Sankeshwar: ಉಕ್ಕಿ ಹರಿದ ಹಿರಣ್ಯಕೇಶಿ ನದಿ; ನೀರಿನಲ್ಲೇ ನಿಂತು ಶಂಕರಲಿಂಗ ದೇವರಿಗೆ ಆರತಿ
Team Udayavani, Jul 27, 2024, 5:23 PM IST
ಸಂಕೇಶ್ವರ: ಹಿರಣ್ಯಕೇಶಿ ನದಿ ಉಕ್ಕಿ ಹರಿಯುತ್ತಿದ್ದು ಪಟ್ಟಣದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ನಾಗನೂರು-ಸಂಕೇಶ್ವರ ಸೇತುವೆಗಳು ಮುಳುಗಡೆಯಾಗಿದ್ದು, ಜನವಸತಿ ಪ್ರದೇಶಗಳಿಗೆ ಹಿರಣ್ಯಕೇಶಿ ನದಿ ಆವರಿಸಿಕೊಂಡಿದೆ.
ಹಿರಣ್ಯಕೇಶಿ ಜಲಾನಯನ ಪ್ರದೇಶ ಅಂಬೋಲಿ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ನೀರಿನ ಹರಿವಿನ ಪ್ರಮಾಣ ಹೆಚ್ಚಾಗುವ ಸಂಭವಿವಿದೆ.
ಪಟ್ಟಣದ ಆರಾಧ್ಯ ದೈವ ಶಂಕರಾಚಾರ್ಯ ಶಂಕರಲಿಂಗ ದೇವಸ್ಥಾನದ ಗರ್ಭಗುಡಿಯಲ್ಲಿ 4 ಅಡಿ ನೀರು ತುಂಬಿದೆ. ನೀರಿನಲ್ಲೇ ಶಂಕರಲಿಂಗ ದೇವರ ಪೂಜಾ ಆರತಿ ನಡೆಯುತ್ತಿದೆ.
ವರುಣನ ಅಬ್ಬರಕ್ಕೆ ಈಗಾಗಲೇ ಕಷ್ಟನಷ್ಟಗಳು ಸಂಭಿವಿಸಿದ್ದು ಶಂಕರಲಿಂಗ ಕಾರ್ಯಾಲಯ, ಉರ್ದು ಶಾಲೆಯಲ್ಲಿ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಿದ್ದು ಪ್ರವಾಹ ನದಿ ಪಾತ್ರದ ಜನರಿಗೆ ಸಕಲ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.