Udupi; ಜನಪ್ರೀತಿಯಿಂದ ದೇವರ ಪ್ರೀತಿಗೂ ಪಾತ್ರ: ಐಕಳ ಹರೀಶ್‌ ಶೆಟ್ಟಿ

ರಮಾನಂದ ಶೆಟ್ಟಿ, ಅಶ್ವಿ‌ನಿ ಆರ್‌. ಶೆಟ್ಟಿ ದಂಪತಿಗೆ ಶ್ರದ್ಧಾಂಜಲಿ ಸಭೆ

Team Udayavani, Jul 30, 2024, 1:24 AM IST

Ramanada-Sheety

ಉಡುಪಿ: ಒಳ್ಳೆಯ ಕೆಲಸವನ್ನು ಮಾಡುವುದರ ಮೂಲಕ ಜನರ ಪ್ರೀತಿ ಗಳಿಸಿದ ವ್ಯಕ್ತಿಯ ಆತ್ಮವು ಅವರು ಗತಿಸಿದ ಅನಂತರ ದೇವರಪಾದ ಸೇರಿ ದೇವರು ಆ ಆತ್ಮವನ್ನು ಸೂಕ್ತ ರೀತಿಯಲ್ಲಿ ನೋಡಿಕೊಳ್ಳುತ್ತಾರೆ ಎಂಬ ನಂಬಿಕೆ ಜನರಲ್ಲಿದೆ. ರಮಾನಂದ ಶೆಟ್ಟಿ ಹಾಗೂ ಅಶ್ವಿ‌ನಿ ಆರ್‌. ಶೆಟ್ಟಿ ತಮ್ಮ ದುಡಿಮೆಯಲ್ಲಿ ಸ್ವಲ್ಪ ಅಂಶವನ್ನು ಸಮಾಜಕ್ಕೆ ನೀಡುವ ಮೂಲಕ ಸೇವೆ ಮಾಡಿದ್ದಾರೆ ಎಂದು ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಹೇಳಿದರು.

ಜು. 29ರಂದು ಅಂಬಾಗಿಲಿನ ಅಮೃತ್‌ ಗಾರ್ಡನ್‌ ಸಭಾಂಗಣದಲ್ಲಿ ರಮಾನಂದ ಶೆಟ್ಟಿ ಹಾಗೂ ಅಶ್ವಿ‌ನಿ ಆರ್‌.ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಹುಟ್ಟು ಸಾವಿನ ಮಧ್ಯೆ ಮಾಡಿದ ಸೇವೆಯಿಂದ ಕೀರ್ತಿ ಉಳಿಯಲಿದೆ ಎಂದು ಬಡಗಬೆಟ್ಟು ಕ್ರೆಡಿಟ್‌ ಕೋ-ಅಪರೇಟಿವ್‌ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಅಶ್ವಿ‌ನಿ ಮಾಣಿಕ್ಯ ಒಡಹುಟ್ಟಿದವರಿಗಿಂತಲೂ ಒಡನಾಡಿಯವರೊಂದಿಗೆ ಹೇಗೆ ಬದುಕಬೇಕೆಂದು ಮಾನವ ಕುಲಕ್ಕೆ ತಿಳಿಸಿಕೊಟ್ಟವರು ಅಶ್ವಿ‌ನಿ. ಅವರು ಸಾಂಸ್ಕೃತಿಕ ಚಟುವಟಿಕೆಗಳನ್ನು ಮೈಗೂಡಿಸಿಕೊಂಡು ನಮ್ಮೆಲ್ಲರಲ್ಲಿ ಸಂಚಲನ ಮೂಡಿಸಿದ ಮಾಣಿಕ್ಯ ಎಂದು ಕನ್ನಡ ಉಪನ್ಯಾಸಕಿ ಸುಜಾತಾ ಶಿವಾನಂದ ಹೇಳಿದರು.

ತಾನು ಇರುವ ಸಮಾಜಕ್ಕೆ ಏನನ್ನಾದರೂ ನೀಡಬೇಕು ಎಂಬ ಹಂಬಲ ರಮಾನಂದ ಶೆಟ್ಟಿಯವರಲ್ಲಿ ಇತ್ತು ಎಂದು ವೈನ್‌ ಮರ್ಚಂಟ್‌ ಅಸೋಸಿಯೇಶನ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್‌ ಹೆಗ್ಡೆ ಹೇಳಿದರು. ಗುರುಗಳ ಮೇಲೆ ಅಪಾರ ಭಕ್ತಿ ಹೊಂದಿದ್ದ ಅವರಿಬ್ಬರೂ ಅಗಾಧ ಪ್ರತಿಭೆ ಹೊಂದಿದ್ದರು. ಇಬ್ಬರೂ ನನ್ನ ವಿದ್ಯಾರ್ಥಿಗಳಾಗಿದ್ದರು ಎಂದು ಆದಿಉಡುಪಿ ಹಿ.ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ರಘುರಾಮ ಮಾಸ್ತರ್‌ ಅಭಿಪ್ರಾಯಪಟ್ಟರು.

ಭಾರತೀಯ ಸಂಸ್ಕೃತಿಯನ್ನು ಹೊಂದಿರುವ ಅಶ್ವಿ‌ನಿಯವರು ಸಂಘಟನ ಚತುರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್‌ ಹೇಳಿದರು. ಅನನ್ಯ ಜೀವನ ನಡೆಸಿ ಸಾವಿನಲ್ಲೂ ಜತೆಯಾದ ಇಂಥವರು ಬಹಳ ವಿರಳ ಎಂದು ಯಕ್ಷಗಾನ ಪ್ರಸಂಗಕರ್ತ ಪವನ್‌ ಕುಮಾರ್‌ ಕೆರೆ ಹೇಳಿದರು.

ಲೀಲಾವತಿ ಶೆಟ್ಟಿ, ಗಂಗಾಧರ ಶೆಟ್ಟಿ, ಭಾಸ್ಕರ ಶೆಟ್ಟಿ, ಜಯಾನಂದ ಶೆಟ್ಟಿ, ಯಶೋದಾ ಶೆಟ್ಟಿ , ಶಾಂತಾ ಶೆಟ್ಟಿ, ರತ್ನಾಕರ ಶೆಟ್ಟಿ , ಸಂಜೀವ ಶೆಟ್ಟಿ, ವಿಟ್ಟಲ ಶೆಟ್ಟಿ, ಶ್ರೀಕಾಂತ್‌ ಉಡುಪಿಕಾರ್‌, ಮಕ್ಕಳಾದ ಅಂಶುಲಾ, ಅಭೀಕ್‌, ಶಾಸಕ ಯಶ್‌ಪಾಲ್‌ ಸುವರ್ಣ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಮಾಜಿ ಶಾಸಕ ಕೆ. ರಘುಪತಿ ಭಟ್‌, ಪ್ರಮುಖರಾದ ಸುರೇಶ್‌ ಪೂಜಾರಿ, ಸತೀಶ್‌ ಕೋಟ್ಯಾನ್‌, ವಿಶ್ವನಾಥ ಬಿ. ಪಂದುಬೆಟ್ಟು, ಮನೋಹರ ಕಲ್ಮಾಡಿ, ಸತೀಶ್‌ ಪೂಜಾರಿ, ಹೇಮರಾಜ್‌ ಪೂಜಾರಿ, ಪ್ರಭಾಕರ ಶೆಟ್ಟಿ ಮತ್ತು ಕುಟುಂಬದ ಸದಸ್ಯರು, ಗಣ್ಯರು, ಪ್ರಮುಖರು ಉಪಸ್ಥಿತರಿದ್ದರು.
ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.