K.N. Rajanna: ಮುಡಾ ನಿವೇಶನ ವಾಪಸ್ ನೀಡಿ ಆರೋಪ ಮಾಡಲಿ; ರಾಜಣ್ಣ
Team Udayavani, Jul 27, 2024, 9:11 PM IST
ತುಮಕೂರು: ವಿಪಕ್ಷಗಳ ನಾಯಕರು ಮುಡಾದಲ್ಲಿ ಈ ಹಿಂದೆಯೇ ನಿವೇಶನ ಪಡೆದು ಫಲಾನುಭವಿಗಳಾಗಿದ್ದಾರೆ. ಅವರು ಪಡೆದಿರುವ ನಿವೇಶನಗಳನ್ನು ವಾಪಸ್ ಕೊಟ್ಟು ಅನಂತರ ಮುಖ್ಯಮಂತ್ರಿಗಳ ಬಗ್ಗೆ ಆರೋಪ ಮಾಡಲಿ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪತ್ರಿಕಾಗೋಷ್ಠಿಯಲ್ಲಿ ಸವಾಲೆಸೆದರು.
ಅಹಿಂದ ವರ್ಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯುವ ಪ್ರಯತ್ನವನ್ನು ವಿಪಕ್ಷಗಳು ನಿರಂತರವಾಗಿ ಮುಂದುವರಿಸಿದರೆ ಅಹಿಂದ ವರ್ಗಗಳು ಸೇರಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. “ನಾ ಕಳ್ಳ, ಪರರನ್ನು ನಂಬ’ ಎಂಬ ಗಾದೆಯಂತಾಗಿದೆ ವಿಪಕ್ಷದವರ ಆರೋಪ ಎಂದರು.
ನಿವೇಶನ ಹಿಂದಿರುಗಿಸಿ ಪಾದಯಾತ್ರೆ ಮಾಡಲಿ: ಸಚಿವ ರಾಜಣ್ಣ ತಿರುಗೇಟು:
ಬೆಂಗಳೂರು: ಮುಡಾ ಹಗರಣ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ- ಜೆಡಿಎಸ್ಗೆ ತಿರುಗೇಟು ಕೊಡಲು ನಿರ್ಧರಿಸಿರುವ ಕಾಂಗ್ರೆಸ್ನ ಅಹಿಂದ ನಾಯಕರು ಜಿಲ್ಲಾಮಟ್ಟದಿಂದ ರಾಜ್ಯಮಟ್ಟದವರೆಗೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಸಹಕಾರ ಸಚಿವ ಕೆ.ಎನ್. ರಾಜಣ್ಣ “ಉದಯವಾಣಿ’ ಜತೆ ಮಾತನಾಡಿ, ಬಿಜೆಪಿ-ಜೆಡಿಎಸ್ನವರು ನಿವೇಶನಗಳನ್ನು ವಾಪಸ್ ಕೊಟ್ಟು ಪಾದಯಾತ್ರೆ ಆರಂಭಿಸಲಿ ಎಂದರು. ಅಹಿಂದದಿಂದ ಆರಂಭಿಕವಾಗಿ ಮುಂದಿನ ವಾರ ತುಮಕೂರು ಜಿಲ್ಲೆಯಲ್ಲಿ ಅಹಿಂದ ಪ್ರತಿಭಟನೆ ನಡೆಯಲಿದೆ. ಅನಂತರ ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಸಿ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ ಇಲ್ಲವೇ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.