Ullal: ಸರ್ವೇ ಕಾರ್ಯ ಮುಗಿದ ಕೂಡಲೇ ಫಲಾನುಭವಿಗಳಿಗೆ ನಿವೇಶನ ಲಭ್ಯ
ವಸತಿ ರಹಿತರಿಗೆ ರಾಜೀವ ಗಾಂಧಿ ವಸತಿ ಯೋಜನೆಯಡಿ ಭೂಮಿ ವಿತರಣೆಗೆ ಸಿದ್ಧತೆ
Team Udayavani, Jul 30, 2024, 11:44 AM IST
ಉಳ್ಳಾಲ: ಹರೇಕಳ ಗ್ರಾಮದ ಮಲಾರ ಬಳಿ 15 ವರ್ಷಗಳ ಹಿಂದೆ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟಿರುವ ಜಮೀನನ್ನು ಗ್ರಾಮದ ವಸತಿ ರಹಿತರಿಗೆ ರಾಜೀವ ಗಾಂಧಿ ವಸತಿ ಯೋಜನೆಯಡಿ ಹಂಚಲು ಮಂಜೂರು ಮಾಡಿದ್ದು, ಇದೀಗ ಸರ್ವೇ ಕಾರ್ಯ ಮುಗಿದ ಕೂಡಲೇ ಸಂಬಂಧಪಟ್ಟ ಇಲಾಖೆಯ ಮೂಲಕ ಅಭಿವೃದ್ಧಿಪಡಿಸಿ ಫಲಾನುಭವಿಗಳಿಗೆ ಹಂಚಲು ಕ್ರಮ ಕೈಗೊಳ್ಳಲಾಗುವುದು ಎಂದು ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು ಹೇಳಿದರು.
ಹರೇಕಳ ಗ್ರಾಮ ಪಂಚಾಯತ್ನಲ್ಲಿ ಜನಪ್ರತಿ ನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹರೇಕಳ ಗ್ರಾಮದ ಮಲಾರ್ ಮತ್ತು ರಾಜುಗುಡ್ಡೆ ಪ್ರದೇಶದಲ್ಲಿ ವಸತಿ ಯೋಜನೆಗಾಗಿ ಮೀಸಲಿಟ್ಟ ಜಮೀನಿನ ಮಾಹಿತಿ ಪಡೆದ ಬಳಿಕ ಮಲಾರ ಬಳಿಯಿರುವ ಜಮೀನು ಪರಿಶೀಲನೆ ನಡೆಸಿ ಮಾತನಾಡಿದ ಅವರು ಈಗಾಗಲೇ ಗ್ರಾಮದಲ್ಲಿ 400ಕ್ಕೂ ಹೆಚ್ಚು ವಸತಿ ರಹಿತರ ಅರ್ಜಿ ಸಲ್ಲಿಕೆಯಾಗಿದ್ದು, ಸರ್ವೇ ಬಳಿಕ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆಯಾಗಲಿದೆ. ಪಂಚಾಯತ್ನ ಜನಪ್ರತಿನಿಧಿಗಳ ಮುತು ವರ್ಜಿಯಿಂದ ಈ ಕಾರ್ಯ ಸಂಪನ್ನ ಗೊಂಡಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ, ಮಾಜಿ ಅಧ್ಯಕ್ಷೆ ಅನಿತಾ ಡಿ’ಸೋಜಾ, ಅಭಿವೃದ್ಧಿ ಅಧಿಕಾರಿ ಮುತ್ತಪ್ಪ ಡಿ., ಕಾರ್ಯದರ್ಶಿ ತಾರಾಕ್ಷಿ, ಸದಸ್ಯರಾದ ಅಬ್ದುಲ್ ಸತ್ತಾರ್ ನ್ಯೂಪಡ್ಪು, ಅಬೂಬಕ್ಕರ್ ಸಿದ್ದಿಕ್, ಅನೀಸ್, ತಾಲೂಕು ಕಂದಾಯ ನಿರೀಕ್ಷಕ ಪ್ರಮೋದ್, ಗ್ರಾಮಕರಣಿಕೆ ಅಕ್ಷತಾ ಮೊದಲಾದವರು ಉಪಸ್ಥಿತರಿದ್ದರು.
9.50 ಎಕ್ರೆ ಜಮೀನು ಮೀಸಲು
ಹರೇಕಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಮಜೀದ್ ಎಂ.ಪಿ. ಮಾತನಾಡಿ, ಈಗಾಗಲೇ ಕೆಲವು ಸಂಘಟನೆಗಳು ನಿವೇಶನಕ್ಕಾಗಿ ಪ್ರತಿಭಟನೆ ನಡೆಸಿವೆ. ನಿವೇಶನ ರಹಿತರಿಗೆ ಪಂಚಾಯತ್ ಈಗಾಗಲೇ 9.50 ಎಕ್ರೆ ಜಮೀನು ಮೀಸಲಿಡಲಿಟ್ಟಿದ್ದು, ಗಡಿ ಗುರುತಿಗಾಗಿ ಸರ್ವೇಯರ್ ಬಂದಿದ್ದಾರೆ. ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆ ಶೀಘ್ರ ಈಡೇರಲಿದೆ ಎಂದು ತಿಳಿಸಿದರು.
ಸರ್ವೇ ಬಳಿಕ ಅರ್ಹರ ಪಟ್ಟಿ ತಯಾರಿ
ನಿವೇಶನ ಸಮಿತಿ ಅಧ್ಯಕ್ಷ ಬದ್ರುದ್ದೀನ್ ಫರೀದ್ ನಗರ ಮಾತನಾಡಿ, ನಿವೇಶನ ವಿಚಾರ ಪ್ರತೀ ಗ್ರಾಮಸಭೆಯಲ್ಲೂ ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಹರೇಕಳ ಎಲ್ಲ ವಿಚಾರದಲ್ಲೂ ಮೊದಲ ಸ್ಥಾನದಲ್ಲಿದೆ. ಮೀಸಲು ಜಮೀನು ಸರ್ವೇ ಆದ ಬಳಿಕ ಅರ್ಹರ ಪಟ್ಟಿ ತಯಾರಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.