Rain: ತುಂಗಾ ತೀರದಲ್ಲಿ ದಿಢೀರ್ ಪ್ರವಾಹ ಭೀತಿ; ಬಿದನೂರು ನಗರದಲ್ಲಿ 316 ಮಿಮೀ ದಾಖಲೆ ಮಳೆ
Team Udayavani, Jul 30, 2024, 3:13 PM IST
ಶಿವಮೊಗ್ಗ: ಇನ್ನೇನು ಮಳೆ ಕಡಿಮೆಯಾಯ್ತು ಎಂದು ನಿಟ್ಟುಸಿರು ಬಿಟ್ಟಿದ್ದ ಜನರಿಗೆ ವರುಣದೇವ ಶಾಕ್ ಕೊಟ್ಟಿದ್ದಾನೆ. ಮಲೆನಾಡು ಭಾಗದಲ್ಲಿ ದಿಢೀರ್ ಭಾರೀ ಮಳೆಯಿಂದ ತುಂಗಾ ತೀರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.
ಸೋಮವಾರ ಬೆಳಗ್ಗೆ 35 ಸಾವಿರ ಕ್ಯೂಸೆಕ್ಸ್ಗೆ ಕುಸಿದಿದ್ದ ತುಂಗಾ ನದಿ ಒಳಹರಿವು ಮಂಗಳವಾರ ಬೆಳಗ್ಗೆಗೆ 50 ಸಾವಿರ ಕ್ಯೂಸೆಕ್ಸ್ಗೆ ಏರಿಕೆಯಾಗಿದೆ. ಮಧ್ಯಾಹ್ನ 2 ಗಂಟೆ ಹೊತ್ತಿಗೆ 77 ಸಾವಿರ ಕ್ಯೂಸೆಕ್ಸ್ಗೆ ದಾಟಿದ್ದು ಸಂಜೆ ಹೊತ್ತಿಗೆ 90 ರಿಂದ 1 ಲಕ್ಷ ಕ್ಯೂಸೆಕ್ಸ್ವರೆಗೂ ಏರಿಕೆಯಾಗುವ ಸಾಧ್ಯತೆ ಇದೆ. ತೀರ್ಥಹಳ್ಳಿಯ ರಾಮಮಂಟಪ ಇದೇ ಮೊದಲ ಬಾರಿಗೆ ಮುಳುಗಿದ್ದು ಪ್ರವಾಹದ ಮನ್ಸೂಚನೆ ತೋರಿಸಿದೆ. ರಾತ್ರಿವರೆಗೂ ಮಳೆ ಇಲ್ಲ ಎಂದು ಸುಮ್ಮನಾಗಿದ್ದ ನೀರಾವರಿ ಇಲಾಖೆ ಅಧಿಕಾರಿಗಳು ಕ್ಷಣಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ.
ಬಿದನೂರು ನಗರದಲ್ಲಿ 316 ಮಿಮೀ ಮಳೆ:
ಮಂಗಳವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಬಿದನೂರುನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ 316 ಮಿ.ಮೀ. ಮಳೆ ದಾಖಲಾಗಿದೆ. ಇದರಿಂದ ನಗರ ವ್ಯಾಪ್ತಿಯಲ್ಲಿ ಪ್ರವಾಹ ಎದುರಾಗಿತ್ತು. ಕೆಲ ಶಾಲೆಗಳಿಗೆ ರಹೆ ಸಹ ನೀಡಲಾಗಿತ್ತು.
ಮಾಸ್ತಿಕಟ್ಟೆ 240 ಮಿಮೀ, ಚಕ್ರಾನಗರ 220 ಮಿಮೀ, ಯಡೂರು 217 ಮಿಮೀ, ಹುಲಿಕಲ್ 210 ಮಿಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.