WayanadLandslide; ಮನೆಯವರ ಪ್ರಾಣ ಕಾಪಾಡಿ ಪ್ರವಾಹದಲ್ಲಿ ಕೊಚ್ಚಿಹೋದ ಹಸು…!


Team Udayavani, Jul 30, 2024, 9:26 PM IST

Wayanad landslides

ಚಾಮರಾಜನಗರ: ಹಸುವೊಂದು ಅಂಬಾ ಎಂದು ಅರಚಿಕೊಂಡು ಮನೆಯಲ್ಲಿದ್ದವರನ್ನು ರಕ್ಷಿಸಿ ತಾನು ನೀರಿನಲ್ಲಿ ಕೊಚ್ಚಿಕೊಂಡು ಹೋದ ಹೃದಯ ವಿದ್ರಾವಕ ಘಟನೆ ಕೇರಳ ವಯನಾಡು ಜಿಲ್ಲೆ ಗುಡ್ಡ ಕುಸಿತ ಪ್ರಕರಣದಲ್ಲಿ ನಡೆದಿದ್ದು, ಅಲ್ಲಿ ಪಾರಾದವರು ಚಾಮರಾಜನಗರ ಪಟ್ಟಣದ ಉಪ್ಪಾರ ಬೀದಿಯವರ ಹತ್ತಿರದ ಸಂಬಂಧಿಗಳಾಗಿದ್ದಾರೆ.

ಚಾಮರಾಜನಗರ ಪಟ್ಟಣದ ಉಪ್ಪಾರ ಬೀದಿಯ ಲಕ್ಷ್ಮಮ್ಮ ಅವರು ವಯನಾಡು ಜಿಲ್ಲೆಯ ಮೇಪ್ಪಾಡಿಯ ಕೃಷ್ಣಾ ಎಂಬುವವರನ್ನು ಮದುವೆಯಾಗಿದ್ದಾರೆ. ಲಕ್ಷ್ಮಮ್ಮ ಅವರ ಮಗಳು ಪ್ರವೀದಾ ಅವರು ಮೇಪ್ಪಾಡಿಯಿಂದ 4 ಕಿ.ಮೀ. ದೂರದ  ಚೂರಲ್‌ಮಲಾದ ವಿನೋದ್ ಅವರನ್ನು ವಿವಾಹವಾಗಿದ್ದಾರೆ.

ಹೆರಿಗೆಗೆಂದು ಮೆಪ್ಪಾಡಿಯಲ್ಲಿನ ತಾಯಿ ಮನೆಗೆ ಪ್ರವೀದಾ ಬಂದಿದ್ದರು. ಪ್ರವೀದಾ ಪತಿ ವಿನೋದ್ ಚೂರಲ್‌ಮಲಾದಲ್ಲೇ ಇದ್ದರು. ಸೋಮವಾರ ಮಧ್ಯರಾತ್ರಿ ವಿನೋದ್ ಅವರ ಕೊಟ್ಟಿಗೆಯಲ್ಲಿದ್ದ ಹಸು ಒಂದೇ ಸಮನೆ ಅರಚಿಕೊಂಡಿದೆ. ಆಗ ನಿದ್ದೆಯಿಂದ ಎಚ್ಚರಗೊಂಡ ವಿನೋದ್ ಕೊಟ್ಟಿಗೆಗೆ ಹೋಗಿ ನೋಡಿದ್ದಾರೆ. ಕೊಟ್ಟಿಗೆಗೆ ನೀರು ತುಂಬಿಕೊಳ್ಳುತ್ತಿರುವುದನ್ನು ನೋಡಿದ ವಿನೋದ್ ತಕ್ಷಣ ತಮ್ಮ ಕುಟುಂಬದವರನ್ನು ಎತ್ತರದ ಗುಡ್ಡ ಕ್ಕೆ ಕರೆದೊಯ್ದು ಅಪಾಯದಿಂದ ಪಾರಾಗಿದ್ಧಾರೆ. ಈ ಸಂದರ್ಭದಲ್ಲಿ ಹಸು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

ಚೂರಲ್‌ಮಲಾದಿಂದ ನಾಲ್ಕು ಕಿ.ಮೀ. ದೂರದ ಮೆಪ್ಪಾಡಿಯಲ್ಲಿದ್ದ ಪ್ರವೀದಾ ಈ ಘಟನೆಯ ಬಳಿಕ ತನ್ನ ತಂದೆ ತಾಯಿಯೊಡನೆ ತಾಯಿಯ ಊರಾದ ಚಾಮರಾಜನಗರಕ್ಕೆ ಮರಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವೀದಾ, ಗುಡ್ಡದಲ್ಲಿ ಸಿಲುಕಿರುವ ತಮ್ಮ ಪತಿಯನ್ನು ರಕ್ಷಿಸಿ ಕರೆತರಬೇಕು ಎಂದು ಮನವಿ ಮಾಡಿದರು. ವಿನೋದ್ ತಮ್ಮ ಜೊತೆ ಫೋನ್ ಸಂಪರ್ಕದಲ್ಲಿದ್ದಾರೆ. ಆ ಗುಡ್ಡದಲ್ಲಿ ವಿನೋದ್ ಅವರ ಜೊತೆ ಇನ್ನೂ ಹಲವಾರು ಜನರಿದ್ದಾರೆಂದು ತಿಳಿಸಿದ್ದಾರೆ. ಗುಡ್ಡ ಕುಸಿತವಾದ ಚೂರಲ್‌ಮಲಾದಲ್ಲಿ ಸಾವಿರಾರು ಜನ ವಾಸವಿದ್ದರು ಎಂದು ಪ್ರವೀದಾ ತಿಳಿಸಿದರು.

ಇದನ್ನೂ ಓದಿ:Wayanad landslides; ಪ್ರಕೃತಿಯ ಮುನಿಸಿಗೆ ಒಂದು ಪಟ್ಟಣವೇ ಕೊಚ್ಚಿ ಹೋಗಿದೆ…

ದಂಪತಿಗಳಿಬ್ಬರ ರಕ್ಷಣೆ- ಇನ್ನೊಂದು ಜೋಡಿ ಕಾಣೆ

ಚೂರಲ್‌ಮಲಾದಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ನಗರ ಮೂಲದ ದಂಪತಿಯನ್ನು ರಕ್ಷಿಸಲಾಗಿದ್ದು, ತಾಲೂಕಿನ ಇರಸವಾಡಿ ಗ್ರಾಮದ ದಂಪತಿ ಕಾಣೆಯಾಗಿದ್ದಾರೆ.

ನಗರದ ಉಪ್ಪಾರ ಬೀದಿಯ ನಿವಾಸಿಗಳಾಗಿದ್ದು, ಚೂರಲ್‌ಮಲಾದಲ್ಲಿ ಉದ್ಯೋಗಕ್ಕೆಂದು ವಲಸೆ ಹೋಗಿದ್ದ ಮಹದೇವಸ್ವಾಮಿ ಮತ್ತು ಸುಜಾತಾ ದಂಪತಿಯನ್ನು ಎನ್‌ಡಿಆರ್‌ಎಫ್ ತಂಡ ರಕ್ಷಿಸಿದೆ. ಇಬ್ಬರನ್ನೂ ಮೇಪ್ಪಾಡಿಯ ಶಾಲೆಯಲ್ಲಿ ತೆರೆಯಲಾಗಿರುವ ಶಿಬಿರಕ್ಕೆ ಕಳುಹಿಸಲಾಗಿದೆ. ಈ ವಿಷಯನ್ನು ಮಹದೇವಸ್ವಾಮಿ ಬಂಧುಗಳು ತಿಳಿಸಿದ್ದಾರೆ.

ಇಬ್ಬರು ದಂಪತಿ ಕಾಣೆ

ಘಟನೆಯಲ್ಲಿ ತಾಲೂಕಿನ ಇರಸವಾಡಿ ಮೂಲದ, ವಯನಾಡು ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ವಾಸವಿದ್ದ ರಾಜೇಂದ್ರ (55) ಹಾಗೂ ರತ್ನಮ್ಮ (45) ಕಾಣೆಯಾಗಿದ್ದಾರೆಂದು ತಿಳಿದುಬಂದಿದೆ. ಈ ದಂಪತಿ ಕೆಲವು ವರ್ಷಗಳ ಹಿಂದೆ ನಾಗವಳ್ಳಿಯಲ್ಲಿ ಪೆಟ್ಟಿಗೆ ಅಂಗಡಿ ಇಟ್ಟುಕೊಂಡಿದ್ದರು. ಕೆಲಸಕ್ಕಾಗಿ ಕೇರಳಕ್ಕೆ ವಲಸೆ ಹೋಗಿದ್ದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.