಿಡುಗಡೆಯಾಗಿದ್ದರೆ ಶನಿವಾರ ಮತ್ತೆ 50 ಸಾವಿರ ಹೆಚ್ಚುವರಿ ಸೇರಿ ಒಟ್ಟು 1.50 ಲಕ್ಷ ಕ್ಯೂಸೆಕ್ನಷ್ಟು ನೀರನ್ನು ನದಿಗೆ ಹರಿ ಬಿಡಲಾಗಿದೆ.
ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು ಬಿಟ್ಟ ಹಿನ್ನೆಲೆಯಲ್ಲಿ ಗಂಗಾವತಿ ತಾಲೂಕಿನ ಕಂಪ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿವೆ. ಇದಲ್ಲದೇ ಕೆಲವು ಸ್ಮಾರಕಗಳು ಮುಳುಗಿವೆ. ಪ್ರತಿ ಬಾರಿ ಡ್ಯಾಂನಿಂದ ನೀರು ಹರಿಬಿಟ್ಟ ವೇಳೆ ಸ್ಮಾರಕ ಸೇರಿ ಸೇತುವೆ ಮುಳಗುಡೆಯಾಗುತ್ತವೆ.
ನದಿಪಾತ್ರದಲ್ಲಿ ನಿಷೇಧಾಜ್ಞೆ
ಡ್ಯಾಂನ ಒಳ ಹರಿವಿನ ಪ್ರಮಾಣ ಹೆಚ್ಚಿದ್ದು, ನದಿ ಪಾತ್ರದಲ್ಲಿ ನೀರು ರಭಸವಾಗಿ ಹರಿಯುತ್ತಿದೆ. ಹಾಗಾಗಿ ನದಿಪಾತ್ರದ ಬ್ರಿಜ್, ಬ್ಯಾರೇಜ್ ಭೋರ್ಗರೆಯುತ್ತಿವೆ. ಈ ವೇಳೆ ನದಿಪಾತ್ರದಲ್ಲಿನ ಹಳ್ಳಿಗಳ ಜನರು ಯಾವುದೇ ಕಾರಣಕ್ಕೂ ನದಿ ತಟದ ನೂರು ಮೀಟರ್ ವ್ಯಾಪ್ತಿಯಲ್ಲಿ ಆ.10ರವರೆಗೂ ಸಂಚಾರ ಮಾಡದಂತೆ ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ನಿಷೇಧಾಜ್ಞೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.