Reading Hobby ಮಕ್ಕಳಲ್ಲಿ ಓದುವ ಅಭ್ಯಾಸ ವೃದ್ಧಿಗೆ ಕಾರ್ಯಕ್ರಮ ಸ್ತುತ್ಯರ್ಹ


Team Udayavani, Jul 30, 2024, 6:00 AM IST

Reading Hobby ಮಕ್ಕಳಲ್ಲಿ ಓದುವ ಅಭ್ಯಾಸ ವೃದ್ಧಿಗೆ ಕಾರ್ಯಕ್ರಮ ಸ್ತುತ್ಯರ್ಹ

ಡಿಜಿಟಲ್‌ ಯುಗದಲ್ಲಿ ಸಾಮಾಜಿಕ ಜಾಲತಾಣಗಳು, ಸ್ಮಾರ್ಟ್‌ಫೋನ್‌ಗಳ ಬಳಕೆಯ ಪ್ರಭಾವದಿಂದ ಶಾಲಾ ಮಕ್ಕಳಲ್ಲಿ ದಿನದಿಂದ ದಿನಕ್ಕೆ ಓದುವ ಹವ್ಯಾಸ ಕುಂಠಿತವಾಗುತ್ತಿರುವುದನ್ನು ಸಾಕಷ್ಟು ಅಧ್ಯಯನ ವರದಿಗಳು ಖಚಿತಪಡಿಸಿವೆ. ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸುವುದಕ್ಕಾಗಿ ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ “ಓದುವ ಹವ್ಯಾಸ ಜ್ಞಾನದ ವಿಕಾಸ’ ಎಂಬ ವಿನೂತನ ಪ್ರಯತ್ನಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ.

ಈ ವಿನೂತನ ಯೋಜನೆಯಡಿ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳು ವಾರದಲ್ಲಿ ಒಂದು ಅವಧಿ ಗ್ರಂಥಾಲಯದಲ್ಲಿ ಕಳೆಯುವುದು ಮತ್ತು ಪ್ರತಿ ಶಾಲೆಯು ಅತ್ಯುತ್ತಮ ಗ್ರಂಥಾಲಯ ಹೊಂದುವುದನ್ನು ಕಡ್ಡಾಯ ಗೊಳಿಸಲಾಗಿದೆ. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ “ಮಕ್ಕಳ ಸ್ನೇಹಿ ಗ್ರಂಥಾಲಯ’ ಅಥವಾ “ಓದುವ ಮೂಲೆ’ (ರೀಡಿಂಗ್‌ ಕಾರ್ನರ್‌) ಸ್ಥಾಪನೆ, ಗ್ರಂಥಾಲಯದ ಅವಧಿ ಅಥವಾ ಯಾವುದೇ ಸಮಯದಲ್ಲಿ ಯಾವುದೇ ಅಡಚಣೆ ಇಲ್ಲದೆ ಮಕ್ಕಳು ಸ್ವತಂತ್ರವಾಗಿ ಈ ಸ್ಥಳವನ್ನು ಬಳಸಿಕೊಳ್ಳವುದು, ಮಕ್ಕಳಿಗೆ ಸುಲಭವಾಗಿ ಪುಸ್ತಕಗಳು ದೊರೆಯುವಂತೆಯೂ ಮಾಡುವುದು ಸೇರಿ ಅನೇಕ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಮಕ್ಕಳ ಬೌದ್ಧಿಕ ವಿಕಾಸದ ದೃಷ್ಟಿಯಿಂದ ರಾಜ್ಯ ಸರಕಾರದ ಈ ನಡೆಯು ಅತ್ಯುತ್ತಮ ಹೆಜ್ಜೆಯಾಗಿದೆ.

ಕೋವಿಡ್‌ ಕಾಲಘಟ್ಟದಲ್ಲಿ ದೊಡ್ಡವರೂ ಸೇರಿದಂತೆ ಮಕ್ಕಳೂ ಸ್ಮಾರ್ಟ್‌ ಫೋನ್‌ ಮೊರೆ ಹೋಗುವುದು ಅನಿವಾರ್ಯವಾಗಿತ್ತು. ಕಲಿಕೆಗೆ ಬೇರೆ ದಾರಿಯೇ ಇರಲಿಲ್ಲ. ಆಗ ನೆರವಿಗೆ ಬಂದಿದ್ದೇ ಸ್ಮಾರ್ಟ್‌ಫೋನ್‌ಗಳು ಅಥವಾ ಆನ್‌ಲೈನ್‌ ಮೂಲಕ ಕಲಿಯುವ ಪದ್ಧತಿ. ಆದರೆ ಶೈಕ್ಷಣಿಕ ವ್ಯವಸ್ಥೆಯು ಕೋವಿಡ್‌ ಪೂರ್ವ ಸ್ಥಿತಿಗೆ ಮರಳಿ, ಶಾಲೆಗಳು ಎಂದಿನಂತೆ ಆರಂಭವಾದರೂ ಮಕ್ಕಳು ಮಾತ್ರ ಫೋನ್‌ಗಳನ್ನು ಕೆಳಗಿಟ್ಟಿಲ್ಲ! ಇಂಥ ಪರಿಸ್ಥಿತಿಯಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದು ಸುಲಭದ ಮಾತಲ್ಲ.

6ರಿಂದ 10 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಕಲಿಕೆ ಸರಿಯಲ್ಲ ಎಂದು ವಿಶ್ವ ಸಂಸ್ಥೆಯೂ ಶಿಫಾರಸು ಮಾಡಿದೆ. ಡಿಜಿಟಲ್‌ ಕಲಿಕೆ ಆಧುನಿಕ ಕಾಲದ ಅಗತ್ಯವಾದರೂ ಮಕ್ಕಳ ಒಟ್ಟಾರೆ ಕಲಿಕೆಯನ್ನು ಅದು ಪರಿಣಾಮಕಾರಿಯಾಗಿ ಪ್ರತಿನಿಧಿಸುವುದಿಲ್ಲ. ಸಾಂಪ್ರದಾಯಿಕ ಮಾದರಿ ಅಂದರೆ, ಓದುವುದು, ಬರೆಯುವುದು, ಕೇಳುವುದು, ತಿಳಿದುಕೊಳ್ಳುವಂಥ ಪ್ರಕ್ರಿಯೆಗಳು ಹೆಚ್ಚು ಪರಿಣಾಮಕಾರಿಯಾಗಿರುತ್ತವೆ. ಈ ಒಟ್ಟು ಪ್ರಕ್ರಿಯೆಗೆ ಓದುವ ಹವ್ಯಾಸವು ಪೂರಕವಾಗಿರುತ್ತದೆ. ಹಾಗಾಗಿ ಮಕ್ಕಳನ್ನು ಮತ್ತೆ ಓದುವ ಹವ್ಯಾಸದ ಹಳಿಗೆ ತರುವುದು ಈಗಿನ ತುರ್ತೂ ಹೌದು.

ಓದುವ ಹವ್ಯಾಸವು ಮಕ್ಕಳಲ್ಲಿ ಶಬ್ದ ಭಂಡಾರ ವೃದ್ಧಿಸಲು ಕಾರಣವಾಗುತ್ತದೆ. ಮಕ್ಕಳ ಗ್ರಹಿಕಾ ಸಾಮರ್ಥ್ಯ, ಏಕಾಗ್ರತೆಯ ಶಕ್ತಿ, ಭಾಷಾ ಕೌಶಲ ಮತ್ತು ಸೃಜನಾತ್ಮಕ ಬರವಣಿಗೆಗೆ ಪೂರಕವಾಗಿರುತ್ತದೆ. ಜತೆಗೆ ವಿಮಶಾìತ್ಮಕ ಚಿಂತನೆ, ತಾರ್ಕಿಕತೆ, ವಿಶ್ಲೇಷಣೆ ಸಾಮರ್ಥ್ಯ, ಸಾರಾಂಶ ಮಾಡುವ ಕ್ಷಮತೆ, ಕಲ್ಪನಾ ಶಕ್ತಿ, ಸೃಜನಶೀಲತೆಯನ್ನು ಬೆಳೆಸುವಲ್ಲಿ ಓದುವ ಹವ್ಯಾಸವು ಅತ್ಯಂತ ಪ್ರಮುಖ ಸಾಧನವಾಗಿದೆ. ಹಾಗಾಗಿ “ಓದುವ ಹವ್ಯಾಸ ಜ್ಞಾನದ ವಿಕಾಸ’ ಎಂಬ ನೂತನ ಕಾರ್ಯಕ್ರಮ ಕೇವಲ ಆರಂಭಶೂರತ್ವಕ್ಕೆ ಸೀಮಿತವಾಗಿರದೆ ಸಮರ್ಪಕವಾಗಿ ಜಾರಿಗೊಳಿಸುವತ್ತ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಏಕೆಂದರೆ ಸರಕಾರದ ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳು ಭಾರೀ ಸದ್ದಿನೊಂದಿಗೆ ಆರಂಭವಾಗಿ, ಅನಂತರ ಸದ್ದಿಲ್ಲದೇ ಮರೆಯಾಗುತ್ತವೆ. ಎಲ್ಲಕ್ಕೂ ಮಿಗಿಲಾಗಿ ಶಾಲೆಗಳಲ್ಲಿ ಸುಸಜ್ಜಿತ ಗ್ರಂಥಾಲಯ ಸ್ಥಾಪನೆಗೆ ಗಮನನೀಡಬೇಕು. ಮಕ್ಕಳ ಸಮಗ್ರ ಬೆಳವಣಿಗೆಗೆ ಪೂರಕವಾಗಿರುವ ಈ ಯೋಜನೆಯನ್ನು ಯಾವುದೇ ಲೋಪಕ್ಕೆ ಅವಕಾಶ ಇಲ್ಲದಂತೆ ಜಾರಿಗೊಳಿಸಬೇಕು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.