SC, ST Welfare Grant: ಹಿಂದುಳಿದ ವರ್ಗಕ್ಕೆ ಮೀಸಲಿಟ್ಟ 312 ಕೋ. ರೂ. ವಾಪಸ್‌!

1,093 ಸಮುದಾಯ ಭವನ, ಹಾಸ್ಟೆಲ್‌ಗ‌ಳ ಕಾಮಗಾರಿಗಳ ಮಂಜೂರಾತಿ ರದ್ದು

Team Udayavani, Jul 28, 2024, 7:20 AM IST

vidhana-Soudha

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ ಎಂಬ ಆರೋಪದ ನಡುವೆಯೇ ಸರಕಾರ ಹಿಂದುಳಿದ ವರ್ಗಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಮಂಜೂರಾಗಿದ್ದ ನೂರಾರು ಕೋಟಿ ರೂ.ಗಳನ್ನು ವಾಪಸ್‌ ಪಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ 2022-23ನೇ ಸಾಲಿನಲ್ಲಿ 1,093 ಸಂಘ-ಸಂಸ್ಥೆಗಳಿಗೆ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯ ಕಾಮಗಾರಿಗಳಿಗೆ 312.13 ಕೋಟಿ ರೂ. ಸಹಾಯಧನ ಮಂಜೂರು ಮಾಡಲಾಗಿತ್ತು. ಇದೀಗ ಸಾಮೂಹಿಕವಾಗಿ ಮಂಜೂರಾತಿ ಆದೇಶವನ್ನೇ ರದ್ದುಪಡಿಸುವ ಮೂಲಕ ಹಿಂದುಳಿದ ವರ್ಗಗಳಿಗೆ ಆಘಾತ ಉಂಟುಮಾಡಿದೆ.

ಬಜೆಟ್‌ನಲ್ಲಿ ಅನುದಾನ ಒದಗಿಸದಿದ್ದರೂ ಈ ಹಿಂದಿನ ವರ್ಷಗಳಲ್ಲಿ 1,093 ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳಿಗೆ ಅನುದಾನ ನೀಡಿ ಆದೇಶ ಹೊರಡಿಸಿರುವುದು ಸರಿಯಲ್ಲ. ಆಯಾ ವರ್ಷಗಳಲ್ಲಿ ಅನುದಾನ ಒದಗಿಸಿಕೊಳ್ಳದ ಕಾರಣ ಮಂಜೂರಾತಿಯನ್ನು ರದ್ದುಪಡಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಖ್ಯಮಂತ್ರಿ ಸೂಚಿಸಿದ್ದರು.

2014ರಲ್ಲಿ ಯೋಜನೆ ಜಾರಿ
ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ 2014ರಲ್ಲಿ ಈ ಯೋಜನೆಯನ್ನು ಪರಿಚಯಿಸಲಾಯಿತು. ಅದರಂತೆ ಸಮುದಾಯ ಭವನ/ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕಾಗಿ ಪಟ್ಟಣ ಪಂಚಾಯತ್‌/ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ 10 ಲಕ್ಷ ರೂ., ತಾಲೂಕು ಕೇಂದ್ರ ಸ್ಥಾನ 25 ಲಕ್ಷ ರೂ. ಹಾಗೂ ಜಿಲ್ಲಾ ಕೇಂದ್ರ ಸ್ಥಾನ 50 ಲಕ್ಷ ರೂ.ಗಳಂತೆ ಗರಿಷ್ಠ ಮಿತಿಗೊಳಪಟ್ಟು ಪ್ರವರ್ಗ- 2, 2ಎ, 3ಎ, 3ಬಿಗೆ ಸೇರಿದ ಜಾತಿಗಳ ನೋಂದಾಯಿತ ಸ್ವಯಂ ಸೇವಾ ಸಂಘ-ಸಂಸ್ಥೆ ಅಥವಾ ಟ್ರಸ್ಟ್‌ಗಳಿಗೆ ಸಹಾಯಧನ ಮಂಜೂರು ಮಾಡಲಾಗುತ್ತದೆ. ಈ ಅನುದಾನದ ಮಿತಿಯನ್ನು ಅಗತ್ಯ ಸಂದರ್ಭಗಳಲ್ಲಿ ಸಡಿಲಗೊಳಿಸಿ ವಿಶೇಷ ಪ್ರಕರಣವೆಂದು ಪರಿಗಣಿಸಿ, ಹೆಚ್ಚುವರಿಯಾಗಿ ಮಂಜೂರು ಮಾಡಲಿಕ್ಕೂ ಅವಕಾಶ ಕಲ್ಪಿಸಲಾಗಿದೆ.

ಮೂಲಗಳ ಪ್ರಕಾರ ಈ ಹಿಂದೆಯೂ ಹಲವು ಸಂಘ-ಸಂಸ್ಥೆಗಳ ದಾಖಲೆಗಳ ಕೊರತೆ, ಬಜೆಟ್‌ ಮುಗಿದ ಅನಂತರ ಅರ್ಜಿ ಸಲ್ಲಿಕೆ ಯಂತಹ ಕಾರಣಗಳಿಗಾಗಿ ಮಂಜೂರಾತಿ ರದ್ದುಪಡಿಸಲಾಗುತ್ತದೆ. ಆದರೆ ಸಾಮೂಹಿಕವಾಗಿ ಸಾವಿರಕ್ಕೂ ಅಧಿಕ ಸಂಘ-ಸಂಸ್ಥೆಗಳ ಮಂಜೂರಾತಿ ರದ್ದುಪಡಿಸಿರುವುದು ಇದೇ ಮೊದಲು ಎನ್ನಲಾಗಿದೆ. 73 ಸಂಘ-ಸಂಸ್ಥೆಗಳಿಗೆ ಮೊದಲ ಕಂತು ಬಿಡುಗಡೆ ಮಾಡಬೇಕಿತ್ತು. ಅದು ಕೂಡ ಇದರಲ್ಲಿ ಸೇರಿದೆ.

ಈ ಅನುದಾನವನ್ನು ಸರಕಾರಿ ಹಿಂದುಳಿದ ವರ್ಗಗಳ ಹಾಸ್ಟೆಲ್‌ಗ‌ಳ ಮೂಲಸೌಕರ್ಯ ವೃದ್ಧಿಗೆ ವಿನಿಯೋಗಿಸಿದರೆ ಹೆಚ್ಚು ಸೂಕ್ತ ಎಂಬಅಭಿಪ್ರಾಯವೂ ಆ ಸಮುದಾಯಗಳಿಂದ ಕೇಳಿಬರುತ್ತಿದೆ.

ಸಂಘ-ಸಂಸ್ಥೆಗಳಿಗೂ ಕತ್ತರಿ?
2,400ಕ್ಕೂ ಅಧಿಕ ಸಂಘ-ಸಂಸ್ಥೆಗಳಿಗೆ ಇದೇ ಸಮುದಾಯ ಭವನ/ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕಾಗಿ ಎರಡು ಮತ್ತು ಮೂರನೇ ಕಂತಿನಲ್ಲಿ ಅಂದಾಜು 559 ಕೋಟಿ ರೂ. ಬಿಡುಗಡೆ ಆಗಬೇಕಿದೆ. ಆದರೆ ಬಜೆಟ್‌ ಇರುವುದೇ 100 ಕೋಟಿ ರೂ. ಹಾಗಾಗಿ ಆ ಸಂಘ-ಸಂಸ್ಥೆಗಳಲ್ಲೂ ಕೆಲವರಿಗೆ ಸಹಾಯಧನದಲ್ಲಿ ಈ ಬಾರಿ ಕತ್ತರಿ ಬೀಳುವ ಸಾಧ್ಯತೆ ಇದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಗಳು “ಉದಯವಾಣಿ’ಗೆ ತಿಳಿಸಿವೆ.


-ವಿಜಯ ಕುಮಾರ ಚಂದರಗಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.