Kundapura: ಪಂಚ ಗಂಗಾವಳಿ ಹೂಳೆತ್ತಲು ಅನುದಾನಕ್ಕೆ ಸಚಿವರಿಗೆ ಭಂಡಾರಿ ಮನವಿ

500 ಕ್ಕೂ ಹೆಚ್ಚು ಕುತುಂಬ ಅವಲಂಬನೆ, ಹೂಳು ತುಂಬಿ ಸಂಕಷ್ಟ

Team Udayavani, Jul 29, 2024, 12:34 PM IST

pancha gangavali river

ಕುಂದಾಪುರ: ಪುರಸಭಾ ವ್ಯಾಪ್ತಿಯ ಪಂಚಗಂಗಾವಳಿ ನದಿಯನ್ನು ಅವಲಂಬಿತರಾಗಿ ಸುಮಾರು 500ಕ್ಕೂ ಹೆಚ್ಚು ಕುಟುಂಬಗಳು ಸುಮಾರು ದಶಕಗಳಿಂದ ತಮ್ಮ ಬದುಕನ್ನು ಕಟ್ಟಿಕೊಂಡು ಬರುತ್ತಿದ್ದಾರೆ. ಇಲ್ಲಿ ಹೂಳುತುಂಬಿ ಕಷ್ಟವಾಗಿದ್ದು ತೆರವು ಮಾಡಬೇಕೆಂದು ವಿಧಾನ ಪರಿಷತ್‌ ಸದಸ್ಯ ಡಾ| ಮಂಜುನಾಥ ಭಂಡಾರಿ ಅವರು ಮೀನುಗಾರಿಕೆ ಸಚಿವ ಮಂಕಾಳ್‌ ವೈದ್ಯ ಅವರಿಗೆ ಜು. 27ರಂದು ಮನವಿ ಮಾಡಿದ್ದಾರೆ.

ಹೂಳು ತುಂಬಿದ ನದಿ

ನದಿ ತೀರದ ಕುಟುಂಬಗಳ ಮೂಲಕ ಮೀನುಗಾರಿಕೆ, ಚಿಪ್ಪು ಹೆಕ್ಕುವುದು, ಮೀನು ಸಾಕಾಣಿಕೆ, ದೋಣಿ ಚಲಿಸುವಂತದ್ದು,6 ಪ್ರವಾಸೋದ್ಯಮ ಹೀಗೆ ಹಲವಾರು ಚಟುವಟಿಕೆಗಳು ನಡೆಯುತ್ತಿರುತ್ತದೆ. ಈ ಹಿಂದೆ ಈ ನದಿ ಪಾತ್ರದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ನಡೆಯುತ್ತಿತ್ತು. ಹಾಗಾಗಿ ಇದರ ಪರಿಣಾಮ ನದಿ ಪಾತ್ರದಲ್ಲಿ ಯಾವುದೇ ಹೂಳು ಶೇಖರಣೆಯಾಗುತ್ತಿರಲಿಲ್ಲ. ನದಿಯು ಆಳವಾಗಿಯೂ ಹಾಗೂ ದೋಣಿಗಳು ಸರಾಗವಾಗಿಯೂ ಚಲಿಸುತ್ತಿತ್ತು. ಆದರೆ ಇತ್ತೀಚಿಗೆ ಹೊಸ ಕಾನೂನಿನ ಪರಿಣಾಮ ಯಾವುದೇ ಮರಳುಗಾರಿಕೆ ಇಲ್ಲಿ ನಡೆಯುತ್ತಿಲ್ಲ. ಹಾಗಾಗಿ ನದಿಯಲ್ಲಿ ಹೂಳು ಶೇಖರಣೆಗೊಂಡು ನದಿ ಪಾತ್ರ ತುಂಬಿರುತ್ತದೆ.

ನೆರೆ ಭೀತಿ

ಹೂಳಿನಿಂದ ನದಿಯನ್ನು ಮುಚ್ಚಿದಂತೆ ಆಗಿದ್ದು, ಮಳೆಗಾಲದಲ್ಲಿ ಕೃತಕ ನೆರೆ ಬಂದು ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸುತ್ತದೆ. ನದಿ ಪಾತ್ರ ಹೂಳಿನಿಂದ ಮುಚ್ಚಿರುವುದರಿಂದ ದೋಣಿಗಳು ಯಾವುದೇ ದಿಕ್ಕಿನಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ನೀರಿನ ಇಳಿತ ಕಾಲದಲ್ಲಿಯೂ ನದಿ ಮೈದಾನದಂತೆ ಮತ್ತು ಮರುಭೂಮಿಯಂತೆ ಗೋಚರಿಸುತ್ತದೆ. ಇದರ ಪರಿಣಾಮ ಇಲ್ಲಿ ಇತ್ತೀಚಿಗೆ ಕಾಂಡ್ಲಾ ಗಿಡಗಳು ಬೆಳೆದಿದ್ದು, ಅರಣ್ಯ ಇಲಾಖೆ ಇದನ್ನು ತೆರವುಗೊಳಿಸಲು ಬಿಡುತ್ತಿಲ್ಲ.

ಬದುಕು ದುಸ್ತರ

ಈ ಎಲ್ಲ ಕಾರಣಗಳಿಂದ ಮೀನುಗಾರ ಕುಟುಂಬಗಳ ದೈನಂದಿನ ಬದುಕು ಹಾಗೂ ನದಿಯನ್ನು ಅವಲಂಬಿತರಾದ ಸಮಾಜದವರ ಜೀವನ ಬಹಳ ಸಂಕಷ್ಟಕ್ಕೀಡಾಗಿದೆ. ಇದರೊಂದಿಗೆ ಪ್ರವಾಸೋದ್ಯಮ ಅವಕಾಶಗಳು ಕುಂಠಿತವಾಗಿವೆ. ಈ ಕುರಿತಂತೆ ಪಂಚಗಂಗಾವಳಿ ನದಿ ತೀರದ ಮೀನುಗಾರ ಸಮುದಾಯದ ಜನರು ಈ ಸಮಸ್ಯೆಗಳನ್ನು ಬಗೆಹರಿಸುವಂತೆ ನನ್ನಲ್ಲಿ ಮನವಿ ಮಾಡಿದ್ದಾರೆ. ಆದ್ದರಿಂದ ಈ ಕುರಿತು ತಾವು ಪರಿಶೀಲಿಸಿ ಮೀನುಗಾರ ಸಮುದಾಯದ ಜನರಿಗೆ ಅನುಕೂಲವಾಗುವಂತೆ ಹಾಗೂ ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕರಿಸುವ ರೀತಿಯಲ್ಲಿ ತಮ್ಮ ಇಲಾಖೆಯ ಮೂಲಕ ಸೂಕ್ತ ಕ್ರಮವಹಿಸುವಂತೆ ಡಾ| ಭಂಡಾರಿ ಅವರು ಸಚಿವರಿಗೆ ಮನವಿ ಮಾಡಿದ್ದಾರೆ.

ಸುದಿನ ವರದಿ
ಪಂಚಗಂಗಾವಳಿಯಲ್ಲಿ ಹೂಳು ತುಂಬಿ ದೋಣಿ ಹೋಗಲು ಕಷ್ಟವಾಗುತ್ತಿದೆ, ಪ್ರವಾಸೋದ್ಯಮಕ್ಕೆ ಕಂಟಕವಾಗಲಿದೆ, ನೆರೆ ಭೀತಿ ಇದೆ ಎಂದು ಉದಯವಾಣಿ ಸುದಿನ ಜೂ.10ರಂದು ಕುಂದಾಪುರ ನಗರಕ್ಕೆ ನೆರೆ ಭೀತಿ ಸಾಧ್ಯತೆ ಎಂದು ವರದಿ ಮಾಡಿತ್ತು. ಡಾ| ಭಂಡಾರಿ ಅವರು ಈ ವರದಿಯನ್ನು ಸಚಿವರಿಗೆ ಮನವಿ ಜತೆಗೆ ನೀಡಿದ್ದಾರೆ.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.