Yadagiri; ಮುಂಬೈಯಲ್ಲಿ ಪ್ರೀತಿಸಿದ ಯುವತಿಯ ಕೊಲೆ; ಯಾದಗಿರಿಯಲ್ಲಿ ಆರೋಪಿ ಬಂಧನ
Team Udayavani, Jul 30, 2024, 7:56 PM IST
ಯಾದಗಿರಿ: ತಾನು ಪ್ರೀತಿಸಿದ ಯುವತಿಯನ್ನೇ ಮುಂಬಯಿಯಲ್ಲಿ ಬರ್ಬರವಾಗಿ ಕೊಲೆಗೈದು ತಲೆ ಮರಿಸಿಕೊಂಡಿದ್ದ ಕರ್ನಾಟಕ ಮೂಲದ ದಾವೂದ್ ಯಾದಗಿರಿ ಜಿಲ್ಲೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಮುಂಬಯಿ ಪೊಲೀಸರು ದಾವೂದ್ ನನ್ನು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ದಾವೂದ್ ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಂಗರಗಾ ಗ್ರಾಮದವನಾಗಿದ್ದು, ಫೇಸ್ಬುಕ್ ಮೂಲಕ ಯಶಶ್ರೀ ಎಂಬ ಯುವತಿಯನ್ನು ಪ್ರೀತಿಸಿ ಫೋನ್ ಸಂಪರ್ಕದಲ್ಲಿದ್ದ. 2019ರಲ್ಲಿಯೇ ಯುವತಿಗೆ ಕಿರುಕುಳ ನಿಡಿದ ಆರೋಪವೂ ಆತನ ಮೇಲಿತ್ತು, ಈ ಯುವತಿಯ ಪ್ರಕರಣದಲ್ಲಿಯೇ ಒಂದು ಭಾರಿ ಜೈಲುವಾಸವೂ ಅನುಭಸಿದ್ದ ದಾವೂದ್ ಜುಲೈ 27ರಂದು ಮುಂಬಯಿಯಲ್ಲಿ ಯಶಶ್ರೀ (25) ಯುವತಿಯನ್ನು ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ನಂತರ ಪರಾರಿಯಾಗಿ ಜಿಲ್ಲೆಯ ಶಹಾಪುರ ತಾಲೂಕಿನ ಆಲ್ದಾಳ ಗ್ರಾಮದಲ್ಲಿ ಸಂಬಂಧಿಕರ ಮನೆಯಲ್ಲಿ ಅಡಗಿ ಕುಳಿತಿದ್ದ ಆರೋಪಿ ದಾವೂದ್ ನನ್ನು ಮುಂಬಯಿ ಪೊಲೀಸರು ಸೆರೆಹಿಡಿ ಹಿಡಿದಿದ್ದಾರೆ. ಯಶಶ್ರೀ ಕೊಲೆ ಪ್ರಕರಣ ಬೆನ್ನತ್ತಿದ ಮುಂಬೈ ಮುಂಬಯಿ ನಗರ ಠಾಣೆ ಪೊಲೀಸರು ನಾಲ್ಕು ತಂಡ ರಚಿಸಿದ್ದರು. ಒಂದು ತಂಡ ಯಾದಗಿರಿಗೆ ಆಗಮಿಸಿ ಸೋಮವಾರ ರಾತ್ರಿ ಆರೋಪಿ ಅಡಗಿದ್ದ ಸ್ಥಳ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಏನಿದು ಪ್ರಕರಣ.?
ಜುಲೈ 27 ಶನಿವಾರ ಯುವತಿಯ ಮೃತದೇಹ ರಕ್ತದ ಮಡುವಿನಲ್ಲಿ ನವೀ ಮುಂಬೈನಲ್ಲಿ ಪತ್ತೆಯಾಗಿತ್ತು. ಮೃತ ಯುವತಿಯನ್ನು 25 ವರ್ಷದ ಯಶಶ್ರೀ ಎಂದು ಗುರುತಿಸಲಾಗಿತ್ತು. ಮೃತ ದೇಹವು ಆಕೆಯ ಎದೆ, ಸೊಂಟ, ಬೆನ್ನು ಮತ್ತು ಆಕೆಯ ಖಾಸಗಿ ಭಾಗಗಳಲ್ಲಿ ಹಲವಾರು ಇರಿತದ ಗಾಯಗಳನ್ನು ಹೊಂದಿದೆ ಎಂದು ವರದಿಯಾಗಿದೆ. ಆಕೆಯ ಮೂಳೆಗಳು ಮುರಿದಿವೆ ಎಂದು ಪೊಲೀಸರು ಹೇಳಿದ್ದಾರೆ.
ದಾವೂದ್ ಶೇಖ್ ಎಂಬಾತ ಆಕೆಯನ್ನು ಕೊಂದಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಪೊಲೀಸರ ಪ್ರಕಾರ, ದಾವೂದ್ 2019ರಲ್ಲಿ ಅಪ್ರಾಪ್ತ ವಯಸ್ಸಿನವನಾಗಿದ್ದಾಗ ಯಶಶ್ರೀಗೆ ಕಿರುಕುಳ ನೀಡಿದ ಆರೋಪದ ಮೇಲೆ ಈ ಹಿಂದೆ ಬಂಧಿಸಲಾಗಿತ್ತು. ಜುಲೈ 25 ರಂದು (ಗುರುವಾರ) ಯಶಶ್ರೀ ಶಿಂಧೆ ನಾಪತ್ತೆಯ ಬಗ್ಗೆ ಆಕೆಯ ಪೋಷಕರು ಪ್ರಕರಣವನ್ನು ದಾಖಲಿಸಿದ್ದರು. ಆದರೆ, ಎರಡು ದಿನಗಳ ಬಳಿಕ ಶನಿವಾರ ಆಕೆಯ ಶವ ಅತ್ಯಂತ ಭೀಕರ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.