Hubballi: ನೆರೆಯಬ್ಬರಕ್ಕೆ ದ್ವೀಪವಾದ ಗ್ರಾಮಗಳು!
ರಾಜ್ಯದಲ್ಲಿ ಅನಾಹುತ ತಂದ ಮಹಾರಾಷ್ಟ್ರ ಮಳೆ ಸಂತ್ರಸ್ತರು ಕಾಳಜಿ ಕೇಂದ್ರಕ್ಕೆ
Team Udayavani, Jul 28, 2024, 11:18 AM IST
ಹುಬ್ಬಳ್ಳಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉತ್ತರ ಕರ್ನಾಟಕದ ಮೂರ್ನಾಲ್ಕು ಜಿಲ್ಲೆಗಳಲ್ಲಿ ನದಿ ತಟದ ಗ್ರಾಮಗಳು ಜಲಾವೃತವಾಗಿವೆ.
ಬೆಳಗಾವಿ, ಬಾಗಲಕೋಟೆ, ವಿಜಯ ಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಎದುರಾಗಿದ್ದು, ನೀರಿನಿಂದ ಸುತ್ತುವರಿದು ಸಂಪರ್ಕ ಕಳೆದುಕೊಂಡ ಹಳ್ಳಿಗಳ ಜನರನ್ನು ಸುರಕ್ಷಿತವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯಲ್ಲೇ 10ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ಮಲೆನಾಡಿನ ಶಿವಮೊಗ್ಗ- ಚಿಕ್ಕ ಮಗಳೂರು ಜಿಲ್ಲೆಯಲ್ಲೂ ನದಿಗಳು ಉಕ್ಕಿಹರಿದು ಕೆಲವು ಗ್ರಾಮಗಳು ಹೊರಜಗತ್ತಿನ ಸಂಪರ್ಕ ಕಳೆದುಕೊಂಡಿವೆ.
ಬೆಳಗಾವಿ ಜಿಲ್ಲೆಯಲ್ಲಿ 41 ಸೇತುವೆಗಳ ಮೇಲೆ ಪ್ರವಾಹ ಬಂದು ಸಂಚಾರ ಅಸ್ತವ್ಯಸ್ತಗೊಂಡಿದೆ. ರಾಯಚೂರಿನಲ್ಲೂ ಕೆಲವು ಸೇತುವೆ ಗಳು ಮುಳುಗಡೆಯಾಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ವಿಜಯಪುರದಲ್ಲೂ ಯಾವುದೇ ಕ್ಷಣ ಕೆಲವು ಗ್ರಾಮಗಳು ಜಲಾವೃತವಾಗುವ ಸನ್ನಿ ವೇಶ ಸೃಷ್ಟಿಯಾಗಿದೆ. ಬಳ್ಳಾರಿ- ಕೊಪ್ಪಳ ಜಿಲ್ಲೆಯಲ್ಲೂ ಸೇತುವೆಗಳ ಮೇಲೆ ನೀರು ಬಂದು ಸುತ್ತ ಮುತ್ತಲಿನ ಗ್ರಾಮಗಳ ಜನರು ಪರದಾಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.