‘A1-A2’ ದೇಶ ಚಕ್ರವ್ಯೂಹದಲ್ಲಿ ಸಿಲುಕಿದೆ: ಲೋಕಸಭೆಯಲ್ಲಿ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
ಅದಾನಿ, ಅಂಬಾನಿ ಹೆಸರು ಇಲ್ಲಿ ಹೇಳಬೇಡಿ ಎಂದ ಸ್ಪೀಕರ್...
Team Udayavani, Jul 29, 2024, 8:35 PM IST
ಹೊಸದಿಲ್ಲಿ: ಲೋಕಸಭೆಯಲ್ಲಿ ಸೋಮವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಮಹಾಭಾರತವನ್ನು ಉಲ್ಲೇಖಿಸಿ, ದೊಡ್ಡ ಉದ್ಯಮಗಳ ಏಕಸ್ವಾಮ್ಯವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಭಾರತವನ್ನು ‘ಚಕ್ರವ್ಯೂಹ’ ವಶಪಡಿಸಿಕೊಂಡಿದೆ ಎಂದು ಕಿಡಿ ಕಾರಿದರು. ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರ ಹೆಸರು ಉಲ್ಲೇಖಿಸಿದ್ದರಿಂದ ಲೋಕಸಭೆಯು ತೀವ್ರ ಗದ್ದಲ ಉಂಟಾಯಿತು.ಸ್ಪೀಕರ್ ಓಂ ಬಿರ್ಲಾ ಅವರು ಸದನದ ಸದಸ್ಯರಲ್ಲದವರ ಹೆಸರು ನ್ನು ಉಲ್ಲೇಖಿಸುವುದನ್ನು ತಡೆದರು. ಆ ಬಳಿಕ ರಾಹುಲ್ ಗಾಂಧಿ ಅವರು ಕೈಗಾರಿಕೋದ್ಯಮಿಗಳನ್ನು ಹೆಸರಿಸದೆ ಉಲ್ಲೇಖಿಸದೆ ‘A1-A2’ ಎಂದು ಹೇಳಿದರು.
“ಸಾವಿರಾರು ವರ್ಷಗಳ ಹಿಂದೆ ಹರಿಯಾಣದ ಕುರುಕ್ಷೇತ್ರದಲ್ಲಿ ‘ಚಕ್ರವ್ಯೂಹ’ದಲ್ಲಿ ಆರು ಜನರು ಅಭಿಮನ್ಯುವನ್ನು ಕೊಂದಿದ್ದರು ಎಂದು ನರೇಂದ್ರ ಮೋದಿ, ಅಮಿತ್ ಶಾ, ಅಜಿತ್ ದೋವಲ್, ಮೋಹನ್ ಭಾಗವತ್, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರ ಹೆಸರು ಹೇಳಿದರು. ‘ಚಕ್ರವ್ಯೂಹ’ದಲ್ಲಿ ಹಿಂಸೆ ಮತ್ತು ಭಯವಿದೆ. ಅಭಿಮನ್ಯು ‘ಚಕ್ರವ್ಯೂಹ’ದಲ್ಲಿ ಸಿಕ್ಕಿಹಾಕಿಕೊಂಡು ಹತ್ಯೆಗೀಡಾದ ” ಎಂದು ರಾಹುಲ್ ಹೇಳಿದರು.
ಇಬ್ಬರು ಕೈಗಾರಿಕೋದ್ಯಮಿಗಳು ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿ ರಾಷ್ಟ್ರದ ಸಂಪತ್ತಿನ ಮೇಲೆ ಏಕಸ್ವಾಮ್ಯ ಸಾಧಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಈ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಧ್ಯಪ್ರವೇಶಿಸಿ, ‘ಪ್ರತಿಪಕ್ಷದ ನಾಯಕರು ಸ್ಪೀಕರ್ಗೆ ಸವಾಲು ಹಾಕುತ್ತಿದ್ದಾರೆ, ಅವರು ನಿಯಮಗಳನ್ನು ಪಾಲಿಸುತ್ತಿಲ್ಲ’ ಎಂದರು. “ಸ್ಪೀಕರ್ ಸರ್, ಸಚಿವರು A1 ಅಥವಾ A2 ಅನ್ನು ರಕ್ಷಿಸಲು ಬಯಸುತ್ತಿದ್ದಾರೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಅವರು ಮೇಲಿನಿಂದ ಆದೇಶವನ್ನು ಸ್ವೀಕರಿಸಿದ್ದಾರೆ” ಎಂದು ರಾಹುಲ್ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.