Karnataka ಬಿಜೆಪಿಯ ಅತಿವೃಷ್ಟಿ ಅಧ್ಯಯನ; ರಾಜ್ಯಪಾಲರಿಗೆ ಅಂತಿಮ ವರದಿ
Team Udayavani, Jul 30, 2024, 6:50 AM IST
ಬೆಂಗಳೂರು: ಅತಿವೃಷ್ಟಿ ಬಾಧಿತ ಪ್ರದೇಶಗಳಲ್ಲಿ ಅಧ್ಯಯನ ಕೈಗೊಳ್ಳಲು 6 ತಂಡಗಳನ್ನು ರಚಿಸಿರುವ ಬಿಜೆಪಿ, ಮಂಗಳವಾರದಿಂದ 3 ದಿನಗಳ ಕಾಲ ಅಧ್ಯಯನ ನಡೆಸಲಿದೆ.
ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಜನರ ಸಮಸ್ಯೆ ಆಲಿಸುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಬಿಜೆಪಿ ಕೂಡ ಅಧ್ಯಯನ ತಂಡಗಳನ್ನು ರಚಿಸಿದ್ದು, ಮಂಗಳವಾರದಿಂದಲೇ ಅಧ್ಯಯನಕ್ಕೆ ಮುಂದಾಗಲಿದೆ.
ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಉಪನಾಯಕ ಅರವಿಂದ ಬೆಲ್ಲದ್, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಿರಿಯ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಡಿಸಿಎಂಗಳಾದ ಡಾ| ಸಿ.ಎನ್. ಅಶ್ವತ್ಥನಾರಾಯಣ ಮತ್ತು ಬಿ. ಶ್ರೀರಾಮುಲು ನೇತೃತ್ವದಲ್ಲಿ 6 ಪ್ರತ್ಯೇಕ ತಂಡಗಳಿರಲಿವೆ. ಶುಕ್ರವಾರವೇ ಎಲ್ಲ ತಂಡಗಳೂ ಪಕ್ಷಕ್ಕೆ ಪ್ರತ್ಯೇಕ ವರದಿ ನೀಡಲಿವೆ.
ರಾಜ್ಯಪಾಲರಿಗೆ ಅಂತಿಮ ವರದಿ
ಈ ತಂಡಗಳು ವಸ್ತುಸ್ಥಿತಿ ಅಧ್ಯಯನ ನಡೆಸಿ, ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಪರಿಶೀಲನೆ ನಡೆಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಒಂದು ವೇಳೆ ಸರಕಾರ ಸಕಾಲದಲ್ಲಿ ಸ್ಪಂದಿಸಿಲ್ಲದಿದ್ದರೆ ಅದರ ಬಗ್ಗೆಯೂ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡು ಪರಿಹಾರ ಕಾಮಗಾರಿ ಕೈಗೊ ಳ್ಳಲು ಸೂಚಿಸಲಿದ್ದು, ವರದಿಯಲ್ಲಿ ಈ ಅಂಶಗಳನ್ನುಉಲ್ಲೇಖಿಸಿ 6 ತಂಡ ಗಳ ವರದಿಯನ್ನು ಒಟ್ಟುಗೂಡಿಸಿ ರಾಜ್ಯ ಪಾಲರಿಗೆ ಸಲ್ಲಿಸಲು ನಿರ್ಧರಿಸಿದೆ. ಆರ್. ಅಶೋಕ್ ತಂಡ ದ.ಕ., ಉಡುಪಿ ಕಡೆ ಸಮೀಕ್ಷೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.