Mangaluru: ಟ್ಯಾಂಕರ್ ಢಿಕ್ಕಿ; ಸ್ಕೂಟರ್ ಸವಾರ ಸಾವು
Team Udayavani, Jul 31, 2024, 6:20 AM IST
ಮಂಗಳೂರು: ನಗರದ ನಂತೂರು ಪದವು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ಬೆಳಗ್ಗೆ ಟ್ಯಾಂಕರ್ ಢಿಕ್ಕಿಯಾಗಿ ಸ್ಕೂಟರ್ ಸವಾರ ಕೊಡಕ್ಕಲ್ ಕನ್ನಡಗುಡ್ಡೆ ನಿವಾಸಿ ಶಿವಾನಂದ ಶೆಟ್ಟಿ (42) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅವರು ಸ್ಕೂಟರ್ನಲ್ಲಿ ನಂತೂರು ಜಂಕ್ಷನ್ನಿಂದ ಕೆಪಿಟಿ ಕಡೆಗೆ ಹೋಗುತ್ತಿದ್ದ ಅವರು ಟ್ಯಾಂಕರ್ ಢಿಕ್ಕಿಯಾಗಿ ಹೆದ್ದಾರಿಗೆ ಬಿದ್ದರು. ಟ್ಯಾಂಕರ್ನ ಹಿಂಭಾಗದ ಚಕ್ರ ತಲೆಯ ಮೇಲೆಯೇ ಹರಿದು ಸ್ಥಳದಲ್ಲೇ ಮೃತಪಟ್ಟರು. ಕಣ್ಣೂರಿನ ವಾಚ್ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿದ್ದ ಅವರು ಮಂಗಳ ವಾರವೂ ಕೆಲಸಕ್ಕೆ ತೆರಳಿದ್ದರು. 6ರಿಂದ 10 ಗಂಟೆಯ ವರೆಗೆ ಕೆಲಸ ಮಾಡಿ ಅನಂತರ ಬ್ಯಾಂಕ್ಗೆ ಹೋಗಿ ಕೂಡಲೇ ವಾಪಸ್ ಬರುವುದಾಗಿ ಹೇಳಿ ಹೋಗಿದ್ದರು.
ಕುಟುಂಬದ ಆಧಾರ
ಬಿಜೆಪಿಯಲ್ಲಿ ಕ್ರಿಯಾಶೀಲರಾಗಿದ್ದ ಅವರು ಸ್ಥಳೀಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದರು. ಅವರ ಪತ್ನಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಶಿವಾನಂದ ಅವರ ಓರ್ವ ಪುತ್ರಿ ಎಂಟನೇ ತರಗತಿಯಲ್ಲಿ ಕಲಿಯುತ್ತಿದ್ದು ಇನ್ನೋರ್ವಳು ಎಲ್ಕೆಜಿಯಲ್ಲಿದ್ದಾಳೆ. ಶಿವಾನಂದ ಅವರು ತಾಯಿ, ಪತ್ನಿ, ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಶಿವಾನಂದ ಅವರನ್ನು ಕಳೆದುಕೊಂಡ ಕುಟುಂಬ ಆರ್ಥಿಕವಾಗಿಯೂ ಆಧಾರವನ್ನು ಕಳೆದುಕೊಂಡಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudubidire: 77 ಕೋ.ರೂ. ವೆಚ್ಚದ ಅಮೃತ್ 2.0 ನೀರಿನ ಯೋಜನೆಗೆ ಚಾಲನೆ
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ
Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು
Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.