
Nethravathi River: ಅಪಾಯದ ಮಟ್ಟ ಮೀರಿದ ನೇತ್ರಾವತಿ; ಬಂಟ್ವಾಳದ ಹಲವೆಡೆ ಮನೆಗಳಿಗೆ ನೀರು
ಧಾರಾಕಾರ ಮಳೆ: ಬಿ.ಸಿ.ರೋಡು- ಪೊಳಲಿ ರಸ್ತೆಯ ಅಮ್ಟಾಡಿ ಬಳಿ ಗುಡ್ಡ ಕುಸಿತ
Team Udayavani, Jul 30, 2024, 1:57 PM IST

ಬಂಟ್ವಾಳ: ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬಂಟ್ವಾಳ ತಾಲೂಕಿನ ನದಿ ತೀರದ ಸಾಕಷ್ಟು ಮನೆಗಳು ಮುಳುಗಡೆಯಾಗಿದೆ. ತಾಲೂಕಿನ ಪಾಣೆಮಂಗಳೂರು, ಬಂಟ್ವಾಳ, ನಾವೂರು, ಸರಪಾಡಿ, ಮಣಿನಾಲ್ಕೂರು ಗ್ರಾಮಗಳಲ್ಲಿ ಕೃಷಿ ತೋಟಗಳು, ಗದ್ದೆಗಳು ಮುಳುಗಡೆಯಾಗಿದೆ.
ಬಂಟ್ವಾಳ- ಜಕ್ರಿಬೆಟ್ಟು ರಸ್ತೆಯ ಕೋಟೆಕಣಿ, ಬಿ.ಸಿ.ರೋಡಿನ ಬಸ್ತಿಪಡ್ಪು, ಆಲಡ್ಕ ಪ್ರದೇಶ ಮೊದಲಾದ ಪ್ರದೇಶದಲ್ಲಿ ರಸ್ತೆಗೆ ನೀರು ಬಿದ್ದು ಸಂಚಾರ ಕಡಿತಗೊಂಡಿದೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಧಾರಾಕಾರ ಮಳೆಗೆ ಬಿ.ಸಿ.ರೋಡು- ಪೊಳಲಿ ರಸ್ತೆಯ ಅಮ್ಟಾಡಿ ಬಳಿ ಗುಡ್ಡ ಕುಸಿತ:
ಬಂಟ್ವಾಳ: ಧಾರಾಕಾರ ಮಳೆಯ ಪರಿಣಾಮ ಬಿ.ಸಿ.ರೋಡು- ಪೊಳಲಿ ರಸ್ತೆಯ ಅಮ್ಟಾಡಿ ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಕಡಿತಗೊಂಡಿದೆ. ಬಿ.ಸಿ.ರೋಡು- ಪುಂಜಾಲಕಟ್ಟೆಯ ಹಲವೆಡೆ ಮಣ್ಣು ಕುಸಿದು ಹೆದ್ದಾರಿ ಬಿದ್ದಿದೆ.
ಮಾವಿನಕಟ್ಟೆ- ಅಜಿಲಮೊಗರು ರಸ್ತೆಯಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಮಣಿನಾಲ್ಕೂರು ಗ್ರಾಮದ ಡೆಚ್ಚಾರ್ ಬಳಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿರುವ ಜತೆಗೆ ಕೃಷಿ ಭೂಮಿಗೆ ಮಣ್ಣು ಬಿದ್ದಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.