HDK Nose Bleed: ನನ್ನ ಆರೋಗ್ಯ ಸಂಪೂರ್ಣ ಹದಗೆಟ್ಟಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಕೆಲವೊಮ್ಮೆ ವಿಶ್ರಾಂತಿ ರಹಿತ, ಅಧಿಕ ಒತ್ತಡದ ಕೆಲಸದಿಂದ ಹೀಗಾಗುತ್ತದೆ: ಕೇಂದ್ರ ಸಚಿವ

Team Udayavani, Jul 28, 2024, 10:54 PM IST

HDK-Return

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುವ ಬಗ್ಗೆ ಬಿಜೆಪಿ- ಜೆಡಿಎಸ್‌ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿ ವೇಳೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ಉಂಟಾದ್ದರಿಂದ ತಕ್ಷಣವೇ  ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ.

ಜಯನಗರದ ಆಸ್ಪತ್ರೆಯಿಂದ ಬಿಡುಗಡೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ” ಅಭಿಮಾನಿಗಳು, ಕಾರ್ಯಕರ್ತರು ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ದೇವರು, ತಂದೆ, ತಾಯಿ ಆಶೀರ್ವಾದ ಇರುವವರೆಗೆ ನನಗೆ ಯಾವುದೇ ಅಪಾಯ ಆಗಲ್ಲ. ಯಾರು ಆತಂಕ ಪಡುವ ಅಗತ್ಯವಿಲ್ಲ.  ಹೃದಯಕ್ಕೆ ಸಂಬಂಧಿಸಿ ಈ ವರೆಗೆ ಮೂರು ಬಾರಿ ವಾಲ್ವ್‌ ಮರು ಜೋಡಣೆ ಕಾರಣಕ್ಕಾಗಿ ಬ್ಲಡ್‌ ಥಿನ್ನರ್‌ ಮಾತ್ರೆ ತೆಗೆದುಕೊಳ್ಳುತ್ತಿದ್ದೇನೆ. ರಕ್ತ ಹೆಪ್ಪುಗಟ್ಟದಿರಲಿ ಎಂಬ ಕಾರಣಕ್ಕೆ  ಆ ಮಾತ್ರೆ ತೆಗೆದುಕೊಳ್ಳುತ್ತಿದ್ದೇನೆ. ಕೆಲವೊಮ್ಮೆ ವಿಶ್ರಾಂತಿ ರಹಿತ, ಅಧಿಕ ಒತ್ತಡದಿಂದ ಕೆಲಸ ಮಾಡುವಾಗ ಈ ರೀತಿ ಮೂಗಿನಿಂದ ರಕ್ತ ಸೋರಿಕೆಯಾಗುವುದು ಸಹಜವಾಗಿದೆ” ಎಂದರು.

ವಿಶ್ರಾಂತಿಗೆ ಸೂಚನೆ; ಆರೋಗ್ಯ ಪೂರ್ಣ ಹದಗೆಟ್ಟಿಲ್ಲ:  

“ವಿಶ್ರಾಂತಿ ರಹಿತ ಕೆಲಸ ಮಾಡಬೇಡಿ, ವಿಶ್ರಾಂತಿ ಪಡೆಯುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ.  ಜನರ ನನಗೆ ಒಂದೊಂದು ಕ್ಷಣವೂ ಪ್ರಮುಖವಾಗಿದೆ. 92 ವರ್ಷದ ಎಚ್‌.ಡಿ.ದೇವೇಗೌಡರು ಸೋಮವಾರ  ರಾಜ್ಯಸಭೆಯಲ್ಲಿ ಮಾತನಾಡುವವರಿದ್ದಾರೆ. ಆಗ ಅಲ್ಲಿನ ಚರ್ಚೆಯಲ್ಲಿ ಭಾಗವಹಿಸಿ ಧ್ವನಿಗೂಡಿಸಬೇಕು ಎಂಬುದು ಮನಸ್ಸಿನಲ್ಲಿದೆʼ ಎಂದು ಎಚ್‌ಡಿಕೆ ಹೇಳಿದರು.

ಇದನ್ನೂ ಓದಿ: 
BJP-JDS Meet: ಸುದ್ದಿಗೋಷ್ಠಿ ವೇಳೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ !


ಪಾದಯಾತ್ರೆಗೆ ಇನ್ನೂ 1 ವಾರ ಇದೆ:
ಕಾಂಗ್ರೆಸ್‌  ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಬೆಂಗಳೂರು -ಮೈಸೂರು ಪಾದಯಾತ್ರೆಗೆ ಇನ್ನೂ ಒಂದು ವಾರ ಇದೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ರೂ ಪಾದಯಾತ್ರೆ ಮಾಡಬೇಕಿದೆ ನನಗೆ ಆರೋಗ್ಯ ಸಂಪೂರ್ಣ ಹದಗೆಟ್ಟಿಲ್ಲ ವಿಶ್ರಾಂತಿ ಸೂಚಿಸಿದರೆ ನಾನು ಗೈರು ಆದರೆ ನಿಖಿಲ್‌ ಕುಮಾರಸ್ವಾಮಿಯವರು ಪಕ್ಷದ ಶಾಸಕರು, ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳೊಂದಿಗೆ ಎಲ್ಲರ ಜೊತೆಗೂಡಿ ಪಕ್ಷದ ಸಂಘಟನೆಗೆ ಒತ್ತು ನೀಡುತ್ತಾರೆ. ನನಗೆ ವಿಶ್ರಾಂತಿ ಹೇಳಿದ್ರೆ ಅವರು (ನಿಖಿಲ್‌) ನೇತೃತ್ವದಲ್ಲಿ ಆರಂಭ ಮಾಡುತ್ತಾರೆʼ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.