MUDA ಅಧ್ಯಕ್ಷರ ಜತೆ ಸಿಎಂ ಸಿದ್ದರಾಮಯ್ಯ ಗುಪ್ತ ಮಾತುಕತೆ
ಪತ್ನಿಗೆ ಹಂಚಿಕೆಯಾಗಿರುವ ನಿವೇಶನ ಸಂಬಂಧ ಅನಗತ್ಯ ಹೇಳಿಕೆ ನೀಡದಂತೆ ಸೂಚನೆ?
Team Udayavani, Jul 28, 2024, 6:32 AM IST
ಮೈಸೂರು: ವಿಪಕ್ಷಗಳ ಬಾಯಿಗೆ ಆಹಾರವಾಗಿರುವ ಮುಡಾ ಬಹುಕೋಟಿ ರೂಪಾಯಿ ಹಗರಣದಿಂದ ವಿಚಲಿತರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಶನಿವಾರ ಬೆಳಗ್ಗೆ ಮುಡಾ ಅಧ್ಯಕ್ಷ ಕೆ. ಮರೀಗೌಡರ ಜತೆ 15 ನಿಮಿಷ ಕಾಲ ಗುಪ್ತ ಮಾತುಕತೆ ನಡೆಸಿದರು.
ಶುಕ್ರವಾರವಷ್ಟೇ ವಿಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ವಿಧಾನಸೌಧದಲ್ಲಿ ದಾಖಲೆ ಬಿಡುಗಡೆ ಮಾಡಿದ್ದ ಸಿದ್ದರಾಮಯ್ಯ ಸಂಜೆ ಮೈಸೂ ರಿಗೆ ಆಗ ಮಿಸಿದ್ದರು. ಶನಿವಾರ ಬೆಳಗ್ಗೆ ಮುಡಾ ಅಧ್ಯಕ್ಷರನ್ನು ಮನೆಗೆ ಕರೆಸಿಕೊಂಡು ಎಲ್ಲರನ್ನೂ ಹೊರಗೆ ಕಳಿಸಿ ಚರ್ಚಿಸಿದರು.
ಮುಡಾ ನಿವೇಶನ ಹಂಚಿಕೆ, ಶೇ. 50:50 ಅನುಪಾತದಲ್ಲಿ ಆಗಿರುವ ನಿವೇಶನ ಹಂಚಿಕೆಯಲ್ಲಿ ವಿಪಕ್ಷಗಳ ಯಾವ್ಯಾವ ನಾಯಕರು ನಿಯಮ ಬಾಹಿರವಾಗಿ ನಿವೇಶನ ಪಡೆದಿದ್ದಾರೆ ಎಂಬೆಲ್ಲ ಮಾಹಿತಿಯನ್ನು ಪಡೆದಿದ್ದಾರೆ ಎನ್ನಲಾಗಿದೆ. ಜತೆಗೆ ತನ್ನ ಪತ್ನಿಗೆ ಹಂಚಿಕೆಯಾಗಿರುವ ನಿವೇಶನ ಸಂಬಂಧ ಯಾರೂ ಅನಗತ್ಯವಾಗಿ ಮಾಧ್ಯಮದವರ ಮುಂದೆ ಹೇಳಿಕೆ ನೀಡ ದಂತೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಮಾಧ್ಯಮಗಳಿಂದ ದೂರ
ಸಿದ್ದರಾಮಯ್ಯ ಶನಿವಾರ ಬೆಳಗ್ಗೆ 11ಕ್ಕೆ ಬೆಂಗಳೂರಿನತ್ತ ಪ್ರಯಾಣ ಬೆಳೆಸಬೇಕಿತ್ತಾದರೂ ಅವಧಿಗೂ ಮುನ್ನವೇ ನಿರ್ಗಮಿಸಿದರು. ಮಾತನಾಡಿಸಲು ಕಾಯುತ್ತಿದ್ದ ಸುದ್ದಿಗಾರರನ್ನು ನೋಡಿಯೂ ನೋಡದಂತೆ ಹೋದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.