![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 28, 2024, 10:48 AM IST
ಹುಣಸೂರು: ಸಾಲಗಾರರ ಕಾಟಕ್ಕೆ ಹೆದರಿ ಆಟೋ ಚಾಲಕ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಕುಟುವಾಡಿಯಲ್ಲಿ ನಡೆದಿದೆ.
ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಟುವಾಡಿ ಗ್ರಾಮದ ಆಟೋ ಚಾಲಕ ಪ್ರಸಾದ್ (29) ಜುಲೈ 20 ರಂದು ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದವರು ಆಟೋದಲ್ಲಿ ಹುಡುಕಾಡಿದ ವೇಳೆ ಡೆತ್ ನೋಟ್ ಪತ್ತೆಯಾಗಿದ್ದು, ತಾನು ಪೈನಾನ್ಸ್ ಮಧು ಎಂಬಾತನಿಂದ ಸ್ನೇಹಿತ ಟೆಂಪೋ ಕಿರಣ್ ರವರ ಜಾಮೀನು ನೀಡಿ 5 ಲಕ್ಷ ರೂ. ಸಾಲ ಪಡೆದಿದ್ದು, ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಇವರು ನಿತ್ಯ ಮನೆಗೆ ಬಂದು ಕೂಗಾಟ ನಡೆಸಿ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆಂದು ಪತ್ನಿ ಲಕ್ಷ್ಮಿ ಬಿಳಿಕೆರೆ ಠಾಣೆಗೆ ದೂರು ನೀಡಿದ್ದರು.
ಶವವಾಗಿ ಪತ್ತೆ:
ನಾಪತ್ತೆಯಾಗಿದ್ದ ಪ್ರಸಾದ್ ಶವ ಸರಗೂರು ತಾಲೂಕಿನ ಕಪಿಲಾ ನದಿ ದಂಡೆಯ ಸೋಮೇಶ್ವರ ದೇವಾಲಯದ ಬಳಿ ಪತ್ತೆಯಾಗಿದ್ದು, ಈ ಸಂಬಂಧ ಸರಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು. ಶವವನ್ನು ಶವಾಗಾರಕ್ಕೆ ಸಾಗಿಸಿ, ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.