Belthangady; ಚಾರ್ಮಾಡಿ ಘಾಟಿ: ಅಪಾಯಕ್ಕೆ ಮೊದಲು ಎಚ್ಚರ ಅಗತ್ಯ

ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ದುರ್ಬಲಗೊಂಡಿರುವ ರಸ್ತೆಗಳು, ರಿಟೇನಿಂಗ್‌ ವಾಲ್‌ಗ‌ಳಲ್ಲೂ ಬಿರುಕು

Team Udayavani, Jul 29, 2024, 7:35 AM IST

Charmadi

ಬೆಳ್ತಂಗಡಿ:  ಕರಾವಳಿ ಹಾಗೂ ಬೆಂಗಳೂರನ್ನು ಬೆಸೆಯುವ ಘಾಟಿ ಪ್ರದೇಶದ ರಸ್ತೆ ಪ್ರತಿ ಮಳೆಗಾಲದಲ್ಲೂ ಒಂದಾದ ಮೇಲೊಂದು ಕುಸಿಯುತ್ತಿರುತ್ತದೆ. ಈ ವರ್ಷ ಅಂಕೋಲ, ಶಿರಾಡಿ, ಮಡಿಕೇರಿ ಘಾಟಿಯಲ್ಲೂ ಕುಸಿತವಾಗಿ ಸಂಚಾರ ವ್ಯತ್ಯಯವಾಗಿದೆ. ಈಗ ಮತ್ತೂಂದು ಪ್ರಮುಖ ರಸ್ತೆಯಾಗಿರುವ ಚಾರ್ಮಾಡಿ ಘಾಟಿ ಸುರಕ್ಷೆ ಬಗ್ಗೆಯೂ ಆತಂಕ ಮೂಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಂಗಳೂರು-ಚಿಕ್ಕಮಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರಲ್ಲಿ 2019ರ ಆಗಸ್ಟ್‌ 8ರಂದು ಸಂಭವಿಸಿದ್ದ ಭೂ ಕುಸಿತದಿಂದ ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 15ರಿಂದ 20 ಕಡೆ ಭೂಕುಸಿತವಾಗಿ 2 ತಿಂಗಳು ವಾಹನ ಸಂಚಾರ ಸಂಪೂರ್ಣ ನಿಷೇಧವಾಗಿತ್ತು. ಅಂದಿನಿಂದ ಇಂದಿನ ವರೆಗೂ ಅತ್ಯಂತ ದೊಡ್ಡ ಗಾತ್ರದ ಘನವಾಹನಗಳು ಈಗಲೂ ಈ ಮಾರ್ಗದಲ್ಲಿ ಸಂಚರಿಸುತ್ತಿಲ್ಲ. ಘಟನೆ ಸಂಭವಿಸಿ ಐದು ವರ್ಷಗಳಾಗುತ್ತಾ ಬಂದರೂ ಇನ್ನೂ ಶಾಶ್ವತವಾದ ಸುರಕ್ಷಾ  ಕ್ರಮಗಳು ಆಗಿಲ್ಲ.

ಹಳ್ಳ ಹಿಡಿದ ಘಾಟಿ ರಸ್ತೆ ಅಭಿವೃದ್ಧಿ
ಚಾರ್ಮಾಡಿ ಘಾಟಿಯ ಚಿಕ್ಕಮಗ ಳೂರು ಭಾಗದ ಮೂರು ಕಡೆಗಳಲ್ಲಿ ರಸ್ತೆ ಅಭಿವೃದ್ಧಿಗೆ ಭೂಸ್ವಾಧೀನ ಪ್ರಕ್ರಿಯೆ ಸಾಧ್ಯವಾಗಿಲ್ಲ. ಘಾಟಿಯ 75 ಕಿ.ಮೀ.ನಿಂದ 99 ಕಿ.ಮೀ.ವರೆಗೆ ರಸ್ತೆ ಅಗಲಗೊಳಿಸುವ ಹಾಗೂ ತಡೆಗೋಡೆ ರಚಿಸಿ ಸಾಯಿಲ್‌ನೇಲಿಂಗ್‌ ಟೆಕ್ನಾಲಜಿ ಅಳವಡಿಕೆಗೆ 225 ಕೋ.ರೂ.ನ ಪ್ರಸ್ತಾವನೆ ಸಲ್ಲಿಸ ಲಾಗಿದೆ. ಆದರೆ ಇದು ಅರಣ್ಯ ಮತ್ತು ಹೆದ್ದಾರಿ ಇಲಾಖೆ ಗುದ್ದಾಟದಿಂದ ಹಳ್ಳ ಹಿಡಿದಿದೆ.

ಈ ಹೆದ್ದಾರಿಯ ಭೂಕುಸಿತಗೊಂಡ 6 ಕಡೆಗಳಲ್ಲಿ 100ರಿಂದ 150 ಮೀಟರ್‌ ಉದ್ದದ ತಡೆಗೋಡೆ ರಚನೆ ಯಾಗಿದೆ. 26 ಹೊಸ ಮೋರಿಗಳು ಸಹಿತ ಬಿದ್ರುತಳ ಸಮೀಪ 3 ಕಡೆಗಳಲ್ಲಿ 10ರಿಂದ 15 ಮೀಟರ್‌ ಉದ್ದ ಹಾಗೂ 4ರಿಂದ 5 ಮೀಟರ್‌ ಎತ್ತರದ ರಿಟೇನಿಂಗ್‌ ವಾಲ್‌ ನಿರ್ಮಾಣವಾಗಿದೆೆ. ಪೂರ್ಣ ಗೊಂಡ ಕಾಮಗಾರಿಗಳ ಪೈಕಿ 4-5 ತಡೆಗೋಡೆಗಳು ದುರ್ಬಲಗೊಂ ಡಿದ್ದು, ಕೆಲವೆಡೆ ಬಿರುಕು ಬಿಟ್ಟಿವೆ.

ಆದರೆ ಕಳೆದ ವಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರು ಭೇಟಿ ನೀಡಿ ಪರಿಶೀಲಿಸಿದ್ದು, ರಸ್ತೆ ಸಂಚಾರಕ್ಕೆ ಯೋಗ್ಯವಾಗಿದೆ ಎಂದು ಹೇಳಿದ್ದಾರೆ. ಆದರೆ ವಾಸ್ತವ ಬೇರೆಯೇ ಇದೆ ಎನ್ನುವ ಸ್ಥಳೀಯರು, ಬಿರುಕು ಬಿಟ್ಟ ತಡೆಗೋಡೆಗೆ ವೈಟ್‌ ಸಿಮೆಂಟ್‌ ಪ್ಲಾಸ್ಟರಿಂಗ್‌ ಮಾಡಲಾಗಿದೆ. ಗೋಡೆ ಮಧ್ಯೆ ತುಂಬಿದ್ದ ಮಣ್ಣು ಸಿಂಕ್‌ ಆಗಿರುವ ಮೇಲ್ಭಾಗದಲ್ಲಿ ಜಲ್ಲಿ ಹಾಸ ಲಾಗಿದೆ. ತಡೆಗೋಡೆ ಕೆಳಭಾಗ 4 ಅಡಿ ಅಗಲವಿದ್ದರೆ ಮೇಲ್ಭಾಗ 1 ಅಡಿಯಷ್ಟೇ ಇದೆ. ಗುಡ್ಡದ ನೀರಿನ ರಭಸ ಹಾಗೂ ಮಣ್ಣಿನ ಒತ್ತಡವನ್ನು ತಡೆಯಲು ಈ ತಡೆಗೋಡೆ ಸಮರ್ಥವಾಗಿಲ್ಲ ಎಂದು ಹೇಳುತ್ತಿದ್ದಾರೆ.

ಬೆಳ್ತಂಗಡಿ ವಿಭಾಗ ಸದ್ಯ ಸುರಕ್ಷಿತ
ಘಾಟಿ ಪ್ರದೇಶದಲ್ಲಿ ಬೆಳ್ತಂಗಡಿ ವಿಭಾಗಕ್ಕೆ ಸೇರುವ 10 ಹೇರ್‌ಪಿನ್‌ ಕರ್ವ್‌(ಯು ಆಕಾರದ ಟರ್ನ್)ಗಳಲ್ಲಿ ಸದ್ಯಕ್ಕೆ ಗಂಭೀರ ಆತಂಕವೇನೂ ಇಲ್ಲ. ಎರಡು ಕಡೆ ಮಾತ್ರ ರಸ್ತೆ ಅಂಚು ಕುಸಿದಿದ್ದರಿಂದ ಬ್ಯಾರಿಕೇಡ್‌ ಹಾಗೂ ರಿಫ್ಲೆಕ್ಟರ್‌ ಅಳವಡಿಸಲಾಗಿದೆ. ಬಂಡೆ ಕಲ್ಲುಗಳೇ ಇರುವ ಜೇನುಕಲ್ಲು ಬೆಟ್ಟದ ಕೆಳಭಾಗದಲ್ಲಿ ಏಕಮುಖ ಸಂಚಾರ ವ್ಯವಸ್ಥೆಯಿದ್ದು, ಕೆಳಭಾಗದಲ್ಲಿ ಸಣ್ಣಪುಟ್ಟ ಕಲ್ಲುಗಳು ಕುಸಿದು ರಸ್ತೆಗೆ ಬೀಳತೊಡಗಿವೆ.

ಅಪಾಯಕಾರಿ ಮರಗಳು
ಗುಡ್ಡ ಕುಸಿಯಲು ಪ್ರಮುಖ ಕಾರಣವೇ ಅಪಾಯಕಾರಿ ಮರ ಗಳು. ವನ್ಯಜೀವಿ ಅರಣ್ಯ ವಿಭಾಗವು ಮಳೆಗಾಲಕ್ಕೆ ಮೊದಲು ರಸ್ತೆಗೆ ಭಾಗಿದ ಮರಗಳ ಗೆಲ್ಲುಗಳನ್ನು ಕಡಿಯುತ್ತಿಲ್ಲ. ಗಾಳಿಗೆ ಮರಗಳು ಬಿದ್ದು ಜೀವಕ್ಕೇ ಸಂಚಕಾರ ತರುವಂತಿದೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧವೇ ಕ್ರಮವಾದರೆ ಮಾತ್ರ ಪರಿಸ್ಥಿತಿ ಸುಧಾರಿಸೀತು ಎನ್ನುತ್ತಾರೆ ಸಮಾಜ ಸೇವಕ ಚಾರ್ಮಾಡಿ ಹಸನಬ್ಬ.

“ಚಾರ್ಮಾಡಿ ಘಾಟಿ ಬಗ್ಗೆ ಈಗಾಗಲೇ ಪರಿಶೀಲಿಸ ಲಾಗಿದ್ದು, ಮಂಗಳೂರು ವಿಭಾಗದಲ್ಲಿ ಯಾವುದೇ ಅಪಾಯ ವಿಲ್ಲ. ಚಿಕ್ಕಮಗಳೂರು ವಿಭಾಗದಲ್ಲಿ ಅಲ್ಲಿನ ಡಿಸಿ ಪರಿಸ್ಥಿತಿಯನ್ನು ಅವಲೋಕಿಸಿ ದ್ದಾರೆ. ಹಾನಿ ಪ್ರದೇಶದಲ್ಲಿ ಸುರಕ್ಷಾ ಕ್ರಮವಾಗಿ ಕಾಮಗಾರಿಗಳು ಪ್ರಗತಿಯಲ್ಲಿದೆ.” – ಶಿವಪ್ರಸಾದ್‌ ಅಜಿಲ, ಕಾರ್ಯಪಾಲಕ ಅಭಿಯಂತರ,

 

– ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.