Bagalkote ಹಳ್ಳಿಯಲ್ಲೊಂದು ಹೈಟೆಕ್‌ ಮೆಡಿಕಲ್‌ ಕಾಲೇಜು

ಬಾಡಗಂಡಿಯಲ್ಲಿ 630 ಹಾಸಿಗೆಯ ಅತ್ಯಾಧುನಿಕ ಆಸ್ಪತ್ರೆ ; ನಾಳೆ ಪಾಟೀಲರ 75ನೇ ಜನ್ಮದಿನದಂದೇ ಲೋಕಾರ್ಪಣೆ

Team Udayavani, Jul 30, 2024, 6:15 AM IST

Bagalkote ಹಳ್ಳಿಯಲ್ಲೊಂದು ಹೈಟೆಕ್‌ ಮೆಡಿಕಲ್‌ ಕಾಲೇಜು

ಬಾಗಲಕೋಟೆ: ವೈದ್ಯಕೀಯ ಅಥವಾ ಎಂಜಿನಿಯರಿಂಗ್‌ ಕಾಲೇಜುಗಳನ್ನು ನಗರ-ಪಟ್ಟಣಗಳಲ್ಲಿ ಆರಂಭಿಸುವುದು ಸಾಮಾನ್ಯ. ಆದರೆ ಜಿಲ್ಲೆಯ ಪುಟ್ಟ ಹಳ್ಳಿಯೊಂದರಲ್ಲಿ 630 ಹಾಸಿಗೆಯ ಹೈಟೆಕ್‌ ಆಸ್ಪತ್ರೆಯೊಂದಿಗೆ ವೈದ್ಯಕೀಯ ಕಾಲೇಜು ಆರಂಭಗೊಳ್ಳುತ್ತಿರುವುದು ವಿಶೇಷ.

ಮಾಜಿ ಸಚಿವ, ಸಹಕಾರಿ ಧುರೀಣ ಎಸ್‌.ಆರ್‌. ಪಾಟೀಲ್‌ ತಮ್ಮ ಹುಟ್ಟೂರಿನಲ್ಲಿ ಈ ಬೃಹತ್‌ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಆರಂಭಿಸಿ ತಮ್ಮ 75ನೇ ಜನ್ಮದಿನವಾದ ಜು. 31ರಂದು ಲೋಕಾರ್ಪಣೆಗೊಳಿಸುತ್ತಿದ್ದಾರೆ.”ಆರೋಗ್ಯ ಧಾಮ’ ಹೆಸರಿನ ಇಲ್ಲಿ ಆಯುರ್ವೇದ ಕಾಲೇಜು, ಸಿಬಿಎಸ್‌ಇ ಸ್ಕೂಲ್‌ ಸಹಿತ ಶೈಕ್ಷಣಕ ಸಂಸ್ಥೆಗಳು ಒಂದೇ ಸೂರಿನಡಿ ಇವೆ. ಎಸ್‌.ಆರ್‌. ಪಾಟೀಲ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ಕೇಂದ್ರಕ್ಕೆ ರಾಜ್ಯ ಸರಕಾರದ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರವೂ ಅನುಮತಿ ನೀಡಿದೆ. ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯಲ್ಲಿ ಇದು 4ನೇ ವೈದ್ಯಕೀಯ ಕಾಲೇಜು.

ಇಲ್ಲಿ ಶ್ರೀಮತಿ ಶಾಂತಾದೇವಿ ಸ್ಮರಣಾರ್ಥ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಬಿಎಸ್ಸಿ ನರ್ಸಿಂಗ್‌ ಮಹಾವಿದ್ಯಾಲಯ ಕೂಡ ಇದೆ. ವೈದ್ಯಕೀಯ ಶಿಕ್ಷಣ ಹಾಗೂ ಚಿಕಿತ್ಸೆಗಾಗಿ ಈ ಭಾಗದ ಜನಸಾಮಾನ್ಯರು ಬಾಗಲಕೋಟೆ, ವಿಜಯಪುರ, ಮೀರಜ್‌, ಸೋಲಾಪುರದಂತಹ ನಗರಗಳಿಗೆ ತೆರಳಬೇಕಿತ್ತು. ಆ ಸಮಸ್ಯೆ ಇನ್ನು ಇಲ್ಲ.

100 ಎಂಬಿಬಿಎಸ್‌ ಸೀಟು
ಒಟ್ಟು 630 ಹಾಸಿಗೆಯ ಆಸ್ಪತ್ರೆ ಹಾಗೂ 100 ಎಂಬಿಬಿಎಸ್‌ ಸೀಟುಗಳ ಅನುಮತಿ ಪಡೆದಿದ್ದು, ಅಂಗರಚನಾಶಾಸ್ತ್ರ, ಶರೀರಶಾಸ್ತ್ರ, ಜೀವರಸಾಯನಶಾಸ್ತ್ರ, ರೋಗಶಾಸ್ತ್ರ, ಸೂಕ್ಷ್ಮ ಜೀವವಿಜ್ಞಾನ, ಫಾರ್ಮಕಾಲಜಿ, ಫೋರೆನ್ಸಿಕ್‌ ಮೆಡಿಸಿನ್‌, ಟಾಕ್ಸಿಕಾಲಜಿ, ಸಮುದಾಯ ಔಷಧ, ಜನರಲ್‌ ಮೆಡಿಸಿನ್‌, ಪಿಡಿಯಾಟ್ರಿಕ್ಸ್‌, ಮನೋವೈದ್ಯಶಾಸ್ತ್ರ, ಡರ್ಮಟಾಲಜಿ, ಸಾಮಾನ್ಯ ಶಸ್ತ್ರಚಿಕಿತ್ಸೆ, ಆಥೋಪೆಡಿಕ್ಸ್‌, ರೇಡಿಯೋ-ರೋಗ ನಿರ್ಣಯ, ಓಟೋ-ರೈನೋಲಾರಿಂಗೋಲಜಿ, ನೇತ್ರವಿಜ್ಞಾನ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಅರಿವಳಿಕೆ ಶಾಸ್ತ್ರ, ದಂತ ವೈದ್ಯಶಾಸ್ತ್ರ, ಇಂಟಿಗ್ರೇಟಿವ್‌ ಮೆಡಿಕಲ್‌ ರಿಸರ್ಚ್‌ ಹೀಗೆ ಒಟ್ಟು 21 ವಿಭಾಗ ಹೊಂದಿದೆ.

204 ಜನ ವೈದ್ಯರಿದ್ದು, 400ಕ್ಕಿಂತ ಹೆಚ್ಚು ಸಿಬಂದಿ ಇದ್ದಾರೆ.

ಸಹಕಾರ, ಶಿಕ್ಷಣ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದೇನೆ. ಈ ಬಾರಿ ಜನ್ಮದಿನಕ್ಕೆ ಜನರ ಸೇವೆಗಾಗಿ ವೈದ್ಯಕೀಯ ಕಾಲೇಜು ಕಾಣಿಕೆಯಾಗಿ ನೀಡಬೇಕೆಂಬ ಹಂಬಲ ನನ್ನದು. ಜು. 31ರಂದು ನನಗೆ ಜನ್ಮಕೊಟ್ಟ ಬಾಡಗಂಡಿಯಲ್ಲಿ ವೈದ್ಯಕೀಯ ಕಾಲೇಜು ಆರಂಭಗೊಳ್ಳಲಿದೆ.
– ಎಸ್‌.ಆರ್‌. ಪಾಟೀಲ, ಮಾಜಿ ಸಚಿವ

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.