T20 Cricket:  ಶ್ರೀಲಂಕಾ ವಿರುದ್ಧ 43 ರನ್‌ಗಳಿಂದ ಗೆದ್ದ ಭಾರತ

ಅಬ್ಬರದ ಆರಂಭ ಒದಗಿಸಿದ ಉಭಯ ತಂಡಗಳು, ಬಿರುಸಿನ ಅರ್ಧಶತಕ ಸಿಡಿಸಿ ನಾಯಕನ ಆಟವಾಡಿದ ಸೂರ್ಯ ಕುಮಾರ್‌ ಯಾದವ್‌

Team Udayavani, Jul 27, 2024, 11:29 PM IST

Team-India

ಪಲ್ಲೆಕೆಲೆ: ಟಿ20 ವಿಶ್ವ ಚಾಂಪಿಯನ್‌ ಭಾರತ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು 43 ರನ್ನುಗಳಿಂದ ಮಣಿಸಿ ಶುಭಾರಂಭ ಮಾಡಿದೆ. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ 7 ವಿಕೆಟಿಗೆ 213 ರನ್‌ ಪೇರಿಸಿದರೆ, ಶ್ರೀಲಂಕಾ 19.2 ಓವರ್‌ಗಳಲ್ಲಿ 170ಕ್ಕೆ ಆಲೌಟ್‌ ಆಯಿತು.

ಅಬ್ಬರದ ಆರಂಭ
ಭಾರತದ ಆರಂಭ ಅಬ್ಬರದಿಂದ ಕೂಡಿತ್ತು. ಜೈಸ್ವಾಲ್‌ ಮೊದಲ ಎಸೆತವನ್ನೇ ಬೌಂಡರಿಗೆ ಬಡಿದಟ್ಟಿ ಸ್ಫೋಟಕ ಆಟದ ಸೂಚನೆಯಿತ್ತರು. ಪವರ್‌ ಪ್ಲೇಯಲ್ಲಿ ಜೈಸ್ವಾಲ್‌-ಗಿಲ್‌ ಸೇರಿಕೊಂಡು ಲಂಕಾ ದಾಳಿಯನ್ನು ಪುಡಿಗಟ್ಟಿದರು. ರನ್‌ ಸರಾಗವಾಗಿ ಹರಿದುಬರತೊಡಗಿತು. ಇನ್ನೇನು 6 ಓವರ್‌ ಮುಗಿಯಬೇಕು ಎನ್ನುವಷ್ಟರಲ್ಲಿ ಲಂಕಾ ಮೊದಲ ಯಶಸ್ಸು ಸಾಧಿಸಿತು.

ಪವರ್‌ ಪ್ಲೇಯ ಕೊನೆಯ ಎಸೆತದಲ್ಲಿ ಗಿಲ್‌ ವಿಕೆಟ್‌ ಬಿತ್ತು. ಮೊದಲ ವಿಕೆಟಿಗೆ 74 ರನ್‌ ಹರಿದು ಬಂತು. ಗಿಲ್‌ ಗಳಿಕೆ 16 ಎಸೆತಗಳಿಂದ 34 ರನ್‌ (6 ಫೋರ್‌, 1 ಸಿಕ್ಸರ್‌). ಈ ವಿಕೆಟ್‌ ಮದುಶಂಕ ಪಾಲಾಯಿತು. ಶ್ರೀಲಂಕಾ ವಿರುದ್ಧ ಪವರ್‌ ಪ್ಲೇಯಲ್ಲಿ ಭಾರತ ಗಳಿಸಿದ ಅತ್ಯಧಿಕ ರನ್‌ ಇದಾಗಿದೆ.

7ನೇ ಓವರ್‌ನಲ್ಲಿ ದಾಳಿಗೆ ಇಳಿದ ವನಿಂದು ಹಸರಂಗ ಮೊದಲ ಎಸೆತದಲ್ಲೇ ದೊಡ್ಡದೊಂದು ಬೇಟೆಯಾಡಿದರು. ಮುನ್ನುಗ್ಗಿ ಬಂದ ಜೈಸ್ವಾಲ್‌ ಸ್ಟಂಪ್ಡ್ ಆದರು. ಜೈಸ್ವಾಲ್‌ ಕೊಡುಗೆ 21 ಎಸೆತಗಳಿಂದ 40 ರನ್‌. ಸಿಡಿಸಿದ್ದು 5 ಬೌಂಡರಿ, 2 ಸಿಕ್ಸರ್‌. ಹೀಗೆ ಸತತ 2 ಎಸೆತಗಳಲ್ಲಿ 2 ವಿಕೆಟ್‌ ಉಡಾಯಿಸಿದ ಶ್ರೀಲಂಕಾ ನಿಟ್ಟುಸಿರೆಳೆಯಿತು. ಆದರೆ ಭಾರತದ ಓಟದ ಗತಿಗೇನೂ ತೊಂದರೆ ಆಗಲಿಲ್ಲ. ನಾಯಕ ಸೂರ್ಯಕುಮಾರ್‌ ಯಾದವ್‌ ಸಿಡಿಯಲಾರಂಭಿಸಿದರು. ಅರ್ಧ ಹಾದಿ ಕ್ರಮಿಸುವಾಗ ಭಾರತದ ಸ್ಕೋರ್‌ 2ಕ್ಕೆ 111 ರನ್‌ ಆಗಿತ್ತು.

ನಾಯಕನ ಜವಾಬ್ದಾರಿಯ ನಡುವೆಯೂ ದಿಟ್ಟ ಬ್ಯಾಟಿಂಗ್‌ ಪ್ರದರ್ಶಿಸಿದ ಸೂರ್ಯ 20ನೇ ಅರ್ಧ ಶತಕ ಬಾರಿಸಿ ಮಿಂಚಿದರು. ಇದು ಲಂಕಾ ವಿರುದ್ಧ ಆಡಿದ 6 ಪಂದ್ಯಗಳಲ್ಲಿ ಸೂರ್ಯ ಸಿಡಿಸಿದ 4ನೇ 50 ಪ್ಲಸ್‌ ಗಳಿಕೆ. ಇದರಲ್ಲಿ ಒಂದು ಶತಕವೂ ಸೇರಿದೆ. ಸೂರ್ಯ 26 ಎಸೆತಗಳಿಂದ 58 ರನ್‌ ಸಿಡಿಸಿದರು (8 ಬೌಂಡರಿ, 2 ಸಿಕ್ಸರ್‌). ಸೂರ್ಯ-ಪಂತ್‌ ಜೋಡಿಯಿಂದ 7.1 ಓವರ್‌ಗಳಲ್ಲಿ 76 ರನ್‌ ಒಟ್ಟುಗೂಡಿತು. ರಿಷಭ್‌ ಪಂತ್‌ ಆರಂಭದಲ್ಲಿ ತೀರಾ ನಿಧಾನಿಯಾಗಿದ್ದರು. ಸೂರ್ಯ ಔಟಾದ ಬಳಿಕ ಬಿರುಸಿನ ಆಟಕ್ಕಿಳಿದು 49 ರನ್‌ ಮಾಡಿದರು (33 ಎಸೆತ, 6 ಬೌಂಡರಿ, 1 ಸಿಕ್ಸರ್‌).

ನಿಸ್ಸಂಕ-ಮೆಂಡಿಸ್‌ ಬಿರುಸು
ಭಾರತದಂತೆ ಲಂಕಾ ಆರಂಭವೂ ಬಿರುಸಿನಿಂದ ಕೂಡಿತ್ತು. ಪಥುಮ್‌ ನಿಸ್ಸಂಕ-ಕುಸಲ್‌ ಮೆಂಡಿಸ್‌ 8.4 ಓವರ್‌ಗಳಿಂದ 84 ರನ್‌ ಪೇರಿಸಿದರು. ನಿಸ್ಸಂಕ 48 ಎಸೆತಗಳಿಂದ 79 (7 ಬೌಂಡರಿ, 4 ಸಿಕ್ಸರ್‌), ಮೆಂಡಿಸ್‌ 45 ರನ್‌ ಬಾರಿಸಿದರು. ಪರಾಗ್‌ ಕೇವಲ 5 ರನ್‌ ವೆಚ್ಚದಲ್ಲಿ 3 ವಿಕೆಟ್‌ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌: ಭಾರತ-7 ವಿಕೆಟಿಗೆ 213 (ಸೂರ್ಯಕುಮಾರ್‌ 58, ಪಂತ್‌ 49, ಜೈಸ್ವಾಲ್‌ 40, ಗಿಲ್‌ 34, ಪತಿರಣ 40ಕ್ಕೆ 4). ಶ್ರೀಲಂಕಾ-19.2 ಓವರ್‌ಗಳಲ್ಲಿ 170 (ನಿಸ್ಸಂಕ 79, ಮೆಂಡಿಸ್‌ 45, ಪರಾಗ್‌ 5ಕ್ಕೆ 3, ಅರ್ಷದೀಪ್‌ 24ಕ್ಕೆ 2, ಅಕ್ಷರ್‌ 38ಕ್ಕೆ 2).

ಪಂದ್ಯಶ್ರೇಷ್ಠ: ಸೂರ್ಯಕುಮಾರ್‌ ಯಾದವ್‌

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.