Uppinangady: ತ್ಯಾಜ್ಯ ಸಂಗ್ರಹ ಶುಲ್ಕ ವಸೂಲಿ ಸಂಜೀವಿನಿ ಹೆಗಲಿಗೆ

34 ನೆಕ್ಕಿಲಾಡಿ ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ನಿರ್ಣಯ

Team Udayavani, Jul 30, 2024, 11:25 AM IST

sabhe

ಉಪ್ಪಿನಂಗಡಿ: ಸಿಬಂದಿ ಕೊರತೆಯಿಂದ ತ್ಯಾಜ್ಯ ಸಂಗ್ರಹ ಶುಲ್ಕ ವಸೂಲಾತಿಗೆ ತೊಂದರೆಯಾಗುತ್ತಿರುವ ವಿಚಾರ ಭಾರೀ ಚರ್ಚೆಗೆ ಕಾರಣವಾದಾಗ ಒಂದೋ ಹೆಚ್ಚುವರಿ ಸಿಬಂದಿ ಕೊಡಿ ಇಲ್ಲದಿದ್ದರೆ ಸಭೆ ಕರೆದು ಆ ಜವಾಬ್ದಾರಿಯನ್ನು ಸಂಜೀವಿನಿಯವರಿಗೆ ಒಪ್ಪಿಸಿ ಎಂದು 34 ನೆಕ್ಕಿಲಾಡಿ ಗ್ರಾ.ಪಂ.ನ ಸಾಮಾನ್ಯ ಸಭೆಯಲ್ಲಿ ಪಿಡಿಒ ಸತೀಶ್‌ ಕೆ. ಬಂಗೇರ ಸಲಹೆ ನೀಡಿದಾಗ ಅದಕ್ಕೆ ಸದಸ್ಯರು ಸಮ್ಮತಿಸಿದರು.

ಗ್ರಾ.ಪಂ. ಅಧ್ಯಕ್ಷೆ ಸುಜಾತಾ ಆರ್‌. ರೈ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ತ್ಯಾಜ ಸಂಗ್ರಹ ವಿಷಯ ಪ್ರಸ್ತಾವಿಸಿದ ಸದಸ್ಯ ಪ್ರಶಾಂತ್‌ ಕುಮಾರ್‌, ತ್ಯಾಜ್ಯ ವಿಲೇವಾರಿ ಮಾಡುವವರಿಗೆ ನಾವು ತಿಂಗಳಿಗೆ 75 ಸಾವಿರ ರೂಪಾಯಿ ಕೊಡುತ್ತೇವೆ. ಆದರೆ ಕಸ ಸಂಗ್ರಹಕ್ಕೆ ಗ್ರಾಮಸ್ಥರಿಂದ ಶುಲ್ಕ ವಸೂಲಾತಿ ಆಗುತ್ತಿಲ್ಲ. ರಸ್ತೆ ಇದ್ದರೂ ಕೆಲವು ಕಡೆ ಕಸದ ವಾಹನ ಬರುತ್ತಿಲ್ಲ. ಅವರು ಸಮಯ ಪಾಲನೆಯನ್ನೂ ಮಾಡುತ್ತಿಲ್ಲ. ಗೇಟ್‌ನಲ್ಲಿ ಕಸವನ್ನು ಇಟ್ಟರೆ ಅವರು ತೆಗೆದುಕೊಳ್ಳುವುದಿಲ್ಲ. ಅವರು ಸಮಯ ಪಾಲನೆ ಮಾಡದೆ ಇರುವುದರಿಂದ ಕೆಲಸಕ್ಕೆ ಹೋಗುವವರಿಗೆ ಕಷ್ಟವಾಗುತ್ತಿದೆ.

ಅನಧಿಕೃತ ಅಂಗಡಿ ತೆರವು ಮಾಡಿ

ಬೇರಿಕೆ ಬಸ್‌ ನಿಲ್ದಾಣ ಬಳಿಯ ರಾಜ್ಯ ಹೆದ್ದಾರಿಯ ಮಾರ್ಜಿನ್‌ನಲ್ಲಿ ಅನಧಿಕೃತ ತರಕಾರಿ ಅಂಗಡಿಯೊಂದಿದ್ದು, ಅದನ್ನು ತೆರವುಗೊಳಿಸಬೇಕೆಂದು ಅರ್ಜಿ ಕೊಟ್ಟಿರುವ ವಿಷಯದಲ್ಲಿ ಚರ್ಚೆ ನಡೆದು, ಅದನ್ನು ತೆರವುಗೊಳಿಸಲು ಸದಸ್ಯರು ಸೂಚಿಸಿದರು. ಆಗ ಪಿಡಿಒ ಅವರು ನಾನು ತೆರವು ಮಾಡುತ್ತೇನೆ. ಆದರೆ ಸದಸ್ಯರೂ ಬರಬೇಕು ಎಂದರು. ಆಗ ಪ್ರಶಾಂತ್‌ ಕುಮಾರ್‌ ಮಾತನಾಡಿ ಸದಸ್ಯರು ಯಾಕೆ? ನಮ್ಮ ಅಧ್ಯಕ್ಷರನ್ನು ಕರೆದುಕೊಳ್ಳಿ ಎಂದರು. ಆಗ ಅಧ್ಯಕ್ಷರು ತೆರವುಗೊಳಿಸುವ ಜವಾಬ್ದಾರಿ ಅಧಿಕಾರಿಯವರದ್ದು. ಅದಕ್ಕೆ ನಾವು ಯಾಕೆ? ನೀವೇ ಹೋಗಿ ತೆರವುಗೊಳಿಸಿ ಎಂದರು.

ಪ್ರಮುಖ ವಿಚಾರಗಳು

ಗ್ರಂಥಾಲಯ ಸಿಬಂದಿ ತರಬೇತಿ ವೆಚ್ಚ ಗ್ರಾ.ಪಂ.ನ ನಿಧಿ- 1ರಿಂದ ಪಾವತಿಸಲು ಸದಸ್ಯರ ಆಕ್ಷೇಪ.

ದರ್ಬೆ ಟಿ.ಸಿ.ಯಲ್ಲಿ ಹೊಸ ತಂತಿ ಅಳವಡಿಸಲು ಆಗ್ರಹ.

34 ನೆಕ್ಕಿಲಾಡಿ ಗ್ರಾ.ಪಂ.ನ ಗ್ರಾಮಸಭೆಯನ್ನು ಆ.13ಕ್ಕೆನಡೆಸಲು ನಿರ್ಣಯ.

ಇಂದಾಜೆ ನೆಡುತೋಪಿನಿಂದ ಮರ ಕಡಿದು ಬಾಕಿಯಿರಿಸಿದ ಹಣ ಪಾವತಿಗೆ ಸಾಮಾಜಿಕ ಅರಣ್ಯ ಇಲಾಖೆಗೆ ಪತ್ರ ಬರೆಯಲು ನಿರ್ಣಯ.

ಪ್ರತೀ ತಿಂಗಳು ಒಂದೊಂದು ವಾರ್ಡ್‌ನಿಂದ ಶುಲ್ಕ ವಸೂಲಾತಿ ಜವಾಬ್ದಾರಿಯನ್ನು ಪಂಚಾಯತ್‌ನ ಸಿಬಂದಿಗೆ ನೀಡಿ. ಅದರ ಕಮಿಷನ್‌ ಕೂಡಾ ಅವರಿಗೆ ನೀಡಿ ಎಂದರು. ಅದಕ್ಕುತ್ತರಿಸಿದ ಪಿಡಿಒ ಇಲ್ಲಿ ಸ್ವತ್ಛತ ಸಿಬಂದಿಯಿದ್ದರೂ ಅವರಿಗೆ ವಸೂಲಾತಿಯ ಅಧಿಕಾರವಿಲ್ಲ. ಶುಲ್ಕ ವಸೂಲಾತಿಗಾಗಿ ಇಲ್ಲಿಗೆ ಹೆಚ್ಚುವರಿ ಸಿಬಂದಿ ಬೇಕಾಗಿದ್ದಾರೆ. ಅದಕ್ಕೆ ನಿರ್ಣಯ ಮಾಡಿ. ಈಗಾಗಲೇ ಇದರ ಜವಾಬ್ದಾರಿಯನ್ನು ಸಂಜೀವಿನಿಯವರಿಗೆ ನೀಡಬೇಕೆಂಬ ಸರಕಾರದ ಸುತ್ತೋಲೆ ಇದೆ. ಅವರು ಅದನ್ನು ಮಾಡಲೇ ಬೇಕು. ಆದ್ದರಿಂದ ಪಂಚಾಯತ್‌ ಸದಸ್ಯರು ಅವರ ಸಭೆ ಕರೆದು ಆ ಸಭೆಯಲ್ಲಿ ಅವರಿಗೆ ಜವಾಬ್ದಾರಿಯನ್ನು ಹೊರಿಸಿ ಎಂದರು. ಇದಕ್ಕೆ ಸದಸ್ಯರು ಸಮ್ಮತಿ ಸೂಚಿಸಿದರು.

ಗುತ್ತಿಗೆ ವಹಿಸಿದವರೇ ಸರಿ ಮಾಡಿಕೊಡಬೇಕು
34 ನೆಕ್ಕಿಲಾಡಿ- ಬೊಳುವಾರು ರಾಜ್ಯ ಹೆದ್ದಾರಿಯಲ್ಲಿ ಬೇರಿಕೆ – ಬೊಳಂತಿಲದ ತನಕ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭ ಗ್ರಾ.ಪಂ.ನ ಕುಡಿಯುವ ನೀರಿನ ಪೈಪ್‌ಗೆ ಹಾನಿಯುಂಟಾದರೆ ಅದನ್ನು ಗುತ್ತಿಗೆ ವಹಿಸಿದವರೇ ಸರಿಮಾಡಿಕೊಡಬೇಕು. ಚರಂಡಿಯನ್ನೂ ಸರಿಯಾಗಿ ದುರಸ್ತಿ ಮಾಡಿಕೊಡಬೇಕು ಎಂದು ಸದಸ್ಯರು ಆಗ್ರಹಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಹರೀಶ್‌ ಡಿ., ಸದಸ್ಯರಾದ ಸ್ವಪ್ನ, ವಿಜಯಕುಮಾರ್‌, ವೇದಾವತಿ, ತುಳಸಿ, ಹರೀಶ್‌ ಕೆ., ಕೆ. ರಮೇಶ ನಾಯ್ಕ, ರತ್ನಾವತಿ, ಎ. ಗೀತಾ ಚರ್ಚೆಯಲ್ಲಿ ಭಾಗವಹಿಸಿದರು. ಗ್ರಾ.ಪಂ. ಪಿಡಿಒ ಸತೀಶ ಕೆ. ಬಂಗೇರ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.