NITI Aayog ಸಭೆ; ಎಲ್ಲಾ ರಾಜ್ಯಗಳ ಪ್ರಯತ್ನದಿಂದ ವಿಕಸಿತ ಭಾರತ್ ಗುರಿ: ಪ್ರಧಾನಿ

''ಮೈಕ್ ಮ್ಯೂಟ್ ಮಾಡಲಾಗಿತ್ತು'' ಎಂದು ಸಭೆಯಿಂದ ಹೊರ ನಡೆದ ಮಮತಾ ಬ್ಯಾನರ್ಜಿ!!

Team Udayavani, Jul 27, 2024, 5:01 PM IST

modi (4)

ಹೊಸದಿಲ್ಲಿ:‘ ಎಲ್ಲಾ ರಾಜ್ಯಗಳ ಸಂಯೋಜಿತ ಪ್ರಯತ್ನಗಳ ಮೂಲಕ ‘ವಿಕಸಿತ ಭಾರತ್ 2047′ ನ ಕನಸನ್ನು ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನಡೆದ ನೀತಿ ಆಯೋಗದ ಒಂಬತ್ತನೇ ಆಡಳಿತ ಮಂಡಳಿಯ ಸಭೆಯಲ್ಲಿ ಹೇಳಿದರು.

ವಿವಿಧ ಅಭಿವೃದ್ಧಿ ವಿಷಯಗಳು ಮತ್ತು ನೀತಿ ವಿಷಯಗಳ ಕುರಿತು ಚರ್ಚಿಸಲು ಶನಿವಾರ ನಡೆದ ನೀತಿ ಆಯೋಗದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಧಾನಿ “ನಾವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದೇವೆ. ನಾವು ಸಾಂಕ್ರಾಮಿಕ ರೋಗವನ್ನು ಸೋಲಿಸಿದ್ದೇವೆ. ನಮ್ಮ ಜನರು ಉತ್ಸಾಹ ಮತ್ತು ಆತ್ಮವಿಶ್ವಾಸದಿಂದ ತುಂಬಿದ್ದಾರೆ. ನಾವು ಎಲ್ಲರ ಸಂಯೋಜಿತ ಪ್ರಯತ್ನದಿಂದ ವಿಕಸಿತ ಭಾರತ್ 2047 ರ ನಮ್ಮ ಕನಸುಗಳನ್ನು ನನಸಾಗಿಸಬಹುದು. ವಿಕಸಿತ ರಾಜ್ಯಗಳು ವಿಕಸಿತ ಭಾರತ್ ಮಾಡುತ್ತವೆ’ ಎಂದರು.

“ವಿಕಸಿತ ಭಾರತ್ 2047 ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆಯಾಗಿದೆ. ರಾಜ್ಯಗಳು ನೇರವಾಗಿ ಜನರೊಂದಿಗೆ ಸಂಪರ್ಕ ಹೊಂದಿರುವುದರಿಂದ ಈ ಗುರಿಯನ್ನು ಸಾಧಿಸುವಲ್ಲಿ ಸಕ್ರಿಯ ಪಾತ್ರ ವಹಿಸಬಹುದು” ಎಂದರು.

“ಇದು ಬದಲಾವಣೆಗಳ, ತಾಂತ್ರಿಕ ಮತ್ತು ಭೌಗೋಳಿಕ-ರಾಜಕೀಯ ಮತ್ತು ಅವಕಾಶಗಳ ದಶಕ. ಭಾರತವು ಈ ಅವಕಾಶಗಳನ್ನು ಪಡೆದುಕೊಳ್ಳಬೇಕು ಮತ್ತು ನಮ್ಮ ನೀತಿಗಳನ್ನು ಅಂತಾರಾಷ್ಟ್ರೀಯ ಹೂಡಿಕೆಗಳಿಗೆ ಅನುಕೂಲವಾಗುವಂತೆ ಮಾಡಬೇಕು. ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಇದು ಪ್ರಗತಿಯ ಮೆಟ್ಟಿಲು” ಎಂದರು.

ಕೆಲವು ರಾಜ್ಯಗಳು ಪ್ರಸ್ತಾವಿಸಿದ “ಶೂನ್ಯ ಬಡತನ’ ಕಲ್ಪನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಮೋದಿ, ಹಳ್ಳಿಗಳನ್ನು “ಶೂನ್ಯ ಬಡತನ ಹಳ್ಳಿ’ ಗ ಳೆಂದು ಗುರುತಿಸಬಹುದೆಂಬ ಸಲಹೆ ನೀಡಿದರು.

ಗುಜರಾತ್‌ನಿಂದ ಸಂಸ್ಥೆ
ನೀತಿ ಆಯೋಗದ ಮಾದರಿಯಲ್ಲೇ ಗುಜರಾತ್‌ ಸ್ಟೇಟ್‌ ಆಫ್ ಟ್ರಾನ್ಸ್‌ ಫಾರ್ಮೇಶನ್‌(ಜಿಆರ್‌ಐಟಿ) ಆರಂಭಿಸಲಿದೆ ಎಂದು ಸಿಎಂ ಭೂಪೇಂದ್ರ ಪಟೇಲ್‌ ಹೇಳಿದ್ದಾರೆ. ವಿಕಸಿತ ಭಾರತಕ್ಕಾಗಿ ವಿಕಸಿತ ಗುಜರಾತ್‌ನ ನೀಲ ನಕ್ಷೆಯನ್ನು ಅವರೂ ಪ್ರಸ್ತುತಿಪಡಿಸಿದರು.

ಮೈಕ್ ಮ್ಯೂಟ್ ಮಾಡಲಾಗಿತ್ತು: ಮಮತಾ ಆಕ್ರೋಶ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಭೆಯಲ್ಲಿ ಭಾಗವಹಿಸಿದ್ದರೂ, ಪಶ್ಚಿಮ ಬಂಗಾಳಕ್ಕೆ ಕೇಂದ್ರದ ಹಣಕಾಸು ನೆರವನ್ನು ನಿರಾಕರಿಸಿದ ವಿಷಯವನ್ನು ಪ್ರಸ್ತಾಪಿಸಿದಾಗ ತಮ್ಮ ಮೈಕ್ ಅನ್ನು ಮ್ಯೂಟ್ ಮಾಡಲಾಗಿತ್ತು ಎಂದು ಆರೋಪಿಸಿ ಸಭೆಯಿಂದ ಹೊರನಡೆದು ಆಕ್ರೋಶ ಹೊರ ಹಾಕಿದ್ದಾರೆ.

“ನನ್ನನ್ನು ತಡೆದು ಏಕೆ ತಾರತಮ್ಯ ಮಾಡುತ್ತಿದ್ದೀರಿ? ವಿರೋಧ ಪಕ್ಷದಿಂದ ನಾನು ಮಾತ್ರ ಇಲ್ಲಿ ಪ್ರತಿನಿಧಿಸಿದ್ದೇನೆ ಮತ್ತು ಸಹಕಾರಿ ಒಕ್ಕೂಟವನ್ನು ಬಲಪಡಿಸಬೇಕು ಎಂಬ ಹೆಚ್ಚಿನ ಆಸಕ್ತಿಯಿಂದ ಈ ಸಭೆಗೆ ಹಾಜರಾಗುತ್ತಿದ್ದೇನೆ” ಎಂದು ಗುಡುಗಿ, ನೀತಿ ಆಯೋಗವನ್ನು ರದ್ದುಪಡಿಸಿ ಯೋಜನಾ ಆಯೋಗವನ್ನು ಪುನಃಸ್ಥಾಪಿಸಲು ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ಸರ್ಕಾರದ ಮೂಲಗಳು ಮಮತಾ ಹೇಳಿಕೆಯನ್ನು ಹೇಳಿಕೆಯನ್ನು ತಳ್ಳಿಹಾಕಿದ್ದು, ಅವರು ಮಾತನಾಡುವ ಸಮಯ ಮುಗಿದಿತ್ತು, ಊಟದ ವಿರಾಮದ ನಂತರ ಅವರ ಸರದಿ ಬರುತ್ತಿತ್ತು ಎಂದು ಹೇಳಿದೆ.

ಎನ್‌ಡಿಎ ಮಿತ್ರ ಪಕ್ಷ ಜೆಡಿಯು ನಾಯಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಭೆಗೆ ಗೈರಾಗಿದ್ದರು ಆದರೆ ಉಪ ಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಬಿಹಾರದ ಪ್ರತಿನಿಧಿಗಳಾಗಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.