Kerala Rains: ಗುಂಡ್ಲುಪೇಟೆ-ಕೇರಳ ಸಂಪರ್ಕ ಕಡಿತ; ಬದಲಿ ಮಾರ್ಗ ಇಲ್ಲಿದೆ


Team Udayavani, Jul 30, 2024, 10:04 PM IST

Kerala Rains: ಗುಂಡ್ಲುಪೇಟೆ-ಕೇರಳ ಸಂಪರ್ಕ ಕಡಿತ; ಬದಲಿ ಮಾರ್ಗ ಇಲ್ಲಿದೆ

ಗುಂಡ್ಲುಪೇಟೆ(ಚಾಮರಾಜನಗರ): ಕೇರಳದಲ್ಲಿ ಅಧಿಕ ಮಳೆಯಾಗುತ್ತಿರುವ ಕಾರಣ ಮುತ್ತಂಗ ಚೆಕ್ ಪೋಸ್ಟ್ ಸಮೀಪದ ಹೆದ್ದಾರಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇದರ ಪರಿಣಾಮ ಕರ್ನಾಟಕದ ಮೂಲೆಹೊಳೆ ಚೆಕ್ ಪೋಸ್ಟ್ ಬಂದ್ ಮಾಡಿ, ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇದರಿಂದ ಗುಂಡ್ಲುಪೇಟೆ ಕೇರಳ ಸಂಪರ್ಕ ಕಡಿತವಾಗಿದೆ.

ಗುಂಡ್ಲುಪೇಟೆ-ಕೇರಳ ರಾಷ್ಟ್ರೀಯ ಹೆದ್ದಾರಿ-766 ಮಾರ್ಗವಾಗಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುತ್ತಿದ್ದವು. ಆದರೆ ವಯನಾಡಿನಲ್ಲಿ ಗುಡ್ಡ ಕುಸಿತ ಹಾಗೂ ಮಳೆ ಹೆಚ್ಚಳವಾದ ಪರಿಣಾಮ ಮೂಲೆಹೊಳೆ ಮೂಲಕ ಅಧಿಕ ನೀರು ಹರಿದು ಬರುತ್ತಿದೆ.

ಇದರಿಂದ ಕೇರಳದ ಮುತ್ತಂಗ ಬಳಿಯ ಹೆದ್ದಾರಿಯಲ್ಲಿ ಹೆಚ್ಚಿನ ಪ್ರಮಾಣದ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಮಂಗಳವಾರ ಸಂಜೆಯಿಂದ ಬಂಡೀಪುರ ವ್ಯಾಪ್ತಿಯ ಮೂಲೆಹೊಳೆ ಚೆಕ್ ಪೋಸ್ಟ್ ಬಂದ್ ಮಾಡಲಾಗಿದ್ದು, ಪೊಲೀಸರು ಹಾಗು ಅರಣ್ಯಾಧಿಕಾರಿಗಳ ನೇತೃತ್ವದ ತಂಡ ಮದ್ದೂರು ಗೇಟ್ ನಿಂದಲೇ ವಾಹನಗಳನ್ನು ವಾಪಸ್ ಕಳುಹಿಸುತ್ತಿದ್ದಾರೆ.

ಮಾರ್ಗ ಬದಲಾವಣೆ: ಜಿಲ್ಲಾಧಿಕಾರಿ ಆದೇಶದ ಮೇರೆಗೆ ಗುಂಡ್ಲುಪೇಟೆ ಕೇರಳ ರಾಷ್ಟ್ರೀಯ ಹೆದ್ದಾರಿ 766ರ ಮೂಲೆಹೊಳೆ ಚೆಕ್ ಪೋಸ್ಟ್ ಅನ್ನು ತಾಲೂಕು ಆಡಳಿತದ ವತಿಯಿಂದ ಬಂದ್ ಮಾಡಲಾಗಿದೆ. ಕೇರಳದ ಕಡೆಗೆ ಹೋಗುವ ವಾಹನಗಳನ್ನು ಪಟ್ಟಣದ ಊಟಿ ಸರ್ಕಲ್ ಬಳಿ ಪೊಲೀಸರು ತಡೆದು ತಮಿಳುನಾಡಿನ ಗೂಡಲೂರು ಮೂಲಕ ಬದಲಿ ಮಾರ್ಗವಾಗಿ ತೆರಳು ಸೂಚನೆ ನೀಡುತ್ತಿದ್ದಾರೆ. ಇದರಿಂದ ವಾಹನ ಸವಾರರಿಗೆ 70 ಕಿ.ಮೀ ಹೆಚ್ಚುವರಿಯಾಗಲಿದೆ.

ಕೂಲಿ ಕಾರ್ಮಿಕರಿಗೆ ತೊಂದರೆ: ತಾಲೂಕಿನಿಂದ ಕೇರಳದ ಸುಲ್ತಾನ್ ಬತ್ತೇರಿಗೆ ಪ್ರತಿನಿತ್ಯ 200ಕ್ಕೂ ಅಧಿಕ ಮಂದಿ ಕೂಲಿ ಕೆಲಸಕ್ಕೆ ತೆರಳುತ್ತಾರೆ. ಇದೀಗ ಗುಂಡ್ಲುಪೇಟೆ ಕೇರಳ ರಾಷ್ಟ್ರೀಯ ಹೆದ್ದಾರಿ 766 ಬಂದ್ ಮಾಡಿರುವುದರಿಂದ ಕಾರ್ಮಿಕರಿಗೆ ಆತಂಕ ಎದುರಾಗಿದ್ದು, ವಿಧಿಯಿಲ್ಲದೆ ಬದಲಿ ಮಾರ್ಗ ತಮಿಳುನಾಡಿನ ಮೂಲಕ ಗುಂಡ್ಲುಪೇಟೆಗೆ ಬರಬೇಕಾಗಿದೆ.

ವಯನಾಡಿಗೆ ತೆರಳಿದ ಗುಂಡ್ಲುಪೇಟೆ ತಹಸೀಲ್ದಾರ್ ನೇತೃತ್ವದ ತಂಡ:
ಗುಂಡ್ಲುಪೇಟೆಯು ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ಹಿನ್ನಲೆ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ತಾಲೂಕು ಅಥವಾ ಜಿಲ್ಲೆಯ ಜನರು ಸಿಲುಕಿರಬಹುದು ಎಂಬ ಶಂಕೆಯಿಂದ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಗುಂಡ್ಲುಪೇಟೆ ತಹಸೀಲ್ದಾರ್ ಟಿ.ರಮೇಶ್ ಬಾಬು ನೇತೃತ್ವದಲ್ಲಿ ಓರ್ವ ಸಬ್ ಇನ್ಸ್ ಪೆಕ್ಟರ್, ಇಬ್ಬರು ಪೊಲೀಸರ ತಂಡ ವೈನಾಡಿನ ಮುಂಡಕ್ಕೈ ಪ್ರದೇಶಕ್ಕೆ ತೆರಳಿದ್ದು, ಅಧಿಕೃತ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.