Subhramanya: ಹೆದ್ದಾರಿಗಳು ಜಲಾವೃತ, ಸ್ನಾನಘಟ್ಟ ಮುಳುಗಡೆ
ಕೈಕಂಬದ ಕೋಟೆಸಾರ್ ಹೊಳೆಗೆ ಅಡ್ಡಲಾಗಿರುವ ಸೇತುವೆ ಮುಳುಗಿ ಸಂಚಾರ ಕಡಿತ
Team Udayavani, Jul 31, 2024, 1:10 AM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪರಿಸರ ಸೇರಿದಂತೆ ಪಶ್ಚಿಮ ಘಟ್ಟ ಮತ್ತು ಘಟ್ಟ ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಸ್ನಾನಘಟ್ಟ ಮುಳುಗಡೆಯಾಗಿದ್ದು, ಕುಕ್ಕೆ ಸಂಪರ್ಕದ ಮೂರು ಕಡೆಗಳಲ್ಲಿ ಹೆದ್ದಾರಿಗೆ ನೀರು ನುಗ್ಗಿ ಸಂಚಾರ ಕಡಿತಗೊಂಡ ಘಟನೆ ಸಂಭವಿಸಿದೆ.
ಕುಮಾರಧಾರದ ಸುಬ್ರಹ್ಮಣ್ಯ -ಪುತ್ತೂರು ಸಂಪರ್ಕ ರಸ್ತೆ ಮತ್ತು ಸೇತುವೆ ಸುಬ್ರಹ್ಮಣ್ಯದಲ್ಲಿ ನದಿ ನೀರು ನುಗ್ಗಿ ಹೆದ್ದಾರಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಸುಬ್ರಹ್ಮಣ್ಯ- ನೆಟ್ಟಣ-ಉಪ್ಪಿನಂಗಡಿ- ಮಂಗಳೂರು ಹೆದ್ದಾರಿಯ ಬಿಳಿನೆಲೆ ಗ್ರಾಮದ ಕೈಕಂಬದ ಕೋಟೆಸಾರ್ ಹೊಳೆಗೆ ಅಡ್ಡಲಾಗಿರುವ ಸೇತುವೆ ಮುಳುಗಡೆಗೊಂಡು ಸಂಚಾರ ಕಡಿತಗೊಂಡಿತು. ಪರಿಣಾಮ ಎರಡೂ ಬದಿಗಳಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸುಬ್ರಹ್ಮಣ್ಯ- ಕೈಕಂಬ-ಗುಂಡ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿ ಹೆದ್ದಾರಿಗೆ ಸಮೀಪದ ಹೊಳೆಯ ನೀರು ನುಗ್ಗಿ ಸಂಪರ್ಕ ಕಡಿತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿತು.
ಸ್ನಾನಘಟ್ಟ ಮುಳುಗಡೆ
ನೆರೆ ನೀರಿಗೆ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಗೊಂಡಿದ್ದು, ನದಿ ತೀರದಲ್ಲಿರುವ ಶ್ರೀ ದೇವರ ಜಳಕದ ಕಟ್ಟೆ ಮುಳುಗಡೆಗೊಂಡಿದೆ. ಇಲ್ಲಿನ ಶೌಚಾಲಯ ಕಟ್ಟಡ ಮುಕ್ಕಾಲು ಭಾಗ ಮುಳುಗಡೆಗೊಂಡಿದೆ. ಡ್ರೆಸ್ಸಿಂಗ್ ಕೊಠಡಿಗಳು, ಲಗೇಜ್ ಕೊಠಡಿ, ಅಂಗಡಿಗಳು ಜಲಾವೃತಗೊಂಡಿವೆ.
ಮಳೆಗೆ ಶಾಲೆಗೆ ರಜೆ
ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾಸಂಸ್ಥೆಗೆ ಗ್ರಾಮೀಣ ಭಾಗದ ದೂರ ದೂರುಗಳಿಂದ ವಿದ್ಯಾರ್ಥಿಗಳು ಆಗಮಿಸುವುದರಿಂದ ಮುಂಜಾಗ್ರತ ಕ್ರಮವಾಗಿ ಸುಬ್ರಹ್ಮಣ್ಯ ಪರಿಸರದ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಯಿತು. ಭಾರೀ ಮಳೆಯಿಂದಾಗಿ ಕುಕ್ಕೆ ದೇಗುಲದಲ್ಲಿ ಭಕ್ತರ ಸಂಖ್ಯೆ ವಿರಳಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.