Dakshina Kannada: ಪೊಲೀಸರಿಂದ “ಸ್ಪೀಡ್‌ ಡಿಟೆಕ್ಷನ್‌ ರಾಡಾರ್‌ ಗನ್‌’ ಪ್ರಯೋಗ

ರಾಡಾರ್‌ ಗನ್‌ ಕನಿಷ್ಠ 100 ಮೀಟರ್‌ ಅಂತರದಲ್ಲಿ ವಾಹನಗಳ ವೇಗ ಪತ್ತೆ ಹಚ್ಚಲಿದೆ

Team Udayavani, Jul 30, 2024, 6:10 AM IST

Rader

ಮಂಗಳೂರು: ಅಪಘಾತ ಗಳನ್ನು ತಡೆಯಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೊರಡಿಸಿರುವ ವಾಹನಗಳ ವೇಗಮಿತಿ ಅಧಿಸೂಚನೆಯಂತೆ ದ.ಕ. ಜಿಲ್ಲಾ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದು, ಸೋಮವಾರ ಹಲವು
ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ರಾಡಾರ್‌ ಗನ್‌ ಬಳಕೆ
ವಾಹನಗಳ ವೇಗ ಪತ್ತೆ ಮಾಡುವುದಕ್ಕಾಗಿ ಜಿಲ್ಲಾ ಪೊಲೀಸರಿಗೆ 5 “ಮೊಬೈಲ್‌ ಸ್ಪೀಡ್‌ ಡಿಟೆಕ್ಷನ್‌ ರಾಡಾರ್‌ ಗನ್‌’ಗಳನ್ನು ಒದಗಿಸಲಾಗಿದೆ. ಇದನ್ನು ಬಳಸಿಕೊಂಡು ಕಾರ್ಯಾಚರಣೆ ಆರಂಭಿಸಲಾಗಿದೆ. ಈ ರಾಡಾರ್‌ ಗನ್‌ ಕನಿಷ್ಠ 100 ಮೀಟರ್‌ ಅಂತರದಲ್ಲಿ ವಾಹನಗಳ ವೇಗವನ್ನು ಪತ್ತೆ ಹಚ್ಚುತ್ತದೆ.

ನಗರದಲ್ಲೂ ಆರಂಭ
ಮಂಗಳೂರು ನಗರ ಭಾಗ ಸಹಿತ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲೂ ಇಂಥ ಗನ್‌ಗಳನ್ನು ಬಳಸಿ ವಾಹನಗಳ ವೇಗವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸುವ ಕಾರ್ಯಾ ಚರಣೆಯನ್ನು ಆರಂಭಿಸಲಾಗಿದೆ. ಈಗಾಗಲೇ 10ಕ್ಕೂ ಅಧಿಕ ಪ್ರಕರಣ
ದಾಖಲಿಸಿಕೊಳ್ಳಲಾಗಿದೆ. ಕಮಿಷನ ರೆಟ್‌ ವ್ಯಾಪ್ತಿಗೆ ಇಂತಹ 3 ಗನ್‌ಗಳನ್ನು ಒದಗಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಪೀಡ್‌ ಡಿಟೆಕ್ಷನ್‌ ರಾಡಾರ್‌ ಗನ್‌ ಕೆಮರಾ: ಬಂಟ್ವಾಳ ಪೊಲೀಸರಿಂದ ಕಾರ್ಯಾಚರಣೆ
* 62 ಪ್ರಕರಣ ದಾಖಲು, 65 ಸಾ. ರೂ.ದಂಡ ವಸೂಲು
ಬಂಟ್ವಾಳ: ಮಿತಿ ಮೀರಿದ ವೇಗದಿಂದಲೇ ಶೇ. 99ರಷ್ಟು ಅಪಘಾತಗಳು ಉಂಟಾಗುತ್ತಿವೆ ಎಂಬ ವರದಿ ಬೆನ್ನಲ್ಲೇ ಪೊಲೀಸ್‌ ಇಲಾಖೆ ವಾಹನಗಳ ವೇಗ ನಿಯಂತ್ರಣಕ್ಕೆ ಸಿದ್ಧತೆ ನಡೆಸಿದ್ದು, ಸೋಮವಾರ ಬಂಟ್ವಾಳ ಸಂಚಾರ ಪೊಲೀಸರು ರಾ.ಹೆ.75ರ ತುಂಬೆ ರಾಮಲ್‌ಕಟ್ಟೆ ಭಾಗದಲ್ಲಿ ಹೊಸ ತಂತ್ರಜ್ಞಾನವಾಗಿರುವ ಸ್ಪೀಡ್‌ ಡಿಟೆಕ್ಷನ್‌ ರಾಡಾರ್‌ ಗನ್‌ ಕೆಮರಾ ಮೂಲಕ ವಾಹನಗಳ ವೇಗವನ್ನು ಪತ್ತೆ ಹಚ್ಚಿ ದಂಡ ವಸೂಲಿ ಮಾಡಿದರು.

ಬಂಟ್ವಾಳ ಸಂಚಾರ ಠಾಣೆ ಪಿಎಸ್‌ಐ ಸುತೇಶ್‌ ಕೆ.ಪಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮೊದಲ ದಿನ 62 ಪ್ರಕರಣಗಳು ದಾಖಲಾಗಿದ್ದು, 65 ಸಾವಿರ ರೂ. ದಂಡ ವಸೂಲಿ ಆಗಿದೆ. ಮುಂದೆ ವಿವಿಧ ಭಾಗಗಳಲ್ಲಿ ಆಯಾಯ ರಸ್ತೆಯ ಗರಿಷ್ಠ ವೇಗದ ಮಿತಿಯ ಆಧಾರದಲ್ಲಿ ದಂಡ ವಸೂಲಿ ಕಾರ್ಯ ನಡೆಯಲಿದೆ.

ವೇಗ ಮಿತಿ ಫಲಕ ಇಲ್ಲ!
ಬಂಟ್ವಾಳ ಪೊಲೀಸರು ದಂಡ ವಿಧಿಸಿದ ಹೆದ್ದಾರಿ ಪ್ರದೇಶದಲ್ಲಿ ವೇಗದ ಮಿತಿ 50 ಕಿ.ಮೀ.ಆಗಿದ್ದು, ಆದರೆ ಬಹುತೇಕ ಫಲಕಗಳು ಕಿತ್ತು ಹೋಗಿದ್ದು, ಇರುವ ಫಲಕಗಳಲ್ಲಿ ಕೊಳೆ ತುಂಬಿ ಸರಿಯಾಗಿ ಕಾಣುವುದೇ ಇಲ್ಲ. ಫಲಕಗಳನ್ನು ಸರಿಯಾಗಿ ಪ್ರದರ್ಶಿಸದೆ ದಂಡ ವಸೂಲಿ ಮಾಡಿರುವುದು ಸರಿಯೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.