Road Mishap ಲಾರಿ ಢಿಕ್ಕಿ: ಯುವತಿ ಸಹಿತ ಇಬ್ಬರು ಟೆಕ್ಕಿಗಳ ಸಾವು
Team Udayavani, Jul 30, 2024, 12:08 AM IST
ಬೆಂಗಳೂರು: ಬೈಕ್ಗೆ ಬಿಬಿಎಂಪಿ ಕಸದ ಲಾರಿ ಢಿಕ್ಕಿ ಹೊಡೆದು ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ಗಳು ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಸಂಚಾರ ಠಾಣೆ ವ್ಯಾಪ್ತಿಯ ಶೇಷಾದ್ರಿ ರಸ್ತೆಯ ಕೆ.ಆರ್. ವೃತ್ತದ ಬಳಿ ರವಿವಾರ ರಾತ್ರಿ ಸಂಭವಿಸಿದೆ.
ಬಾಣಸವಾಡಿಯ ಪ್ರಶಾಂತ್ (25) ಮತ್ತು ಆಂಧ್ರಪ್ರದೇಶದ ಹಿಂದೂಪುರ ಮೂಲದ ಶಿಲ್ಪಾ (27) ಮೃತಪಟ್ಟವರು.
ಪ್ರಶಾಂತ್ ಹಾಗೂ ಶಿಲ್ಪಾ ಐಟಿಪಿಎಲ್ನಲ್ಲಿರುವ ಸಾಫ್ಟ್ ವೇರ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ಸ್ನೇಹಿತರಾಗಿದ್ದರು. ಶಿಲ್ಪಾ ಅವರು ನಾಗವಾರದ ಪೇಯಿಂಗ್ ಗೆಸ್ಟ್ (ಪಿಜಿ)ನಲ್ಲಿ ವಾಸವಾಗಿದ್ದು, ರವಿವಾರ ರಾತ್ರಿ ಅವರಿಬ್ಬರೂ ಹೊಟೇಲೊಂದರಲ್ಲಿ ಊಟ ಮುಗಿಸಿ ಮರಳುತ್ತಿದ್ದಾಗ ಲಾರಿ ಢಿಕ್ಕಿ ಹೊಡೆಯಿತು.
ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ತತ್ಕ್ಷಣ ಸ್ಥಳೀಯರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಆಸ್ಪತ್ರೆ ಬಳಿ ಇಬ್ಬರ ಹೆತ್ತವರು ಹಾಗೂ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.
ಚಾಲಕನ ಬಂಧನ
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದಾಗ ಅಪಘಾತ ಎಸಗಿದ ಚಾಲಕ ರಾಜಪ್ಪ ಲಾರಿಯನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದ. ಬಳಿಕ ಆತನನ್ನು ಬಂಧಿಸಿದ್ದಾರೆ.
ಮದುವೆ ಬಗ್ಗೆ ಪುತ್ರಿ ಜತೆಗೆ ಚರ್ಚಿಸಿದ್ದ ತಂದೆ
ಮೃತ ಶಿಲ್ಪಾ ಅವರ ತಂದೆ ವೆಂಕಟರಾಮ ರೆಡ್ಡಿಗೆ ಮೂವರು ಹೆಣ್ಣು ಮಕ್ಕಳು. ಶಿಲ್ಪಾ ಕೊನೆಯವರು. ಈ ವರ್ಷ ಮಗಳ ಮದುವೆ ಮಾಡಲು ಕುಟುಂಬ ನಿರ್ಧರಿಸಿತ್ತು. ಹೀಗಾಗಿ ತಂದೆ ಚಿನ್ನಾಭರಣಗಳನ್ನು ಖರೀದಿಸಿದ್ದರು. ರವಿವಾರ ಬೆಳಗ್ಗೆ ಮಗಳಿಗೆ ಫೋನ್ ಮಾಡಿ ಮದುವೆ ಬಗ್ಗೆ ಮಾತನಾಡಿದ್ದರು.
ಹುಟ್ಟಿದ ಆಸ್ಪತ್ರೆಯಲ್ಲೇ ಸಾವು!
ನನ್ನ ಮಗ ಇದೇ ಆಸ್ಪತ್ರೆಯಲ್ಲಿ ಹುಟ್ಟಿದ್ದ. ಇದೀಗ ಅದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪ್ರಶಾಂತ್ ತಂದೆ ಕಣ್ಣೀರಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.