Kampli: ಹೆಚ್ಚಿದ ನೆರೆ ಪ್ರವಾಹ; ಹೊಲಗಳಿಗೆ ನುಗ್ಗಿದ ನೀರು
ಕಂಪ್ಲಿ-ಕೋಟೆಯ ಪಂಪಾಪತಿ ದೇವಸ್ಥಾನ ಬಳಿಯ ಮಾಗಾಣಿ ರಸ್ತೆ ಮುಳುಗಡೆ
Team Udayavani, Jul 27, 2024, 8:40 PM IST
ಕಂಪ್ಲಿ: ಎಲ್ಲೋ ಮಳೆ, ಎಲ್ಲೋ ಪ್ರವಾಹ ಎಂಬಂತೆ ತುಂಗಾಭದ್ರಾ ಜಲಾಯಶವು ಮೇಲ್ಭಾಗದ ಮಳೆಯಿಂದ ಹರಿದು ಬಂದ ನೀರಿನಿಂದ ತುಂಬಿಕೊಂಡಿದೆ. ಆದರೆ, ನದಿ ಪಾತ್ರದಲ್ಲಿ ಮಳೆ ಇಲ್ಲದಿದ್ದರೂ ಪ್ರವಾಹದ ಸ್ಥಿತಿ ಎದುರಿಸುವಂತಾಗಿದೆ.
ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ಪ್ರವಾಹ ಉಂಟಾಗಿ, ಕಂಪ್ಲಿ-ಕೋಟೆಯ ಕೆಲ ಮನೆಗಳಿಗೆ ನೀರು ನುಗ್ಗುವಂತಾಗಿದೆ. ಇಲ್ಲಿನ ಮೀನುಗಾರರ ಕುಟುಂಬಗಳ ರಕ್ಷಣೆಗಾಗಿ ಕಾಳಜಿ ಕೇಂದ್ರ ತೆರೆಯುವ ಜತೆಗೆ ನಿರಾಶ್ರಿತರ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಈಗಾಗಲೇ ಸೇತುವೆ ಮುಳುಗಡೆ ಪರಿಣಾಮ ಎರಡು ಜಿಲ್ಲೆಯ ಜನರ ಸಂಪರ್ಕ ಕಡಿತಗೊಂಡಿದೆ. ವಾಣಿಜ್ಯ ಕೇಂದ್ರ ಹಾಗೂ ರೈತರು ಜಮೀನುಗಳಿರುವುದರಿಂದ ಕಂಪ್ಲಿ-ಗಂಗಾವತಿಗೆ ಸಂಪರ್ಕಿಸಬೇಕಾದರೆ, ಜನರು ಬುಕ್ಕಸಾಗರ ಸೇತುವೆ ಮೂಲಕ ಸುಮಾರು 30 ಕಿ.ಮೀ ಕ್ರಮಿಸಬೇಕಾದ ದುಸ್ಥಿತಿ ಎದುರಾಗಿದೆ. ಕಂಪ್ಲಿ-ಕೋಟೆಯ ಪಂಪಾಪತಿ ದೇವಸ್ಥಾನ ಬಳಿಯ ಮಾಗಾಣಿ ರಸ್ತೆಯು ಸಂಪೂರ್ಣವಾಗಿ ಮುಳುಗಿ, ಭತ್ತ, ಕಬ್ಬು ಜಲದಿಗ್ಭಂಧನವಾಗಿದೆ. ಇಲ್ಲಿನ ಹೊಳೆ ಆಂಜನೇಯ ದೇವಸ್ಥಾನವು ನದಿ ಹಿನ್ನೀರಿನಿಂದ ಜಲಾವೃತವಾಗಿದೆ. ಇಲ್ಲಿನ ಕೋಟೆಯ ಜನರು ತೆಪ್ಪದ ಮೂಲಕ ಸಂಪರ್ಕಿಸಬೇಕಾದ ಅನಿವಾರ್ಯತೆ ಉಂಟಾಗಿದೆ.
ಆತಂಕದಲ್ಲಿ ರೈತರು : ನದಿ ಪ್ರವಾಹದಿಂದ ಜಮೀನುಗಳಿಗೆ ನೀರು ನುಗ್ಗಿದ್ದು, ಅನ್ನದಾತರು ಸಂಕಷ್ಟಕ್ಕೀಡಾಗುವಂತಾಗಿದೆ. ಕಂಪ್ಲಿ-ಕೋಟೆ ಪ್ರದೇಶ, ಇಟಗಿ, ಸಣಾಪುರದ ನದಿ ಪಾತ್ರದಲ್ಲಿ ರೈತರ ಬೆಳೆಗಳು ನೀರು ಪಾಲಾಗಿವೆ. ನದಿ ಪ್ರವಾಹ ಇಳಿದ ತಕ್ಷಣ ಅಧಿಕಾರಿಗಳ ಸರ್ವೆ ನಡೆಸಿ, ಬೆಳೆ ನಷ್ಟ ಪರಿಹಾರ ಒದಗಿಸಿದರೆ, ರೈತರ ಉಳಿಸಬಹುದು ಎನ್ನಲಾಗುತ್ತಿದೆ.
ಕಾಳಜಿ ಕೇಂದ್ರ: ಇಲ್ಲಿನ ನಿರಾಶ್ರಿತರಿಗಾಗಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ೫೭ ಕುಟುಂಬಗಳ ಪಟ್ಟಿ ಮಾಡಿದ್ದು, ಹೆಚ್ಚಿನ ಪ್ರವಾಹ ಉಂಟಾದರೆ, ಉಪಹಾರ, ಊಟದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಂಪ್ಲಿ-ಕೋಟೆಯ ಹೊಳೆ ಆಂಜನೇಯ ದೇವಸ್ಥಾನಕ್ಕೆ ನೀರು ನುಗ್ಗಿ, ಜಲಾವೃತವಾಗಿದೆ. ಇಲ್ಲಿನ ಸಣಾಪುರ ಗ್ರಾಪಂಯ ಇಟಗಿ ಸಂಪರ್ಕದ ರಸ್ತೆಯು ನದಿ ಹಿನ್ನೀರಿನಿಂದ ಜಲಾವೃತವಾಗಿದ್ದು, ಜನರಿಗೆ ತೊಂದರೆ ಉಂಟಾಗಿದೆ. ಇಲ್ಲಿನ ಗ್ರಾಮಗಳು ಜನರು ಬೇರೆ ಮಾರ್ಗದಲ್ಲಿ ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಮೋಟರ್ ರಕ್ಷಿಸಿಕೊಂಡ ರೈತರು : ನದಿ ಪಾತ್ರದಲ್ಲಿರುವ ರೈತರು ನೀರಿನಲ್ಲಿ ಮುಳುಗಡೆಯ ಭೀತಿಯಲ್ಲಿರುವ ಮೋಟರ್ಗಳನ್ನು ರಕ್ಷಿಸಿಕೊಂಡಿದ್ದಾರೆ. ಕೆಲವೊಂದು ಮೋಟರ್ಗಳು ನೀರಿನಲ್ಲಿ ಮುಳುಗಿವೆ. ಇಲ್ಲಿನ ನೆರೆ ಹಾವಳಿ ಮುಂದುವರಿದಿದ್ದು, ಸೇತುವೆ ಮೇಲೆ ನಾಲ್ಕು ಅಡಿಯಷ್ಟು ನೀರು ಹರಿಯುತ್ತಿದ್ದು, ಸಂಪರ್ಕ ಕಡಿತಗೊಂಡು, ಅಸ್ತವ್ಯಸ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
Kustagi: ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದು ಕಣ್ಣು ಕಳೆದುಕೊಂಡ ವ್ಯಕ್ತಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.