Moodbidri; ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಯುವಕ ಸಾವು
Team Udayavani, Jul 29, 2024, 11:18 AM IST
ಮೂಡುಬಿದಿರೆ: ಸ್ನಾನದ ಕೋಣೆಯ ಗ್ಯಾಸ್ ಗೀಸರ್ ನ ರಾಸಾಯನಿಕ ಹೊರಚೆಲ್ಲಿ ಯುವಕ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊಂದರಲ್ಲಿ ಸಂಭವಿಸಿದೆ.
ಕೋಟೆಬಾಗಿಲಿನ ದಿ. ಅನ್ಸಾರ್ ಅವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ.
ಸ್ನಾನಕ್ಕೆಂದು ತೆರಳಿದಾತ ಬಹಳ ಹೊತ್ತಾದರೂ ಹೊರ ಬಾರದಿರುವುದನ್ನು ಗಮನಿಸಿದ ಆತನ ಸಹೋದರ ಹೋಗಿ ಪರಿಶೀಲಿಸಿದಾಗ ಶಾರಿಕ್ ಸಾವನ್ನಪ್ಪಿರುವುದು ಗೊತ್ತಾಗಿದೆ.
ಶಾರಿಕ್ ಯಾವಾಗಲೂ ಸ್ನಾನದ ಕೋಣೆಯಲ್ಲಿ ಬಹಳ ಹೊತ್ತು ಕಳೆಯುವುದು ಸಾಮಾನ್ಯವಾಗಿದ್ದ ಕಾರಣ ಘಟನೆಯ ಬಗ್ಗೆ ಮನೆಯವರ ಮೊದಲು ಅರಿವಾಗಲಿಲ್ಲ ಎನ್ನಲಾಗಿದೆ.
ಸ್ನಾನದ ಕೋಣೆ ಬಂದ್ ಆಗಿದ್ದು ಗಾಳಿಯಾಡದ ಸ್ಥಿತಿ ಇದ್ದ ಕಾರಣ ಗೀಸರ್ ನ ರಾಸಾಯನಿಕ ಹರಡಿದಾಗ ಶಾರಿಕ್ ಗೆ ಹೊರಬರಲಾಗಲಿಲ್ಲ ಎನ್ನಲಾಗಿದೆ.
ಶಾರಿಕ್ ಪ್ರಥಮ ಪದವಿ ವಿದ್ಯಾರ್ಥಿಯಾಗಿದ್ದು ಕಲಿಕೆಯಲ್ಲಿ ಮುಂದಿದ್ದ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.