Cauvery issue; ಆಗಸ್ಟ್ನಲ್ಲಿ ತ.ನಾಡಿಗೆ ಬಿಡಬೇಕಾದ ನೀರು ಜುಲೈನಲ್ಲೇ ಹರಿದಿದೆ: ಕರ್ನಾಟಕ
Team Udayavani, Jul 31, 2024, 5:58 AM IST
ನವದೆಹಲಿ: ಜುಲೈ ತಿಂಗಳಲ್ಲಿ ನಿಗದಿ ಮಾಡಿದ್ದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಕಾವೇರಿ ನೀರು ತಮಿಳುನಾಡಿಗೆ ಹರಿದಿದೆ. ಹೆಚ್ಚುವರಿಯಾಗಿ ಹರಿದಿರುವ ನೀರನ್ನು ಮುಂಬರುವ ತಿಂಗಳಿಗೆ ಬಿಡಬೇಕಾದ ನೀರಿಗೆ ಸರಿದೂಗಿಸಿಕೊಳ್ಳಬೇಕೆಂದು ಎಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣಾ ಸಮಿತಿ(ಸಿಡಬ್ಲೂಆರ್ಸಿ) ಸಭೆಯಲ್ಲಿ ಕರ್ನಾಟಕ ಸರ್ಕಾರವು ತಿಳಿಸಿದೆ.
ಜುಲೈ 28ಕ್ಕೆ ಬಿಳಿಗುಂಡ್ಲುವಿನಲ್ಲಿ ಜುಲೈ ಅಂತ್ಯಕ್ಕೆ ನಿಗದಿಪಡಿಸಿದ 40.43 ಟಿಎಂಸಿಗಿಂತ ಹೆಚ್ಚುವರಿಯಾಗಿ 36.34 ಟಿಎಂಸಿ ನೀರು ಹರಿದಿದೆ. ಜುಲೈ 29ರ ಮಾಪನದ 1,08,876 ಕ್ಯೂಸೆಕ್ಸ್ ಹರಿವನ್ನು ಪರಿಗಣನೆಗೆ ತೆಗುದುಕೊಂಡರೆ ಒಟ್ಟು 9.40 ಟಿಎಂಸಿ ಆಗುತ್ತದೆ. ಒಟ್ಟಾರೆಯಾಗಿ, ತಮಿಳುನಾಡಿನ ಬಿಳಿಗುಂಡ್ಲುವಿನಲ್ಲಿ ಜುಲೈ 29ಕ್ಕೆ 86.17 ಟಿಎಂಸಿ ನೀರು ಸೇರಿದೆ. ಈ ಒಟ್ಟಾರೆ ನೀರಿನ ಮೊತ್ತವು ಆಗಸ್ಟ್ ಅಂತ್ಯಕ್ಕೆ ಬಿಡಬೇಕಾದ ನೀರಿನ ಪ್ರಮಾಣದಷ್ಟಾಗಿದೆ ಎಂದು ಮಾಹಿತಿ ನೀಡಿತು.
1995ರ ಕಾವೇರಿ ನ್ಯಾಯಾಧಿಕರಣ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೊದಲನೇ ಸಭೆಯ ನಿರ್ಣಯದಂತೆ ಈ ಹೆಚ್ಚುವರಿ ನೀರಿನ ಪ್ರಮಾಣವನ್ನು ಮುಂಬರುವ ತಿಂಗಳುಗಳಲ್ಲಿ ಕರ್ನಾಟಕ ರಾಜ್ಯವು ಹರಿಸಬೇಕಾದ ನೀರಿನ ಮೊತ್ತಕ್ಕೆ ಜಮೆ ಮಾಡಿಕೊಳ್ಳಬೇಕೆಂದು ಕೋರಿತು.
ತಮಿಳುನಾಡಿನ ಕೋರಿಕೆ ಏನು?
ಜುಲೈ 28ರಿಂದ ಮೆಟ್ಟೂರು ಜಲಾಶಯದಿಂದ ನೀರಾವರಿಗಾಗಿ ನೀರನ್ನು ಹರಿಸಲಾಗುತ್ತಿದೆ. ಪ್ರಸ್ತುತ, 23,000 ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಬಿಡಲಾಗುತ್ತಿದೆ. 2018ರ ಸುಪ್ರೀಂ ಕೋರ್ಟ್ನ ಮಾರ್ಪಡಿತ ತೀರ್ಪಿನ ಪ್ರಕಾರ, 2024-25 ಜಲ ವರ್ಷದ ಮುಂಬರುವ ತಿಂಗಳುಗಳಲ್ಲಿ ಕರ್ನಾಟಕ ರಾಜ್ಯವು ನೀರನ್ನು ಹರಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿತು.
ಸಮಿತಿಯ ತೀರ್ಮಾನ ಏನು?
ಕರ್ನಾಟಕದ ಮಾಹಿತಿ ಮತ್ತು ತಮಿಳುನಾಡಿನ ಕೋರಿಕೆ ಆಲಿಸಿದ ಕಾವೇರಿ ನೀರು ನಿಯಂತ್ರಣಾ ಸಮಿತಿಯು, ಸದ್ಯಕ್ಕೆ ಬಿಳಿಗುಂಡ್ಲುವಿನ ಹರಿವಿನಲ್ಲಿ ಯಾವುದೇ ಆತಂಕ ಇಲ್ಲ. ಹರಿವು ಸಾಮಾನ್ಯವಾಗಿರುವುದರಿಂದ ಸಮಿತಿಯ ಮುಂದಿನ ತಿಂಗಳ ಸಭೆಯಲ್ಲಿ ಹರಿವಿನ ಪರಿಸ್ಥಿತಿಯನ್ನು ಮತ್ತೊಮ್ಮೆ ಅವಲೋಕಿಸಿ ತೀರ್ಮಾನಿಸಲಾಗುವುದು ಎಂದು ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.