Free Bus Pass ಗ್ರಾಮೀಣ ಪತ್ರಕರ್ತರಿಗೆ 15 ದಿನದಲ್ಲಿ ಉಚಿತ ಬಸ್ಪಾಸ್: ಕೆ.ವಿ. ಪ್ರಭಾಕರ
ಸುವರ್ಣ ಆರೋಗ್ಯ ಟ್ರಸ್ಟ್ ಷರತ್ತು ಶೀಘ್ರ ಸಡಿಲಿಕೆ
Team Udayavani, Jul 28, 2024, 11:45 PM IST
ಬಾಗಲಕೋಟೆ: ಇನ್ನು 15 ದಿನಗಳಲ್ಲಿ ರಾಜ್ಯದ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಯೋಜನೆ ಜಾರಿಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು.
ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 6,500 ಗ್ರಾಮೀಣ ಪತ್ರಕರ್ತರಿದ್ದಾರೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅದಕ್ಕೆ ತಗಲುವ ವೆಚ್ಚವನ್ನು ಸರಕಾರವೇ ಭರಿಸಲಿದೆ.
ಇನ್ನು 15ರಿಂದ 20 ದಿನಗಳಲ್ಲಿ ಈ ಕುರಿತು ಅಂತಿಮ ಆದೇಶ ಹೊರ ಬೀಳಲಿದೆ. ರಾಜ್ಯದ ಪತ್ರಕರ್ತರಿಗೆ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಲು 10 ಕೋಟಿ ರೂ. ಮೀಸಲಿಡಲಾಗಿದೆ. ಆದರೆ ಸುವರ್ಣ ಆರೋಗ್ಯ ಟ್ರಸ್ಟ್ನ ಹಲವು ಷರತ್ತು ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಆ ಮೊತ್ತ ಈವರೆಗೂ ಖರ್ಚಾಗಿಲ್ಲ. ಆದ್ದರಿಂದ ಎಪಿಎಲ್/ಬಿಪಿಎಲ್ ಪಡಿತರ ಚೀಟಿ ಹೊಂದಿದ ಪತ್ರಕರ್ತರಿಗೆ ಮಾತ್ರ ಎಂಬ ಷರತ್ತನ್ನು ತೆಗೆದು ಹಾಕಲು ಮುಖ್ಯಮಂತ್ರಿಗೆ ವಿನಂತಿಸಲಾಗಿದೆ. ಆ ಕಾರ್ಯವೂ ಶೀಘ್ರವೇ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.