Rainy Season; ಅನಾರೋಗ್ಯದಿಂದ ದೂರ ಇರಲು ರೋಗ ನಿರೋಧಕ ಶಕ್ತಿ ಅಗತ್ಯ; ಈ ಆಹಾರಗಳು ಉತ್ತಮ
ಕಾವ್ಯಶ್ರೀ, Jul 30, 2024, 7:07 PM IST
ಹವಾಮಾನ ಬದಲಾವಣೆ ಆಗುವ ಸಂದರ್ಭ ಅನಾರೋಗ್ಯ ಉಂಟಾಗುವುದು ಸಾಮಾನ್ಯ ಸಂಗತಿ. ಅದರಲ್ಲೂ ಮಳೆಗಾಲದಲ್ಲಿ ಅನಾರೋಗ್ಯ ಎದುರಾಗುವುದು ಸಾಮಾನ್ಯ. ಅದ್ದರಿಂದ ಮಳೆಗಾಲದಲ್ಲಿ ಅನಾರೋಗ್ಯವನ್ನು ದೂರ ಮಾಡಬೇಕಾದರೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಅಗತ್ಯ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದು ಬಹಳ ಮುಖ್ಯ.
ರೋಗನಿರೋಧಕ ಶಕ್ತಿ ನಮ್ಮ ದೇಹವನ್ನು ಸಾಂಕ್ರಾಮಿಕ ಜೀವಿಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿ ನಮ್ಮ ದೇಹದಲ್ಲಿ ಇರದಿದ್ದರೆ ನಮ್ಮ ದೇಹಕ್ಕೆ ಹಲವಾರು ರೀತಿಯ ಬ್ಯಾಕ್ಟೀರಿಯ, ವೈರಸ್ ಮತ್ತು ಇತರ ರೋಗಕಾರಕಗಳು ಆಕ್ರಮಿಸುತ್ತದೆ.
ಇದನ್ನು ತಡೆಯಲು ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಉತ್ತಮ ಮಟ್ಟದಲ್ಲಿರುವುದು ಅಗತ್ಯವಾಗಿದೆ. ರೋಗ ನಿರೋಧಕ ಶಕ್ತಿ ನಮ್ಮ ದೇಹದಲ್ಲಿದ್ದರೆ ನಮಗೆ ರೋಗಗಳು ಪದೇ ಪದೇ ಕಾಡುವುದಿಲ್ಲ. ಆದ್ದರಿಂದ ನಾವು ಆರೋಗ್ಯವಾಗಿ ಇರಬೇಕೆಂದರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿನ ಪ್ರಮಾಣದಲ್ಲಿ ಇರಬೇಕಾಗುತ್ತದೆ.
ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಆಗಾಗ ಜ್ವರ, ಕೆಮ್ಮು ಮತ್ತು ನೆಗಡಿ ಹಾಗೂ ಇತರ ಕಾಯಿಲೆಗಳು ಬರುತ್ತಿರುತ್ತದೆ. ಇಂತಹವರು ತಮ್ಮ-ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಅತ್ಯಗತ್ಯ. ರೋಗಗಳು ಆಗಾಗ ಕಾಡುತ್ತಿರುವವರು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು. ಇದಕ್ಕಾಗಿ ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಹಳ ಮುಖ್ಯ.
ದೇಹದಲ್ಲಿರುವ ಎಲ್ಲಾ ಜೀವಕೋಶಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಪೌಷ್ಟಿಕಾಂಶ ಅಗತ್ಯ. ಖಾಯಿಲೆಗಳು ಬಂದರೆ ನಮ್ಮ ದೇಹದಲ್ಲಿರುವ ಪೌಷ್ಟಿಕಾಂಶ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಹೀಗಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದು ಅಗತ್ಯವಾಗಿದೆ. ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಏನು ಮಾಡಬೇಕು? ಯಾವ ಆಹಾರಗಳನ್ನು ಸೇವಿಸಬಹುದು ಎಂದು ತಿಳಿದುಕೊಳ್ಲಲು ಮುಂದೆ ಓದಿ…
ಮೊದಲನೆಯದಾಗಿ ನಮ್ಮ ಆಹಾರದ ಕ್ರಮ ಬದಲಾಯಿಸಿಕೊಳ್ಳಬೇಕು. ಫಾಸ್ಟ್ ಫುಡ್, ಜಂಕ್ ಫುಡ್ ಗಳ ಬದಲಾಗಿ ಸೊಪ್ಪು, ತರಕಾರಿ, ಹಣ್ಣುಗಳನ್ನು ಹೆಚ್ಚಾಗಿ ಸೇವಿಸಬೇಕು.
ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಹಣ್ಣು, ಮೋಸಂಬಿ ಹಣ್ಣು, ನಿಂಬೆಹಣ್ಣು, ದ್ರಾಕ್ಷಿ ಹಣ್ಣುಗಳನ್ನು ಸೇವಿಸಬೇಕು. ಹುಳಿ ಮತ್ತು ಸಿಹಿ ಮಿಶ್ರಣದ ಈ ಹಣ್ಣುಗಳು ನಮ್ಮ ದೇಹದಲ್ಲಿ ಸೋಂಕುಗಳ ವಿರುದ್ಧ ಹೋರಾಡುವ ಗುಣವನ್ನು ಹೊಂದಿದೆ. ಇದರ ಸೇವನೆ ನಮಗೆ ಕೆಮ್ಮು, ಕಫ, ನೆಗಡಿಯಂತಹ ರೋಗಗಳಿಂದ ಕಾಪಾಡಲು ನಮ್ಮ ದೇಹದ ತಾಪಮಾನ ಹೆಚ್ಚಿಸಿ ರೋಗ ತಡೆಯಲು ಸಹಾಯ ಮಾಡುತ್ತದೆ.
ನಮ್ಮ ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಾಗುವಂತೆ ಮಾಡಿ, ಬಿಳಿ ರಕ್ತಕಣಗಳ ಸಂಖ್ಯೆಯನ್ನು ಅಭಿವೃದ್ಧಿಪಡಿಸಿ ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸಲು ಕೂಡಾ ಸಿಟ್ರಸ್ ಹಣ್ಣುಗಳು ಸಹಾಯ ಮಾಡುತ್ತದೆ.
ಮೊಟ್ಟೆಗಳು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಇದು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ಮೀನು ಮತ್ತು ಕೋಳಿ ಮಾಂಸ ಕೂಡ ನಮ್ಮ ಆರೋಗ್ಯಕ್ಕೆ ಒಳ್ಳೆಯದು. ಈ ಮೂರೂ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮಾಂಸಹಾರಿಗಳಾಗಿದ್ದರೆ ಇದು ಉತ್ತಮ ಆಹಾರಗಳಲ್ಲಿ ಒಂದು.
ಮೊಳಕೆ ಕಾಳುಗಳು, ಬಾದಾಮಿ, ವಾಲ್ನಟ್ಸ್, ಗೋಡಂಬಿ, ಕುಂಬಳಕಾಯಿ ಬೀಜಗಳು, ಚಿಯಾ ಬೀಜಗಳು, ಅಗಸೆ ಬೀಜಗಳನ್ನು ಸೇವಿಸುವುದರಿಂದ ಕೂಡಾ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.
ನಮ್ಮ ಆಹಾರದಲ್ಲಿ ಶುಂಠಿ, ಲವಂಗ, ಕರಿಮೆಣಸು, ದಾಲ್ಚಿನ್ನಿ ಮತ್ತು ಅರಿಶಿನವನ್ನು ಬಳಸಿ ಪ್ರತಿನಿತ್ಯ ಸೇವಿಸುವುದರಿಂದಲೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.
ಹೂಕೋಸು, ಎಲೆಕೋಸು ಜಾತಿಗೆ ಸೇರಿದ ಬ್ರೊಕೋಲಿ ಕೂಡಾ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರಲ್ಲಿರುವ ವಿಟಮಿನ್ ಎ, ಸಿ, ಇ ಮತ್ತು ಅನೇಕ ಬಗೆಯ ಅಂಶ ನಮ್ಮ ದೇಹಕ್ಕೆ ಉಪಯುಕ್ತವಾಗಿದೆ.
ಹಾಲು ಮತ್ತು ಹಾಲಿನ ಉತ್ಪನ್ನಗಳ ಸೇವನೆಯಿಂದ ದೇಹಕ್ಕೆ ಬೇಕಾಗುವ ಶಕ್ತಿ ದೊರೆಯುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಮಾತ್ರವಲ್ಲದೇ ಹಸಿರು ತರಕಾರಿಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಸಲು ಬಯಸುವವರು ಮಸಾಲೆ ಹೆಚ್ಚಿರುವ, ಎಣ್ಣೆ ಪದಾರ್ಥ ಹೊಂದಿರುವ ಆಹಾರದಿಂದ ದೂರ ಇರುವುದು ಅಗತ್ಯ.
ಮಳೆಗಾಲ ಈಗಾಗಲೇ ಆರಂಭವಾಗಿದೆ. ರೋಗ ಬರದಂತೆ ತಡೆಯಲು ನಿಮ್ಮ ದೇಹದಲ್ಲಿಸ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ರೋಗಳಿಂದ ದೂರವಿದ್ದು, ಆರೋಗ್ಯವಾಗಿರಿ.
ಕಾವ್ಯಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!
International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ
Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್ ಪ್ಯಾಕ್; ಇದರ ಲಾಭವೇನು ಗೊತ್ತಾ?
South Indian actors: ನಾಗಾರ್ಜುನ್ ಟು ವಿಜಯ್; ದಕ್ಷಿಣ ಭಾರತದ ಶ್ರೀಮಂತ ನಟರು ಯಾರ್ಯಾರು
Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Congress Manifesto; ಕಣಿವೆ ರಾಜ್ಯದ ಭೂರಹಿತ ಕೃಷಿಕರಿಗೆ 99 ವರ್ಷ ಭೂಗುತ್ತಿಗೆ
ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ
Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್ ತಡೆ: ವಿಶ್ವಸಂಸ್ಥೆ ಆರೋಪ
Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!
Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.