Paris; 10 ಮೀ ಏರ್ ರೈಫಲ್ ನಲ್ಲಿ ಫೈನಲ್ ತಲುಪಿದ ರಮಿತಾ; ಸಿಂಧು, ಶ್ರೀಜಾ, ಬಾಲರಾಜ್ ಮುನ್ನಡೆ


Team Udayavani, Jul 28, 2024, 3:39 PM IST

Paris; 10 ಮೀ ಏರ್ ರೈಫಲ್ ನಲ್ಲಿ ಫೈನಲ್ ತಲುಪಿದ ರಮಿತಾ; ಸಿಂಧು, ಶ್ರೀಜಾ, ಬಾಲರಾಜ್ ಮುನ್ನಡೆ

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ 2024ರ ಎರಡನೇ ದಿನದಾಟದಲ್ಲಿ ಭಾರತದ ಕ್ರೀಡಾಪಟುಗಳು ಪದಕ ನಿರೀಕ್ಷೆ ಹೆಚ್ಚಿಸಿದ್ದಾರೆ. ವನಿತಾ 10 ಮೀ ಏರ್ ರೈಫಲ್ ವಿಭಾಗದಲ್ಲಿ ರಮಿತಾ ಜಿಂದಾಲ್ ಫೈನಲ್ ಪ್ರವೇಶಿಸಿದ್ದಾರೆ.

ರಮಿತಾ ಕಳೆದ 20 ವರ್ಷಗಳಲ್ಲಿ ಮನು ಭಾಕರ್ ನಂತರ ಪದಕ ಸುತ್ತಿಗೆ ತಲುಪಿದ ಎರಡನೇ ಮಹಿಳಾ ಶೂಟರ್ ಆಗಿದ್ದಾರೆ. ರಮಿತಾ ತನ್ನ ಕೋಚ್ ಸುಮಾ ಶಿರೂರ್ (ಅಥೆನ್ಸ್ 2004) ನಂತರ ಒಲಿಂಪಿಕ್ ಫೈನಲ್‌ ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ರೈಫಲ್ ಶೂಟರ್.

ರಮಿತಾ 631.5 ಸ್ಕೋರ್ ಮಾಡಿದ್ದರಿಂದ ಅಂತಿಮ ಸರಣಿಯವರೆಗೂ ಅವರು ಕಟ್ ಮಾಡುವುದಿಲ್ಲ ಎಂದು ಭಾವಿಸಿದ್ದರು. ರಮಿತಾ ರ್ಯಾಂಕಿಂಗ್‌ನಲ್ಲಿ 5ನೇ ಸ್ಥಾನ ಪಡೆದು ಪದಕ ಸುತ್ತಿಗೆ ಲಗ್ಗೆ ಇಟ್ಟರು. ಕೊರಿಯಾದ ಹ್ಯೋಜಿನ್ ಬಾನ್ 634.5 ಅಂಕಗಳೊಂದಿಗೆ ಸುತ್ತಿನಲ್ಲಿ ಗೆದ್ದು ಒಲಿಂಪಿಕ್ ಅರ್ಹತಾ ದಾಖಲೆಯನ್ನೂ ನಿರ್ಮಿಸಿದರು.

ಮೊದಲ ಪಂದ್ಯ ಗೆದ್ದ ಸಿಂಧು

ಟೋಕಿಯೋ ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರು ಮೊದಲ ಪಂದ್ಯದಲ್ಲಿ ಸುಲಭ ಗೆಲುವು ಸಾಧಿಸಿದರು. ಮಹಿಳಾ ಸಿಂಗಲ್ಸ್ ಮೊದಲ ಪಂದ್ಯದಲ್ಲಿ ಎದುರಾದ ಮಾಲ್ಡೀವ್ಸ್ ನ ಫಾತಿಮಾತ್ ನಬಾಹ ಅವರನ್ನು 21-9, 21-6 ನೇರ ಸೆಟ್ ಗಳ ಅಂತರದಿಂದ ಸೋಲಿಸಿದರು.

ಈ ಪಂದ್ಯವು ಸಿಂಧು ಅವರಿಗೆ ಅಭ್ಯಾಸ ಪಂದ್ಯದಂತಿತ್ತು. ಅರ್ಧ ಗಂಟೆಯೊಳಗೆ ಪಂದ್ಯ ಮುಗಿಯಿತು.

ಕ್ವಾರ್ಟರ್ ಫೈನಲ್ ಗೆ ಬಾಲರಾಜ್ ಪನ್ವಾರ್

ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಏಕೈಕ ರೋವರ್ ಬಾಲರಾಜ್ ಪನ್ವಾರ್ ಅವರು ಪುರುಷರ ಸಿಂಗಲ್ಸ್ ಸ್ಕಲ್ಸ್ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ರವಿವಾರ ನಡೆದ ರಿಪಚೇಜ್‌ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಾಲರಾಜ್ ಎರಡನೇ ಸ್ಥಾನಿಯಾಗಿ ಮೂಡಿಬಂದರು. 7.12.41 ಸೆಕೆಂಡ್ ನಲ್ಲಿ ಬಾಲರಾಜ್ ಗುರಿ ತಲುಪಿದರು. ಮೊದಲ ಸ್ಥಾನಿಯಾದ ಮೊನಾಕೊದ ಕ್ವಿಂಟನ್ 7.10.00 ಸೆಕೆಂಡ್ ನಲ್ಲಿ ಗುರಿ ತಲುಪಿದರು.

ಶನಿವಾರದಂದು ಅವರ ಹೀಟ್‌ನಲ್ಲಿ ಆರಂಭದಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರು, ಅಲ್ಲಿ ಅಗ್ರ ಮೂರು ರೋವರ್‌ ಗಳು ಮಾತ್ರ ಕ್ವಾರ್ಟರ್‌ಫೈನಲ್‌ಗೆ ಅರ್ಹತೆ ಪಡೆದಿದ್ದರು, ಉಳಿದವರು ಮತ್ತೊಂದು ಅವಕಾಶಕ್ಕಾಗಿ ರಿಪಚೇಜ್‌ನಲ್ಲಿ ಸ್ಪರ್ಧಿಸಬೇಕಿತ್ತು. ಬಾಲರಾಜ್ ಭಾನುವಾರ ತಮ್ಮ ಪ್ರದರ್ಶನದೊಂದಿಗೆ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದ ನಾಲ್ಕನೇ ಭಾರತೀಯ ರೋವರ್ ಆದರು.

ಮೊದಲ ಪಂದ್ಯ ಗೆದ್ದ ಶ್ರೀಜಾ ಅಕುಲಾ

ಭಾರತದ ಯುವ ಟೇಬಲ್ ಟೆನ್ನಿಸ್ ಆಟಗಾರ್ತಿ ಶ್ರೀಜಾ ಅಕುಲಾ ಅವರು ಮೊದಲ ಪಂದ್ಯದಲ್ಲಿ ಸುಲಭವಾಗಿ ಗೆದ್ದರು. ಸ್ವಿಜರ್ ಲ್ಯಾಂಡ್ ನ ಕ್ರಿಸ್ಟಿನಾ ಕಲ್ ಬರ್ಗ್ ವಿರುದ್ದ 11-4, 11-9, 11-7,11-8 ನೇರ ಸೆಟ್ ಗಳ ಅಂತರದಿಂದ ಗೆದ್ದು ಮುಂದಿನ ಸುತ್ತು ತಲುಪಿದರು.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.