Shimoga; ಭದ್ರಾ ಜಲಾಶಯದ ನಾಲೆಗಳಿಗೆ ನೀರು ಬಿಡುಗಡೆ ಮಾಡಲು ತೀರ್ಮಾನ
Team Udayavani, Jul 29, 2024, 4:50 PM IST
ಶಿವಮೊಗ್ಗ: ಭದ್ರಾ ಜಲಾಶಯದ (Bhadra Reservoir) ನಾಲೆಗಳಿಗೆ ಇಂದಿನಿಂದ ನೀರು ಬಿಡುಗಡೆ ಮಾಡಲು ಭದ್ರಾ ಕಾಡಾ ಆಡಳಿತ ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮಲವಗೊಪ್ಪದ ಭದ್ರಾ ಕಾಡ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭದ್ರಾ ಡ್ಯಾಂ ನ ಬಲ ಮತ್ತು ಎಡ ದಂಡೆಗೆ ನೀರು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.
ಸೋಮವಾರ ರಾತ್ರಿಯಿಂದಲೇ ಡ್ಯಾಂ ಎರಡು ನಾಲೆಗಳಲ್ಲಿ ನೀರು ಹರಿಸಲು ನಿರ್ಧರಿಸಲಾಗಿದೆ. ನೀರಿನ ಲಭ್ಯತೆ ಮತ್ತು ಮಳೆಯ ಪ್ರಮಾಣ ಆಧರಿಸಿ ನೀರು ಬಿಡಲು ತೀರ್ಮಾನ ಮಾಡಲಾಗಿದೆ. ಎರಡು ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲಾಗುತ್ತದೆ.ನೀರು ಬಿಡುಗಡೆಯ ವೇಳಾಪಟ್ಟಿಯನ್ನು ಸಿದ್ಧಪಡಿಸುವಂತೆ ತಜ್ಞರಿಗೆ ಸೂಚನೆ ನೀಡಲಾಗಿದೆ.
ಈ ಬಾರಿ ಡ್ಯಾಂ ಭರ್ತಿಯಾಗುವ ಹಂತ ತಲುಪಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ಮಾಡಲಾಗುತ್ತದೆ. ಬೇಸಿಗೆಯಲ್ಲಿ ಅಗತ್ಯ ಬೇಕಾಗುವ ನೀರಿನ ಪ್ರಮಾಣ ಗಮನದಲ್ಲಿಟ್ಟುಕೊಂಡು ನೀರು ಹರಿಸಲಾಗುತ್ತದೆ.
ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಆಹ್ವಾನಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸಚಿವರ ಆಗಮನದ ಸಂದರ್ಭದಲ್ಲಿ ವಿವಿಧ ವಿಷಯಗಳ ಕುರಿತು ಗಮನ ಸೆಳೆಯಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಸರ್ಕಾರದ ಸೂಚನೆ ಅನುಸಾರ ನಾಳೆಯಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ.
ಸಭೆಯಲ್ಲಿ ಹೊನ್ನಾಳಿ, ದಾವಣಗೆರೆ, ಶಾಸಕರು ಸೇರಿದಂತೆ ರೈತ ಮುಖಂಡರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.