Kottigehara: ಮಳೆಗೆ ದ್ವೀಪವಾದ ಗ್ರಾಮ… ಆಹಾರಕ್ಕಾಗಿ ಪರಿತಪಿಸುತ್ತಿದೆ ಮಲೆಕುಡಿಯ ಕುಟುಂಬ
Team Udayavani, Jul 29, 2024, 8:52 AM IST
ಕೊಟ್ಟಿಗೆಹಾರ: ಒಂದು ತಿಂಗಳಿಂದ ಎಡಬಿಡದೆ ಸುರಿಯುತ್ತಿರುವ ಮಹಾಮಳೆಗೆ ಮಲೆನಾಡು ಅಕ್ಷರಸಹ ಸ್ತಬ್ಧವಾಗಿ ಹೋಗಿದೆ. ಅದರಲ್ಲೂ ಮೂಡಿಗೆರೆ ತಾಲೂಕಿನ ಹೊಳೆ ಕೊಡುಗೆ ಗ್ರಾಮದ ಮಲೆಕುಡಿಯ ಕುಟುಂಬ ಒಂದು ಆಹಾರಕ್ಕಾಗಿ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಈ ಗ್ರಾಮದಲ್ಲಿ ನಾಲ್ಕೈದು ಮನೆಗಳಿದ್ದು ಈ ಮನೆಗಳಿಗೆ ಭದ್ರಾ ನದಿಯ ನೀರು ಮೂರು ಕಡೆ ಆವರಿಸಿದೆ ಇನ್ನೊಂದು ಕಡೆ ಖಾಸಗಿ ತೋಟವಿದ್ದು ಇದರಿಂದ ಮಲೆ ಕುಡಿಯ ಕುಟುಂಬಕ್ಕೆ ದಾರಿ ಇಲ್ಲದೆ ಪರಿತಪಿಸುತಿದೆ.
ಇಷ್ಟು ವರ್ಷಗಳಲ್ಲಿ ಈ ರೀತಿಯ ಸಮಸ್ಯೆ ಎಂದು ಎದುರಾಗಿರಲಿಲ್ಲ ಯಾಕೆಂದರೆ ಮಳೆ ಬಿಟ್ಟುಬಿಟ್ಟು ಬರುತ್ತಿತ್ತು ಆದರೆ ಈ ವರ್ಷ ಒಂದು ತಿಂಗಳಿಂದ ಬಿಟ್ಟು ಬಿಡದೆ ಬರುತ್ತಿರುವ ವರುಣನ ಅಬ್ಬರಕ್ಕೆ ಭದ್ರಾ ನದಿ ರಭಸದಿಂದ ಹರಿಯುತ್ತಿದ್ದು ಅದನ್ನು ದಾಟಲು ತೆಪ್ಪವನ್ನು ಬಳಸಲು ಆಗುತ್ತಿಲ್ಲ ಪ್ರತಿ ವರ್ಷ ಮಳೆಗಾಲದಲ್ಲಿ ಮಳೆ ಬಿಡುವು ಕೊಟ್ಟಾಗ ತೆಪ್ಪದಲ್ಲಿ ಹೋಗಿ ಆಹಾರ ಸಾಮಗ್ರಿಗಳನ್ನು ತರುತ್ತಿದ್ದರು ಈ ಮಳೆಗಾಲದಲ್ಲಿ ಒಂದು ತಿಂಗಳಿಗೆ ಆಗುವಷ್ಟು ದಿನಸಿಯನ್ನು ಅವರು ತಂದಿದ್ದರು ಆದರೆ ಅದು ಈಗ ಕಾಲಿಯಾಗಿದ್ದು ಆಹಾರವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ 15 ದಿನಗಳಿಂದ ವಿದ್ಯುತ್ ಇಲ್ಲದೆ ಅವರ ಸಮಸ್ಯೆಯನ್ನು ಹೇಳಿಕೊಳ್ಳಲು ನೆಟ್ವರ್ಕ್ ಸಹ ಇಲ್ಲದಂತಾಗಿದೆ ದೇಶ ಇಷ್ಟು ಮುಂದುವರಿದಿದ್ದರು ಆಹಾರಕ್ಕಾಗಿ ಪರಿತಪಿಸುವ ಕುಟುಂಬದ ರೋಧನೆ ಮಾತಿನಲ್ಲಿ ಹೇಳಲು ಅಸಾಧ್ಯ.
ಹಲವಾರು ವರ್ಷಗಳಿಂದ ನಮ್ಮ ಸಮಸ್ಯೆಯನ್ನು ಅಧಿಕಾರಿಗಳು ಜನಪ್ರತಿನಿಧಿಗಳು ಎಲ್ಲರಿಗೂ ಹೇಳಿ ಸಾಕಾಗಿ ಹೋಗಿದೆ ಮಳೆಗಾಲದಲ್ಲಿ ದ್ವೀಪವಾಗುವ ನಮ್ಮ ಗ್ರಾಮಕ್ಕೆ ತೂಗು ಸೇತುವೆ ಮಾಡಿಕೊಡಲು ಹಲವಾರು ವರ್ಷಗಳಿಂದ ಬೇಡಿಕೆ ಇಟ್ಟಿದ್ದೇವೆ ಆದರೆ ಇದುವರೆಗೂ ನಮ್ಮ ಬೇಡಿಕೆ ಈಡೇರಿಲ್ಲ ಮಕ್ಕಳು ಶಾಲೆಗೆ ಹೋಗದೆ ಮನೆಯಲ್ಲಿ ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ.
– ಸತೀಶ್ ಮಲೆಕುಡಿಯ ಕುಟುಂಬದ ಸದಸ್ಯ
ಇದನ್ನೂ ಓದಿ: Chess Championship: ವಿಶ್ವ ಮಟ್ಟದ ಚೆಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಸಮರ್ಥ ಜಗದೀಶ್ ರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.