Fraud: 2 ಕೋಟಿ ಸಾಲ ಪಡೆದು ಭೋಗ್ಯದಾರರಿಗೆ ವಂಚನೆ; ಮನೆ ಮಾಲಕಿ ಬಂಧನ
Team Udayavani, Jul 28, 2024, 11:27 AM IST
ಬೆಂಗಳೂರು: ಒಂದೇ ಕಟ್ಟಡದಲ್ಲಿ ವಾಸವಾಗಿದ್ದ 17 ಮಂದಿ ಮನೆ ಭೋಗ್ಯದಾರರಿಗೆ ಸುಮಾರು 2 ಕೋಟಿ ರೂ. ವಂಚಿಸಿದ ಆರೋಪದಡಿ ಮನೆ ಮಾಲೀಕಿಯನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಂಗೊಂಡನಹಳ್ಳಿ ನಿವಾಸಿ ಸುಧಾ(45) ಬಂಧಿತೆ. ಆಕೆಯ ವಿರುದ್ಧ ಮೊಹಮ್ಮದ್ ನಹೀಂ ಸೇರಿ 17 ಮಂದಿ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿತ ಸುಧಾ ಗಂಗೊಂಡನಹಳ್ಳಿಯ ಎಸ್.ಎನ್. ಲುಮಿನೋಸ್ ಅಪಾರ್ಟ್ ಮೆಂಟ್ ನಿರ್ಮಿಸಿದ್ದಾರೆ. 5 ಮಹಡಿಗಳಿರುವ ಅಪಾರ್ಟ್ಮೆಂಟ್ನಲ್ಲಿ 17 ಮನೆಗಳನ್ನು ಭೋಗ್ಯಕ್ಕೆ ನೀಡಿದ್ದರು. ಕಳೆದ ಜುಲೈ 11ರಂದು ಆರೋಪಿತೆ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ 2 ಕೋಟಿ ರೂ. ಗೃಹ ಸಾಲ ಪಡೆದುಕೊಂಡಿದ್ದರು. ಆದರೆ, ಸಾಲ ತೀರಿಸದ ಹಿನ್ನೆಲೆಯಲ್ಲಿ ಬ್ಯಾಂಕ್ ಅಧಿಕಾರಿಗಳು ಅಪಾರ್ಟ್ಮೆಂಟ್ ವಶಕ್ಕೆ ಪಡೆಯಲು ಬಂದಾಗ ವಂಚನೆಗೊಳಗಾಗಿರುವುದು ಭೋಗ್ಯದಾರರಿಗೆ ಗೊತ್ತಾಗಿದೆ. ಇದೀಗ ಭೋಗ್ಯದಾರರು ಲೀಸ್ಗೆ ನೀಡಿದ ಹಣವೂ ಇಲ್ಲದೇ, ಇದ್ದ ಮನೆಯಲ್ಲಿಯೂ ಇರಲಾರದೇ ಅತಂತ್ರ ಸ್ಥಿತಿಯಲ್ಲಿದ್ದಾರೆ. 17 ಮಂದಿ ಭೋಗ್ಯದಾರರಿಂದ ಹಣ ಪಡೆದಿರುವುದಲ್ಲದೇ, ಸಾಲದ ವಿಚಾರವಾಗಿ ಬ್ಯಾಂಕ್ನಿಂದ ನೋಟಿಸ್ ಬಂದಿರುವುದನ್ನು ತಿಳಿಸದೇ ವಂಚಿಸಲಾಗಿದೆ. ವಿಚಾರ ಗೊತ್ತಾಗಿ ಹಣ ಹಿಂತಿರುಗಿಸುವಂತೆ ಕೇಳಿದರೆ ಅಶ್ಲೀಲವಾಗಿ ನಿಂದಿಸಿ, ನಮ್ಮನ್ನು ರೌಡಿಗಳಿಂದ ಕೊಲೆ ಮಾಡಿಸುವುದಾಗಿ ಬೆದರಿಸಿ ನಂಬಿಕೆದ್ರೋಹವೆಸಗಿದ್ದಾರೆ ಎಂದು ದೂರಿನಲ್ಲಿ ಭೋಗ್ಯದಾರರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.