T20; ಶ್ರೀಲಂಕಾ ಎದುರು ಸರಣಿ ಗೆದ್ದ ಟೀಮ್‌ ಇಂಡಿಯಾ


Team Udayavani, Jul 29, 2024, 12:11 AM IST

1-tI-a

ಪಲ್ಲೆಕೆಲೆ: ಮಳೆಯಿಂದ ಅಡಚಣೆಗೊಳಗಾದ ರವಿವಾರದ ದ್ವಿತೀಯ ಟಿ20 ಪಂದ್ಯದಲ್ಲಿ ಶ್ರೀಲಂಕಾಕ್ಕೆ 7 ವಿಕೆಟ್‌ಗಳ ಸೋಲುಣಿಸಿದ ಭಾರತ ಸರಣಿ ವಶಪಡಿಸಿಕೊಂಡಿದೆ.

ಶ್ರೀಲಂಕಾ 9 ವಿಕೆಟಿಗೆ 161 ರನ್‌ ಪೇರಿಸಿತು. ಭಾರತದ ಚೇಸಿಂಗ್‌ ವೇಳೆ ಮಳೆ ಸುರಿದ ಕಾರಣ ಪಂದ್ಯವನ್ನು 8 ಓವರ್‌ಗಳಿಗೆ ಇಳಿಸಿ ಡಿಎಲ್‌ಎಸ್‌ ನಿಯಮದಂತೆ 78 ರನ್‌ ಗುರಿ ನಿಗದಿಪಡಿಸಲಾಯಿತು. ಭಾರತ 6.3 ಓವರ್‌ಗಳಲ್ಲಿ 3 ವಿಕೆಟಿಗೆ 81 ರನ್‌ ಬಾರಿಸಿತು. ಮೊದಲ ಪಂದ್ಯವನ್ನು ಭಾರತ 43 ರನ್ನುಗಳಿಂದ ಜಯಿಸಿತ್ತು. 3ನೇ ಹಾಗೂ ಅಂತಿಮ ಪಂದ್ಯ ಮಂಗಳವಾರ ನಡೆಯಲಿದೆ.

ಚೇಸಿಂಗ್‌ ವೇಳೆ ಜೈಸ್ವಾಲ್‌ 30, ಸೂರ್ಯಕುಮಾರ್‌ 26, ಪಾಂಡ್ಯ ಔಟಾಗದೆ 22 ರನ್‌ ಮಾಡಿದರು. ಈ ಪಂದ್ಯ 45 ನಿಮಿಷ ವಿಳಂಬವಾಗಿ ಆರಂಭ ಗೊಂಡಿತ್ತು. 15ನೇ ಓವರ್‌ ತನಕ ಶ್ರೀಲಂಕಾ ಉತ್ತಮ ಹಿಡಿತ ಸಾಧಿಸಿತ್ತು. ಆದರೆ ಅನಂತರ ತೀವ್ರ ಕುಸಿತ ಕಂಡಿತು.

ಪಥುಮ್‌ ನಿಸ್ಸಂಕ 32, ಕುಸಲ್‌ ಪೆರೆರ 53 ರನ್‌ ಹೊಡೆದರು. ಇದರಿಂದ ಲಂಕಾ ಒಂದು ಹಂತದಲ್ಲಿ 2 ವಿಕೆಟಿಗೆ 130 ರನ್‌ ಪೇರಿಸುವಲ್ಲಿ ಯಶಸ್ವಿಯಾಯಿತು. ಅನಂತರ ಭಾರತದ ಬೌಲಿಂಗ್‌ ದಾಳಿ ತೀವ್ರಗೊಂಡಿತು. ಲೆಗ್‌ಸ್ಪಿನ್ನರ್‌ ರವಿ ಬಿಷ್ಣೋಯಿ ಘಾತಕವಾಗಿ ಪರಿಣಮಿಸಿದರು. ಅವರು ಸತತ ಎಸೆತಗಳಲ್ಲಿ ದಸುನ್‌ ಶಣಕ ಮತ್ತು ವನಿಂದು ಹಸರಂಗ ಅವರನ್ನು ಬೌಲ್ಡ್‌ ಮಾಡಿ ಭಾರತಕ್ಕೆ ಮೇಲುಗೈ ಒದಗಿಸಿದರು. ಇವರಿಬ್ಬರೂ ಖಾತೆ ತೆರೆಯಲು ವಿಫ‌ಲರಾದರು. 26ಕ್ಕೆ 3 ವಿಕೆಟ್‌ ಉರುಳಿಸಿದ ಬಿಷ್ಣೋಯಿ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು.

ಅರ್ಷದೀಪ್‌ ಸಿಂಗ್‌, ಅಕ್ಷರ್‌ ಪಟೇಲ್‌ ಮತ್ತು ಹಾರ್ದಿಕ್‌ ಪಾಂಡ್ಯ ಕೂಡ ಪರಿಣಾಮಕಾರಿ ಬೌಲಿಂಗ್‌ ಸಂಘಟಿಸಿ ತಲಾ 2 ವಿಕೆಟ್‌ ಕೆಡವಿದರು. 26 ರನ್‌ ಮಾಡಿದ ಕಮಿಂಡು ಮೆಂಡಿಸ್‌ ಲಂಕಾ ಸರದಿಯ ಮತ್ತೋರ್ವ ಪ್ರಮುಖ ಸ್ಕೋರರ್‌.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.