Areca Nut ಕಳ್ಳಸಾಗಣೆ ಸಂಘಟಿತ ಅಪರಾಧ: ಪ್ರಭಾ ರಾವ್‌


Team Udayavani, Jul 30, 2024, 11:39 PM IST

ಅಡಿಕೆ ಕಳ್ಳಸಾಗಣೆ ಸಂಘಟಿತ ಅಪರಾಧ: ಪ್ರಭಾ ರಾವ್‌

ಬೆಂಗಳೂರು: ಭಾರತಕ್ಕೆ ಅಪಾರ ಪ್ರಮಾಣದಲ್ಲಿ ಶ್ರೀಲಂಕಾದಿಂದ ಅಡಿಕೆ ಕಳ್ಳಸಾಗಣೆ ಆಗುತ್ತಿದೆ. ಶ್ರೀಲಂಕಾದಲ್ಲಿ ಅಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆಯದಿದ್ದರೂ ಮಲೇಷ್ಯಾ, ಇಂಡೊನೇಷ್ಯಾ ಮತ್ತು ಕಾಂಬೋಡಿಯಾದಿಂದ ಶ್ರೀಲಂಕಾಕ್ಕೆ ಬಂದು ಅಲ್ಲಿಂದ ಭಾರತಕ್ಕೆ ಕಳ್ಳಸಾಗಣೆ ಆಗುತ್ತಿದೆ ಎಂದು ವ್ಯೂಹಾತ್ಮಕ ವ್ಯವಹಾರಗಳಿಗಾಗಿನ ದಕ್ಷಿಣ ಏಷ್ಯಾದ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಪ್ರಭಾ ರಾವ್‌ ಹೇಳಿದರು.

ನಗರದ ಹೋಟೆಲ್‌ನಲ್ಲಿ ಫೆಡರೇಶನ್‌ ಆಫ್ ಇಂಡಿಯನ್‌ ಚೇಂಬರ್ಸ್‌ ಆಫ್ ಕಾಮರ್ಸ್‌ ಮತ್ತು ಇಂಡಸ್ಟ್ರಿ ಕಾಸ್ಕೆಡ್‌ ಆಯೋಜಿಸಿದ್ದ “ಅಕ್ರಮ ವ್ಯಾಪಾರದ ಮೇಲೆ ಯುದ್ಧ: ಒಳನೋಟಗಳು, ಸವಾಲುಗಳು ಮತ್ತು ಪರಿಹಾರಗಳು’ ಎಂಬ ವಿಚಾರ ಸಂಕಿರಣ ದಲ್ಲಿ ಪಾಲ್ಗೊಂಡು ಮಾತನಾಡಿದರು.

ಶ್ರೀಲಂಕಾಕ್ಕೆ ಬರುವ ಅಡಿಕೆಯ ಗುಣಮಟ್ಟ ಅಷ್ಟೊಂದು ಉತ್ತಮವಾಗಿ ರುವುದಿಲ್ಲ. ಹೊಳಪು ಬರಲು ಕೆಲವು ರಾಸಾಯನಿಕಗಳನ್ನು ಬಳಸಲಾಗುತ್ತದೆ. ಅವುಗಳು ಅಪಾಯಕಾರಿಯಾಗಿದ್ದು ಕ್ಯಾನ್ಸರ್‌ ಕಾರಕವಾಗಿವೆ. ಅಡಿಕೆ ಕಳ್ಳ
ಸಾಗಣೆ ಒಂದು ಸಂಘಟಿತ ಅಪರಾಧ ವಾಗಿ ರೂಪುಗೊಂಡಿದೆ ಎಂದರು.

ಉದ್ಯೋಗ ನಷ್ಟ
ಕಳ್ಳಸಾಗಣೆಯಿಂದಾಗಿ ಕರಕುಶಲ ಕರ್ಮಿಗಳು ಸೇರಿದಂತೆ ಹಲವು ಉದ್ಯೋಗ ನಷ್ಟವಾಗುತ್ತದೆ. ನೈಜ ಪಾಶ್ಮಿನಾ ಬಟ್ಟೆಗಳಿಗಿಂತ ನಕಲಿ ಪಾಶ್ಮಿನಾ ಬಟ್ಟೆಗಳು ಮಾರುಕಟ್ಟೆಯಲ್ಲಿದ್ದು ನೈಜ ಪಾಶ್ಮಿನಾ ಬಟ್ಟೆ ತಯಾರಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಬನಾರಸ್‌ ಸಿಲ್ಕ್ ಬಟ್ಟೆ, ಕರ್ನಾಟಕದ ಬಿದರಿ ಕಲೆ ಸೇರಿದಂತೆ ಹಲವು ಕರಕುಶಲ ಕಲೆಗಳು ತೊಂದರೆಗೆ ಸಿಲುಕಿವೆ ಎಂದು ಹೇಳಿದರು.

ಕೈಗಾರಿಕೆ ಇಲಾಖೆಯ ಆಯುಕ್ತೆ ಗುಂಜನ್‌ ಕೃಷ್ಣ ಮಾತನಾಡಿ, ಕಳ್ಳಸಾಗಣೆ ಮತ್ತು ನಕಲು ಭಯೋ ತ್ಪಾದಕ ಗುಂಪುಗಳಿಗೆ ಹಣಕಾಸಿನ ನೆರವು ನೀಡುವುದರ ಜತೆಗೆ ಜಾಗತಿಕ ಭದ್ರತೆಗೆ ಅಪಾಯ ತಂದೊಡ್ಡುತ್ತದೆ. ಔಷಧದಂತಹ ವಸ್ತುಗಳ ನಕಲು ಜನರ ಆರೋಗ್ಯಕ್ಕೆ ಸಂಚಕಾರ ತರಬಲ್ಲದು. ರಾಜ್ಯ ಸರಕಾರವು ನಕಲನ್ನು ತಡೆಯಲು ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ 43 ಜಿಐ ಟ್ಯಾಗ್‌ ಆಗಿರುವ ಉತ್ಪನ್ನಗಳನ್ನು ಅಧಿಕೃತ ವ್ಯಕ್ತಿಗಳಿಂದ ಮಾತ್ರ ಮಾರಾಟ ಮಾಡುವ ಪ್ರಯತ್ನಕ್ಕೆ ಕೈ ಹಾಕಿದೆ ಎಂದರು.

ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್‌ನ ಮಾಜಿ ಮುಖ್ಯಸ್ಥ, ಎಫ್ಐಸಿಸಿಐ ಕಾಸ್ಕೆಡ್‌ನ‌ ಸಲಹೆಗಾರ ಪಿ.ಸಿ. ಝಾ ಮಾತನಾಡಿ, ಶೇ. 65ರಷ್ಟು ಉತ್ಪನ್ನ ನಕಲು ಎಂದು ಗೊತ್ತಿದ್ದೂ ಬಳಸುತ್ತಿ ದ್ದೇವೆ. ಕಳ್ಳಸಾಗಣೆ ಬಗ್ಗೆ ನಾವು ಬಿಲ್‌ ಕೇಳುವ ಮೂಲಕ ತಡೆಯುವ ಅವಕಾಶವಿದೆ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.