Kundapura: ಮಳೆಗೆ ಮುಳುಗುವ ಕಿರು ಸೇತುವೆಗೆ ಮುಕ್ತಿ ನೀಡಿ

ಶಿಥಿಲಗೊಂಡ ಸೇತುವೆಯಲ್ಲಿಯೇ ಅಪಾಯದ ನಡಿಗೆ | ಈಡೇರದ ಹರ್ಮಣ್ಣು ಭಾಗದ ದಶಕದ ಹೊಸ ಸೇತುವೆ ಬೇಡಿಕೆ

Team Udayavani, Jul 29, 2024, 12:07 PM IST

kundapura

ಕುಂದಾಪುರ: ಕಿರಿದಾದ ಸೇತುವೆಯಲ್ಲಿ ಜೀವ ಭಯದಲ್ಲಿಯೇ ಹೆಜ್ಜೆ ಹಾಕುವ ಪುಟ್ಟ – ಪುಟ್ಟ ಮಕ್ಕಳು. ಒಂದು ದೊಡ್ಡ ಮಳೆ ಬಂದರೆ ಸಾಕು ನದಿ ಉಕ್ಕೇರಿ, ಮುಳುಗುವ ಸೇತುವೆ. ಆಗಲೋ, ಈಗಲೋ ಅನ್ನುವಂತಿದೆ ಸೇತುವೆಯ ತಳಹದಿ. ಅಲ್ಲಲ್ಲಿ ಕಿತ್ತು ಹೋಗಿರುವ ಹಿಡಿಕೆಗಳು..

ಇದು ಆಜ್ರಿ ಗ್ರಾಮದ ಹರ್ಮಣ್ಣು ಭಾಗದವರಿಗೆ ಸಂಪರ್ಕಿಸುವ ಕಿರಿದಾದ ಸೇತುವೆಯ ದುಸ್ಥಿತಿ. ಭಾರೀ ಮಳೆ ಬಂದಾಗಂತೂ ಈ ನದಿಯಲ್ಲಿ ಮಕ್ಕಳು ಬಿಡಿ, ದೊಡ್ಡವರು ಸಹ ಸೇತುವೆ ದಾಟುವುದೇ ಅಪಾಯಕಾರಿ. ಅನೇಕ ವರ್ಷಗಳಿಂದ ಇಲ್ಲಿಗೆ ಹೊಸ ದೊಡ್ಡ ಸೇತುವೆ ಕೊಡಿ ಎಂದು ಇಲ್ಲಿನ ಜನ ಕೇಳಿ, ಕೇಳಿ ಸುಸ್ತಾಗಿದ್ದಾರೆ.

ಮುಳುಗುವ ಸೇತುವೆ

ಚಕ್ರ ನದಿಗೆ ಹರ್ಮಣ್ಣು ಬಳಿಯ ಈಶ್ವರ ದೇವಸ್ಥಾನ ಸಮೀಪ ನಿರ್ಮಿಸಿರುವ ಈ ಕಿರು ಸೇತುವೆಯ ಎತ್ತರ ಹಾಗೂ ಅಗಲ ತುಂಬಾ ಕಡಿಮೆ ಇದೆ. ಆ ಕಾರಣದಿಂದ ಭಾರೀ ಮಳೆ ಬಂದರೆ ಸಾಕು, ನದಿ ತುಂಬಿ ಹರಿದು, ಈ ಸೇತುವೆಯಲ್ಲಿ ಸಂಚಾರ ಸ್ಥಗಿತಗೊಳ್ಳುತ್ತದೆ. ಆಗಾಗ್ಗೆ ಸೇತುವೆಯ ಕೆಳಗಡೆ ಮರದ ದಿಮ್ಮಿಗಳು, ಕಸ ಕಡ್ಡಿಗಳು ಸಿಲುಕಿಕೊಂಡು ಕೂಡ ನೀರು ಸೇತುವೆಯ ಮೇಲೆ ಬರುತ್ತದೆ. ಆ ಬಳಿಕ ನದಿ ನೀರಿನ ರಭಸ ಕಡಿಮೆ ಆಗುವವರೆಗೂ ಹೋಗುವಂತಿಲ್ಲ. ಕೆಲವೊಮ್ಮೆ ಗಂಟೆಗಟ್ಟಲೆ ವಾಹನಗಳು, ಜನ ಕಾಯುವ ಪರಿಸ್ಥಿತಿಯಿದೆ.

ಶಿಥಿಲಗೊಂಡ ಕಿರು ಸೇತುವೆ

ಸುಮಾರು ವರ್ಷಗಳ ಹಿಂದೆ ಹರ್ಮಣ್ಣು – ಬೆಳ್ಳಾಲ – ಮೋರ್ಟುಗೆ ಸಂಪರ್ಕ ಕಲ್ಪಿಸಲು ನಿರ್ಮಿಸಿರುವ ಕಿರು ಸೇತುವೆ ಇದಾಗಿದ್ದು, ಈಗ ಅದರ ಅಡಿಪಾಯವೇ ಕುಸಿಯುವ ಹಂತದಲ್ಲಿದೆ. ಈ ಬಾರಿಯ ಮಳೆಗೆ ಮರದ ದಿಮ್ಮಿಗಳೆಲ್ಲ ಬಂದು ಸೇತುವೆಗೆ ಬಡಿದಿರುವುದರಿಂದ ಮತ್ತಷ್ಟು ಹಾನಿಯಾಗಿದೆ. ಇನ್ನು ಇಡೀ ಸೇತುವೆಯ ಎರಡೂ ಬದಿಯಲ್ಲಿ ಇರುವುದು ಕೆಲವೇ ಕೆಲವು ಮೀಟರ್‌ನಷ್ಟು ದೂರದ ಹಿಡಿಕೆಗಳು. ಅವುಗಳು ತುಂಡಾಗಿ ಹೋಗಿ, ಹಲವು ವರ್ಷಗಳೇ ಕಳೆದಿದೆ. ಬರೀ ಮಕ್ಕಳನ್ನು ಈ ಸೇತುವೆಯಲ್ಲಿ ಶಾಲೆಗೆ ಕಳುಹಿಸುವುದು ಸಹ ಅಪಾಯಕಾರಿ.

13 ಕಿ.ಮೀ. ಸುತ್ತಾಟ

ಈ ಕಿರು ಸೇತುವೆಯ ಮೂಲಕ ಕೇವಲ 500 ಮೀ. ಅಷ್ಟೇ ದೂರ ಇರುವುದು. ಆದರೆ ಈ ಸೇತುವೆಯೂ ಕಿರಿದಾಗಿರುವುದರಿಂದ ರಿಕ್ಷಾ ಹಾಗೂ ಬೈಕ್‌ಗಳನ್ನು ಹೊರತುಪಡಿಸಿದರೆ ಇತರೆ ವಾಹನಗಳು ಸಂಚರಿಸಲು ಸಾಧ್ಯವಿಲ್ಲದೆ ಇರುವುದರಿಂದ ಬಾಕಿ ವಾಹನಗಳಲ್ಲಿ ಬರಬೇಕಾದರೆ ಬೆಳ್ಳಾಲ, ಹೆಮ್ಮಕ್ಕಿಯಾಗಿ ಬರೋಬ್ಬರಿ 13 ಕಿ.ಮೀ. ಸುತ್ತು ಬಳಸಿ ಬರಬೇಕಾಗಿದೆ. ಇಲ್ಲಿನ ಬಹುತೇಕ ಕುಟುಂಬಗಳು ಕೃಷಿಯನ್ನೇ ಆಶ್ರಯಿಸಿರುವುದರಿಂದ ಮನೆಗೆ ಬೇಕಾದ ಅಗತ್ಯ ವಸ್ತುಗಳು, ಕೃಷಿ ಸಲಕರಣೆಗಳು, ಯಂತ್ರಗಳನ್ನು ತರಬೇಕಾದರೂ ಈ ಸೇತುವೆಯ ಮೂಲಕ ಸಾಧ್ಯವಿಲ್ಲದೇ, ಸುತ್ತು ಬಳಸಿ ತರಬೇಕಾಗಿದೆ.

45 ಕುಟುಂಬಗಳು

ಹರ್ಮಣ್ಣು ಭಾಗದ 45 ಕುಟುಂಬಗಳು ಎಲ್ಲದಕ್ಕೂ ಈ ಸೇತುವೆಯನ್ನೇ ಆಶ್ರಯಿಸಿದ್ದಾರೆ. ಪ್ರತಿ ನಿತ್ಯ 50 ಮಕ್ಕಳು ಈ ಕಿರಿದಾದ ಸೇತುವೆಯ ಮೂಲಕವೇ ಸಂಚರಿಸುತ್ತಾರೆ. ಇಲ್ಲಿನ ಜನರು ಆಜ್ರಿಯ ಪಂಚಾಯತ್‌ ಕಚೇರಿಗೆ, ಪೇಟೆ, ಪಡಿತರ, ಶಾಲೆ, ಎಲ್ಲದಕ್ಕೂ ಇದೇ ಸೇತುವೆ ದಾಟಿ ಬರಬೇಕು. ಆಜ್ರಿ ಮಾತ್ರವಲ್ಲದೆ, ಸಿದ್ದಾಪುರ, ನೇರಳಕಟ್ಟೆ, ತಲ್ಲೂರು, ಕುಂದಾಪುರಕ್ಕೆ ತೆರಳಬೇಕಾದರೂ ಈ ಸೇತುವೆಯನ್ನು ದಾಟಿಯೇ ಹೋಗಬೇಕು.

ಮಕ್ಕಳನ್ನು ಕಳುಹಿಸಲು ಭಯ ಈ ಸೇತುವೆಯಲ್ಲಿ ಮಕ್ಕಳನ್ನು ಕಳುಹಿಸಲು ಭಯವಾಗುತ್ತದೆ. ಇನ್ನು ಮಳೆ ಬಂದಾಗಂತೂ ಪ್ರತೀ ಸಲ ಸೇತುವೆಯ ಮೇಲೆಯೇ ನೀರುಬರುತ್ತದೆ. ಇಲ್ಲಿಗೆ ದೊಡ್ಡ ಸೇತುವೆ ಮಾಡಿದರೆ ಸುಮಾರು 45 ಕುಟುಂಬಗಳಿಗೆ ಬಹಳಷ್ಟು ಅನುಕೂಲವಾಗಲಿದೆ.
– ಕೃಷ್ಣ ಹರ್ಮಣ್ಣು, ಸ್ಥಳೀಯ ನಿವಾಸಿ

ದೊಡ್ಡ ಸೇತುವೆ ಬೇಡಿಕೆ

ಇಲ್ಲಿ ಯಾರಿಗಾದರೂ ಅನಾರೋಗ್ಯ ಉಂಟಾದರೂ ತತ್‌ಕ್ಷಣಕ್ಕೆ ಕರೆದುಕೊಂಡು ಹೋಗಲುಈ ಕಿರು ಸೇತುವೆಯಲ್ಲಿ ಕಷ್ಟವಾಗುತ್ತಿದೆ. ಇಲ್ಲದಿದ್ದರೆ ಸುತ್ತು ಬಳಸಿ ಹತ್ತಾರು ಕಿ.ಮೀ. ದೂರದಿಂದ ತೆರಳಬೇಕು. ಅದಕ್ಕಾಗಿ ಅನೇಕ ವರ್ಷಗಳಿಂದ ಈ ಚಕ್ರ ನದಿಗೆ ಒಂದು ದೊಡ್ಡ ಸೇತುವೆ ಮಾಡಿ ಕೊಡಿ ಎಂದು ಈ ಭಾಗದ ಜನರು ಅನೇಕ ವರ್ಷಗಳಿಂದ ಬೇಡಿಕೆ ಇಡುತ್ತಿದ್ದಾರೆ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.