Mysuru Chalo; ಯತ್ನಾಳ್‌, ಜಾರಕಿಹೊಳಿ ವಿರುದ್ಧ ಬಿಜೆಪಿ ಅಸಮಾಧಾನ

"ಮೈಸೂರು ಚಲೋದಲ್ಲಿ ಭಾಗಿಯಾಗಲ್ಲ' ಹೇಳಿಕೆಗೆ ವಿರೋಧ

Team Udayavani, Jul 30, 2024, 6:50 AM IST

Mysuru Chalo; ಯತ್ನಾಳ್‌, ಜಾರಕಿಹೊಳಿ ವಿರುದ್ಧ ಬಿಜೆಪಿ ಅಸಮಾಧಾನ

ಬೆಂಗಳೂರು: ಮೈಸೂರು ಚಲೋದಲ್ಲಿ ಭಾಗಿಯಾಗುವುದಿಲ್ಲ ಎನ್ನುತ್ತಿರುವ ಮಾಜಿ ಸಚಿವರಾದ ರಮೇಶ್‌ ಜಾರಕಿಹೊಳಿ, ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ನಿರ್ಧಾರಕ್ಕೆ ಪಕ್ಷದೊಳಗೆ ಅಸಮಾಧಾನ ಆರಂಭವಾಗಿದೆ.

ಮುಡಾದಿಂದ ಸಿಎಂ ಕುಟುಂಬಕ್ಕೆ ನಿವೇಶನ ಹಂಚಿಕೆ, ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಸೇರಿ ಹಲವು ವಿಷಯಗಳನ್ನು ಇಟ್ಟುಕೊಂಡು ಆ. 3ರಿಂದ ಬೆಂಗಳೂರು-ಮೈಸೂರು ನಡುವೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧರಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ ವಾಲ್ಮೀಕಿ ಹಗರಣವನ್ನಿಟ್ಟು ಕೊಂಡು ಬಳ್ಳಾರಿಗೆ ಪಾದಯಾತ್ರೆ ನಡೆಸುವುದಾಗಿ ರಮೇಶ್‌ ಹಾಗೂ ಯತ್ನಾಳ್‌ ಹೇಳಿಕೆ ನೀಡಿದ್ದು, ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧವೂ ಹರಿಹಾಯ್ದಿದ್ದಾರೆ. ಇನ್ನೊಂದೆಡೆ ಸದನದಲ್ಲಿ ನಡೆದ ಹೋರಾಟವನ್ನು “ಹೊಂದಾಣಿಕೆ ಹೋರಾಟ’ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಕೂಡ ಜರೆದಿದ್ದಾರೆ. ಇದೆಲ್ಲವೂ ಪಕ್ಷದೊಳಗೆ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರ ಪಾದಯಾತ್ರೆ ಪಕ್ಷಕ್ಕೆ ಬಲ
ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ನಾವು ಕಾಟಾಚಾರಕ್ಕೆ ಪಾದಯಾತ್ರೆ ಮಾಡುತ್ತಿಲ್ಲ. ಜತ ಹಿತಕ್ಕಾಗಿ ಮಾಡುತ್ತಿದ್ದೇವೆ. ಯತ್ನಾಳ್‌ ಹಾಗೂ ಜಾರಕಿಹೊಳಿ ಅವರ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೆ ಬಲ ಬರಲಿದೆ, ಮಾಡಲಿ ಎಂದಷ್ಟೇ ಹೇಳಿದ್ದಾರೆ.

ಜನರ ಹಿತಾಸಕ್ತಿಗಾಗಿ
ಇದೇ ವಿಚಾರವಾಗಿ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಪ್ರತಿಕ್ರಿಯಿಸಿದ್ದು, ಒಳ್ಳೆಯ ರೀತಿಯಲ್ಲಿ ಹೋರಾಟ ಕೈಗೆತ್ತಿಕೊಳ್ಳಬೇಕು ಎಂದು ಬಿಜೆಪಿ ತೀರ್ಮಾನಿಸಿದೆ. ಈ ಬಾರಿಯ ಹೋರಾಟ ತಾರ್ಕಿಕ ಅಂತ್ಯ ಕಾಣಲಿದೆ. ಸಿದ್ದರಾಮಯ್ಯರ ಬಳ್ಳಾರಿ ಪಾದಯಾತ್ರೆಯಂತೆ ಯಾವುದೋ ರಾಜಕೀಯ ಲಾಭಕ್ಕಾಗಿ ಮಾಡುತ್ತಿಲ್ಲ. ಜನರ ಹಿತಾಸಕ್ತಿಗಾಗಿ ನಡೆಯುತ್ತಿರುವ ನೈಜ ಹೋರಾಟ. ಈ ಹೋರಾಟದಲ್ಲಿ ಭಾಗಿಯಾಗದಿದ್ದರೆ ವಿಪಕ್ಷದ ಕಾರ್ಯಕರ್ತರಾಗಿರಲು ಸಾಧ್ಯವಿಲ್ಲ.

ಜಾರಕಿಹೊಳಿ, ಯತ್ನಾಳ್‌ ಅಪಸ್ವರ ಎತ್ತಿದರೆ ಕದ್ದವರು ತಪ್ಪಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಅರವಿಂದ ಲಿಂಬಾವಳಿ ಹೇಳಿಕೆ ಸರಿಯಿದೆ. ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಹೋರಾಟ ಎಂಬ ಅರ್ಥದಲ್ಲಿ ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಭ್ರಷ್ಟಾಚಾರದ ವಿರುದ್ಧ ನಮ್ಮದು ಶೂನ್ಯಸಹನೆ
ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಕ್ರಿಯಿಸಿ, ಭ್ರಷ್ಟಾಚಾರ ಬಯಲಿಗೆಳೆಯುವ ಸದುದ್ದೇಶ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿದ್ದೇವೆ. ಭ್ರಷ್ಟಾಚಾರದ ವಿರುದ್ಧ ನಮ್ಮದು ಶೂನ್ಯಸಹನೆ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.