
Belagavi: ಪ್ರವಾಹಕ್ಕೆ 44 ಸೇತುವೆ ಮುಳುಗಡೆ; ಬೆಳಗಾವಿ-ಮಿರಜ ನಡುವೆ ವಿಶೇಷ ರೈಲು
Team Udayavani, Jul 30, 2024, 9:38 PM IST

ಬೆಳಗಾವಿ: ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾ ನದಿಯಿಂದ 73 ಸಾವಿರ ಕ್ಯೂಸೆಕ್ಗಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಪರಿಣಾಮವಾಗಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ.
ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಗಾವಿಯಿಂದ ಮಿರಜವರಗೆ ಪ್ಯಾಸೆಂಜರ್ ವಿಶೇಷ ರೈಲು ಪ್ರಾರಂಭಿಸಲಾಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಈ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅಗಸ್ಟ್ 1 ರಿಂದ 4 ದಿನಗಳವರೆಗೆ ಪ್ಯಾಸೆಂಜರ್ ವಿಶೇಷ ರೈಲು ಬಿಡಲು ಆದೇಶಿಸಿದ್ದಾರೆ ಎಂದು ಈರಣ್ಣ ಕಡಾಡಿ ಹೇಳಿದ್ದಾರೆ.
ಬೆಳಗಾವಿ-ಮಿರಜ ರೈಲು ಅ-01 (07301) ಮುಂಜಾನೆ 6 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಮು. 9ಕ್ಕೆ ಮಿರಜ ನಿಲ್ದಾಣ ತಲುಪಲಿದೆ.
ಮಿರಜ-ಬೆಳಗಾವಿ ರೈಲು ಸಂಖ್ಯೆ (07302) ಮುಂಜಾನೆ 9.50 ಕ್ಕೆ ಮಿರಜನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.
ಬೆಳಗಾವಿ-ಮಿರಜ ರೈಲು (07303) ಮಧ್ಯಾಹ್ನ 01.30 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಸಂಜೆ 04.30ಕ್ಕೆ ಮಿರಜ ತಲುಪಲಿದೆ.
ಮಿರಜ-ಬೆಳಗಾವಿ ರೈಲು ಸಂಖ್ಯೆ (07304) ಸಂಜೆ 05.35 ಕ್ಕೆ ಮಿರಜನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ ಎಂದು ಕಡಾಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.