JDS ಸಂಘಟನೆಗೆ ಸಮಿತಿ ರಚನೆ: ಎಚ್‌.ಡಿ. ಕುಮಾರಸ್ವಾಮಿ


Team Udayavani, Jul 29, 2024, 12:34 AM IST

JDS ಸಂಘಟನೆಗೆ ಸಮಿತಿ ರಚನೆ: ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ಉಪ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ಪಕ್ಷ ಸಂಘಟನೆಗೆ ಮುಂದಾಗಿರುವ ಜೆಡಿಎಸ್‌, ಸಮಿತಿಯೊಂದನ್ನು ರಚಿಸಿ ರಾಜ್ಯಾದ್ಯಂತ ಪ್ರವಾಸಕ್ಕೆ ತೀರ್ಮಾನಿಸಿದೆ.

ನಗರದ ಪಕ್ಷದ ಕಚೇರಿಯಲ್ಲಿರುವ ಜೆಪಿ ಭವನದಲ್ಲಿ ರವಿವಾರ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಮುಂಬರುವ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ, ಪಕ್ಷ ಸಂಘಟನೆ, ಸದಸ್ಯತ್ವ ಅಭಿಯಾನ, ಪದಾಧಿಕಾರಿಗಳ ಕಾರ್ಯನಿರ್ವಹಣೆ ಸೇರಿ ವಿವಿಧ ಮಹತ್ವದ ವಿಷಯಗಳ ಬಗ್ಗೆ ಶಾಸಕರು, ಸಂಸದರು, ವಿಧಾನ ಪರಿಷತ್ತಿನ ಸದಸ್ಯರು, ಮಾಜಿ ಶಾಸಕರು ಹಾಗೂ ನಾಯಕರ ಜತೆ ಸಮಾಲೋಚನಾ ಸಭೆ ನಡೆಯಿತು. ಅಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಸಮಿತಿ ರಚನೆಯಾದ ಮೇಲೆ ಇನ್ನು 10 ದಿನಗಳ ಅನಂತರ ಆ ಸಮಿತಿಯಲ್ಲಿ ಇರುವವರು ಎಲ್ಲ ಮುಖಂಡರ ಜತೆಗೂಡಿ 31 ಜಿಲ್ಲೆ ಗಳಲ್ಲಿಯೂ ಕಾರ್ಯಕ್ರಮ ಹಾಕಿಕೊಳ್ಳಬೇಕು. ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್‌ ಬಾಬು, ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖೀಲ್‌ ಕುಮಾರಸ್ವಾಮಿ ಸೇರಿ ಎಲ್ಲ ಹಿರಿಯ-ಕಿರಿಯ ನಾಯಕರೂ ರಾಜ್ಯ ಪ್ರವಾಸ ಮಾಡಬೇಕು. ತಿಂಗಳಲ್ಲಿ ಎಲ್ಲ ಜಿಲ್ಲೆ ಗಳಲ್ಲಿಯೂ ನಾಯಕರು ಪ್ರವಾಸ ಪೂರ್ಣಗೊಳಿಸಬೇಕು. ಕಾರ್ಯಕರ್ತರ ಪಡೆ ಕಟ್ಟಬೇಕು ಎಂದು ಕುಮಾರಸ್ವಾಮಿ ಸೂಚಿಸಿದರು.

ನಿರ್ಲಕ್ಷ್ಯ ಸಹಿಸಲಾಗದು
ಪಕ್ಷ ಸಂಘಟನೆ ಬಗ್ಗೆ ನಿರ್ಲಕ್ಷ್ಯ ತೋರಿದರೆ ಸಹಿಸುವ ಪ್ರಶ್ನೆಯೇ ಇಲ್ಲ. ಚುನಾವಣೆ ಬಂದಾಗ ಕಾರ್ಯಕರ್ತರ ಕೈಕಾಲು ಹಿಡಿಯುತ್ತೇವೆ. ಆಮೇಲೆ ಮತ್ತೂಂದು ಚುನಾವಣೆ ಬರುವ ತನಕ ಸಂಘಟನಾ ಕೆಲಸದ ಕಡೆ ಲಕ್ಷ್ಯ ಕೊಡುವುದಿಲ್ಲ ಎಂದರೆ ಹೇಗೆ? ಈ ಧೋರಣೆ ಸಹಿಸಲಾಗದು. ಸದಸ್ಯತ್ವ ನೋಂದಣಿ ಅಭಿಯಾನದ ಬಗ್ಗೆ ನಿರ್ಲಕ್ಷ್ಯ ಸರಿಯಲ್ಲ ಎಂದರು.

ನನ್ನ ಆರೋಗ್ಯದ ಬಗ್ಗೆ ಯಾರೂ ಆತಂಕಕ್ಕೆ ಒಳಗಾಗುವ ಆವಶ್ಯಕತೆ ಇಲ್ಲ. ನಮ್ಮ ಕಾರ್ಯಕರ್ತರು ಅಭಿಮಾನಿಗಳಿಗೆ ಮನವಿ ಮಾಡುವುದು ಇಷ್ಟೇ.. ನಿಮ್ಮ ಶುಭ ಹಾರೈಕೆ ಇರುವರೆಗೆ, ಭಗವಂತನ ಕೃಪೆ, ತಂದೆ-ತಾಯಿ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ
-ಎಚ್‌.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.