Mudbidri: ಕಾರು ಢಿಕ್ಕಿ; ಸೈಕಲ್ ಸವಾರ ಸಾವು
Team Udayavani, Jul 27, 2024, 10:32 PM IST
ಮೂಡುಬಿದಿರೆ: ಕೆಲವು ದಶಕಗಳಿಂದ ಮೂಡುಬಿದಿರೆಯ ವಾರದ ಸಂತೆಯಲ್ಲಿ ಚಕ್ಕುಲಿ ಮತ್ತಿತರ ಕರಿದ ತಿಂಡಿ, ಸೋಜಿ ಮೊದಲಾದ ಪಾನೀಯ ಮಾರಾಟ ಮಾಡುತ್ತಿದ್ದ ಪುತ್ತಿಗೆ ಪದವು ಹಂಡೇಲು ನಿವಾಸಿ ರಮೇಶ ಅಂಚನ್ (65) ಶುಕ್ರವಾರ ಹಂಡೇಲು ಮಸೀದಿ ಬಳಿ ತನ್ನ ಸೈಕಲ್ನಲ್ಲಿ ಹೋಗುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ತೀವ್ರ ಗಾಯಗೊಂಡ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಮೃತ ಪಟ್ಟಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಮಾರುಕಟ್ಟೆ ಸ್ವರಾಜ್ಯ ಮೈದಾನಕ್ಕೆ ಸ್ಥಳಾಂತರವಾದ ಬಳಿಕ ಅವರು ಪುತ್ತಿಗೆ ಪಂಚಾಯತ್ನ ಪಂಪ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಅವರು 18 ಬಾರಿ ಶಬರಿಮಲೆ ಯಾತ್ರೆಯನ್ನು ಕೈಗೊಂಡಿದ್ದು ಗುರುಸ್ವಾಮಿಯಾಗಿಯೂ ಹಲವರಿಗೆ ಮಾರ್ಗದರ್ಶನ ನೀಡಿದ್ದರು. ಅವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.