Uttar Pradesh: ಲವ್ ಜಿಹಾದ್ ಆರೋಪ ಸಾಬೀತಾದ್ರೆ ಜೀವಾವಧಿ ಶಿಕ್ಷೆ-ಕಾಯ್ದೆಗೆ ತಿದ್ದುಪಡಿ
2017ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಲವ್ ಜಿಹಾದ್ ಪ್ರಮುಖ ವಿಷಯಗಳಲ್ಲಿ ಒಂದಾಗಿತ್ತು.
Team Udayavani, Jul 30, 2024, 12:41 PM IST
ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ಹಾಲಿ ಇರುವ “ ಲವ್ ಜಿಹಾದ್” ಕಾಯ್ದೆಗೆ ತಿದ್ದುಪಡಿ ತಂದಿದ್ದು, ಈ ಕಾಯ್ದೆಯಡಿ ದೋಷಿ ಎಂದು ಸಾಬೀತಾದರೆ ಜೀವಾವಧಿ ಶಿಕ್ಷೆ ಗುರಿಯಾಗಬೇಕಾಗಲಿದೆ ಎಂದು ವರದಿ ತಿಳಿಸಿದೆ.
ಉತ್ತರಪ್ರದೇಶ ಕಾನೂನು ಬಾಹಿರ ಧಾರ್ಮಿಕ ಮತಾಂತರ ನಿಷೇಧ (ತಿದ್ದುಪಡಿ-Amendment) ಮಸೂದೆಯಲ್ಲಿ ಲವ್ ಜಿಹಾದ್ ಅಪರಾಧದಲ್ಲಿ ತೊಡಗಿದ್ದವರಿಗೆ ಭಾರೀ ಮೊತ್ತದ ದಂಡ ವಿಧಿಸುವುದರ ಜೊತೆಗೆ, ಜೀವಾವಧಿ ಶಿಕ್ಷೆ ನೀಡುವಂತೆ ಪ್ರಸ್ತಾಪಿಸಿರುವುದಾಗಿ ತಿಳಿಸಿದೆ.
ಆದಿತ್ಯನಾಥ್ ನೇತೃತ್ವದ ಸರ್ಕಾರ ಲವ್ ಜಿಹಾದ್ ಬಗ್ಗೆ ಕಠಿನ ನಿಲುವು ತಳೆದಿತ್ತು. 2017ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಲವ್ ಜಿಹಾದ್ ಪ್ರಮುಖ ವಿಷಯಗಳಲ್ಲಿ ಒಂದಾಗಿತ್ತು.
ನೂತನ ಮಸೂದೆಯಲ್ಲಿ ಪ್ರಕರಣದ ಸಂತ್ರಸ್ತರ ಔಷಧೋಪಚಾರದ ಖರ್ಚನ್ನು ಭರಿಸಲು ನ್ಯಾಯಾಲಯಗಳಿಗೆ ದಂಡ ವಿಧಿಸುವ ಅವಕಾಶವನ್ನೂ ನೀಡಲಾಗಿದೆ ಎಂದು ವರದಿ ವಿವರಿಸಿದೆ.
ಲವ್ ಜಿಹಾದ್ ತಿದ್ದುಪಡಿ ಕಾಯ್ದೆಯಲ್ಲಿ ಲವ್ ಜಿಹಾದ್ ಕುರಿತು ಯಾರು ಬೇಕಾದರು ವರದಿ (ದೂರು) ಮಾಡಬಹುದಾಗಿದೆ. ಹಿಂದಿನ ಕಾಯ್ದೆಯಲ್ಲಿ ಲವ್ ಜಿಹಾದ್ ಬಗ್ಗೆ ಕೇವಲ ಸಂತ್ರಸ್ತೆ, ಅವರ ಪೋಷಕರು, ಸಹೋದರ, ಸಹೋದರಿ ಮಾತ್ರ ದೂರು ನೀಡಬಹುದಾಗಿತ್ತು. ಆದರೆ ನೂತನ ಮಸೂದೆಯಲ್ಲಿ ಯಾರು ಬೇಕಾದರೂ ಪೊಲೀಸರಿಗೆ ದೂರು ನೀಡಬಹುದಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.