Valmiki scam ಪ್ರಸ್ತಾವಿಸಿ ಕಾಂಗ್ರೆಸ್ಗೆ ನಿರ್ಮಲಾ ತಿರುಗೇಟು
ಎಸ್ಸಿ, ಎಸ್ಟಿ ವಿಷಯ ಎತ್ತುವವರು ಕರ್ನಾಟಕಕ್ಕೆ ಹೋಗಿ ನೋಡಿ: ಸಚಿವೆ
Team Udayavani, Jul 31, 2024, 7:10 AM IST
ಹೊಸದಿಲ್ಲಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ಕಡಿಮೆ ಹಣ ಮೀಸಲಿಡಲಾಗಿದೆ ಎಂದು ಕಾಂಗ್ರೆಸ್ ಆರೋಪಕ್ಕೆ ಕರ್ನಾಟಕ ಕಾಂಗ್ರೆಸ್ ಸರಕಾರದಲ್ಲಿ ನಡೆದಿದೆ ಎನ್ನಲಾದ “ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ’ ವನ್ನು ಪ್ರಸ್ತಾವಿಸಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದರು.
ಮಂಗಳವಾರ ಲೋಕಸಭೆ ಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, “ಸಂಸತ್ತಿನಲ್ಲಿ ನಮ್ಮ ಸರಕಾರವನ್ನು ಪ್ರಶ್ನಿಸುವವರು ಕರ್ನಾಟಕಕ್ಕೆ ಹೋಗಿ, ಎಸ್ಸಿ, ಎಸ್ಟಿ ಹಣ ಏನಾಗಿದೆ ಎಂದು ತಿಳಿದುಕೊಳ್ಳಿ’ ಎಂದು ಕಿಡಿ ಕಾರಿದರು. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲೇ ಇದ್ದರು.
ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರಕಾರವು ಎಸ್ಸಿ, ಎಸ್ಟಿ ಕಲ್ಯಾಣಕ್ಕಾಗಿ 9,980 ಕೋಟಿ ರೂ. ಮೀಸಲಿಟ್ಟಿತ್ತು. ಈ ಪೈಕಿ 4,301 ಕೋಟಿ ರೂ. ಹಣ ಎಲ್ಲಿಗೆ ಹೋಯಿತು ಎಂಬುದು ಯಾರಿಗೂ ಗೊತ್ತಿಲ್ಲ. ಎಸ್ಸಿ ಮತ್ತು ಎಸ್ಟಿಗಳ ಹೆಸರಿನಲ್ಲಿ ಕರ್ನಾಟಕದಲ್ಲಿ ಅತಿದೊಡ್ಡ ಹಗರಣವೇ ನಡೆದಿದೆ. ಎಸ್ಟಿಗಳ ಕಲ್ಯಾಣಕ್ಕಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಖಾಸಗಿ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಆದರೆ ಮುಖ್ಯಮಂತ್ರಿಗಳು ಕೇವಲ 89 ಕೋಟಿ ರೂ. ವರ್ಗಾವಣೆಯಾಗಿದೆ ಎನ್ನುತ್ತಾರೆ ಎಂದರು.
ರಾಹುಲ್ಗೆ ನಿರ್ಮಲಾ ತಿರುಗೇಟು
ಬಜೆಟ್ ಹಲ್ವಾ ಹಂಚಿಕೆ ಕಾರ್ಯಕ್ರಮದಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಅಧಿಕಾರಿಗಳು ಇಲ್ಲ ಎಂದು ಹೇಳುವ ಮೂಲಕ ಸಮಾಜವನ್ನು ಒಡೆಯುವ ಸಂಚು ನಡೆಸಲಾಗುತ್ತಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ನಿರ್ಮಲಾ ಕಿಡಿಕಾರಿದರು. ಎಸ್ಸಿ, ಎಸ್ಟಿ, ಒಬಿಸಿ ಬಗ್ಗೆ ಕೇಳುತ್ತಿರುವ ನಾಯಕರು ತಮ್ಮ ರಾಜೀವ್ ಗಾಂಧಿ ಧರ್ಮದರ್ಶಿ ಸಂಸ್ಥೆಯಲ್ಲಿ ಎಷ್ಟು ಎಸ್ಸಿ, ಎಸ್ಟಿ, ಒಬಿಸಿ ಟ್ರಸ್ಟಿಗಳಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಕುಟುಕಿದರು.
ಬಜೆಟ್ಗೆ ಲೋಕಸಭೆ ಅನುಮೋದನೆ
2024-25ನೇ ಹಣಕಾಸು ವರ್ಷದ 48.21 ಲಕ್ಷ ಕೋಟಿ ರೂ. ಬಜೆಟ್ಗೆ ಲೋಕಸಭೆ ಮಂಗಳವಾರ ಅನುಮೋದನೆ ನೀಡಿತು. ಇದೇ ವೇಳೆ ಜಮ್ಮು ಮತ್ತು ಕೇಂದ್ರಾಡಳಿತ ಪ್ರದೇಶದ ಬಜೆಟ್ಗೂ ಲೋಕಸಭೆ ಧ್ವನಿಮತದ ಮೂಲಕ ಒಪ್ಪಿಗೆ ನೀಡಿತು.
ಯುಪಿಎ ಸರಕಾರ 26 ರಾಜ್ಯಗಳ
ಹೆಸರನ್ನೇ ಉಲ್ಲೇಖಿಸಿರಲಿಲ್ಲ: ಸಚಿವೆ
ಬಜೆಟ್ನಲ್ಲಿ ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚು ಹಣ ನೀಡಲಾಗಿದೆ. ಎಲ್ಲ ರಾಜ್ಯಗಳನ್ನು ಹೆಸರಿಸಿಲ್ಲ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಸಚಿವೆ ನಿರ್ಮಲಾ, ಈ ವಿಷಯದಲ್ಲಿ ವಿಪಕ್ಷಗಳು ಜನರನ್ನು ತಪ್ಪುದಾರಿಗೆ ಎಳೆಯುತ್ತಿವೆ ಎಂದರು. ರಾಜ್ಯಗಳ ಹೆಸರು ಹೇಳಿಲ್ಲ ಎಂದಾಕ್ಷಣ ಬಜೆಟ್ನಲ್ಲಿ ರಾಜ್ಯಗಳನ್ನು ಸೇರಿಸಿಲ್ಲ ಎಂದರ್ಥವಲ್ಲ. ಎಡಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ 818 ಕೋಟಿ ರೂ. ನೀಡಲಾಗಿದೆ ಎಂದು ಪ್ರತ್ಯುತ್ತರ ನೀಡಿದರು. ಅಲ್ಲದೆ ಯುಪಿಎ ಆಡಳಿತದಲ್ಲಿ ಮಂಡಿಸಲಾದ ಬಜೆಟ್ನಲ್ಲಿ 26 ರಾಜ್ಯಗಳ ಹೆಸರುಗಳನ್ನೇ ಉಲ್ಲೇಖೀಸಲಾಗಿರಲಿಲ್ಲ ಎಂದರು. ಜತೆಗೆ ಯಾವ ಬಜೆಟ್ನಲ್ಲಿ ಎಷ್ಟು ರಾಜ್ಯಗಳ ಹೆಸರು ಬಿಟ್ಟು ಹೋಗಿತ್ತು ಎಂಬ ವಿವರವನ್ನೂ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.