Uppinangady: 2019ರ ಬಳಿಕ ನೇತ್ರಾವತಿ-ಕುಮಾರಾಧಾರಾ ನದಿಗಳ ಸಂಗಮ

ಪವಿತ್ರ ಸಂಗಮದ ವೇಳೆ ಶಾಸಕ ಅಶೋಕ್‌ ಕುಮಾರ್‌ ರೈ ಉಪಸ್ಥಿತಿಯಲ್ಲಿ ಬಾಗಿನ ಸಮರ್ಪಣೆ, ಗಂಗಾ ಪೂಜಾ ವಿಧಿ ವಿಧಾನ

Team Udayavani, Jul 31, 2024, 1:25 AM IST

uppinagdy

ಉಪ್ಪಿನಂಗಡಿ: ಸತತ ಮಳೆಯಿಂದಾಗಿ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳೆರಡು ಉಕ್ಕಿ ಹರಿದು ಮಂಗಳವಾರ ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ನದಿಗಳೆರಡು ಸಂಗಮಿಸಿ ಬಾಗಿನ ಸಮರ್ಪಣ, ಗಂಗಾ ಪೂಜಾ ಹಾಗೂ ಪವಿತ್ರ ಸಂಗಮ ತೀರ್ಥ ಸ್ನಾನ ಜರಗಿತು. 2019ರ ಬಳಿಕ ಇದೇ ಮೊದಲ ಬಾರಿ ಇಲ್ಲಿ ಸಂಗಮ ನೆರವೇರಿದೆ.

ಮಂಗಳವಾರ ಮಧ್ಯಾಹ್ನದಿಂದ ಅಪಾಯದ ಮಟ್ಟವನ್ನು ಮೀರಿ ಹರಿದ ನೇತ್ರಾವತಿ ದೇವಾಲಯದ ಮಹಾಕಾಳಿ ಅಮ್ಮನವರ ಗುಡಿಯನ್ನು ಆವರಿಸಿ ಹರಿಯತೊಡಗಿತು. ಆ ಬಳಿಕ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗಕ್ಕೆ ವಿಸ್ತರಿಸಿ ಹರಿಯತೊಡಗಿದ ನೇತ್ರಾವತಿ ಸಾಯಂಕಾಲ 6ಕ್ಕೆ ದೇವಾಲಯದ ಪ್ರಾಂಗಣವನ್ನು ಪ್ರವೇಶಿಸಿತು. ಆಬಳಿಕ ಕುಮಾರಧಾರಾ ನದಿಯು ಏರಿಕೆಯ ಗತಿಯನ್ನು ಕಂಡು ದೇವಾಲಯದ ಪ್ರಾಂಗಣಕ್ಕೆ ಹರಿಯತೊಡಗಿತು.

ಸಂಗಮ ವೀಕ್ಷಣೆಗೆ ಜನ ಸಾಗರ: ನದಿಗಳೆರಡು ಸಂಗಮಿಸಿ ಪವಿತ್ರ ಸಂಗಮ ಪೂಜೆ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಜನರು ದೇಗುಲದತ್ತ ಆಗಮಿಸಿದರು.

ತಗ್ಗು ಪ್ರದೇಶಗಳೆಲ್ಲ ಜಲಾವೃತ: ಅತಿಯಾದ ಮಳೆಯಿಂದಾಗಿ ಕೊಪ್ಪಳ ಎಂಬಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಉಪ್ಪಿನಂಗಡಿ ಗ್ರಾಮದ ಪಂಜಳ, ಕಜೆಕ್ಕಾರ್‌, ನೂಜಿ, ನಟ್ಟಿಬೈಲು ಪ್ರದೇಶಗಳಲ್ಲಿನ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಅಲ್ಲಿನ ಅಪಾಯಕ್ಕೆ ಸಿಲುಕಿದ ನಿವಾಸಿಗರನ್ನು ಸ್ಥಳಾಂತರಿಸಲಾಗಿದೆ.

ನೆರೆ ಭೀತಿಗೆ ಕಂಗೆಟ್ಟ ಜನತೆ : ಉಭಯ ನದಿಗಳೂ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಜತೆಗೆ ಭಾರೀ ಮಳೆಯಾಗುತ್ತಿರುವುದರಿಂದ ಈ ಬಾರಿಯೂ ಪೇಟೆ ನೆರೆ ಹಾವಳಿಗೆ ತುತ್ತಾಗುವ ಭೀತಿಯನ್ನು ಮೂಡಿಸಿದೆ.
ಹಲವು ಮನೆಗಳು ಜಲಾವೃತ: ಹಳೆಗೇಟು ಬಳಿಯ ಐತ ಮುಗೇರ ಅವರ ಮನೆಯು ನೀರಿನಿಂದ ಜಲಾವೃತಗೊಂಡಿದೆ. ಇಲ್ಲಿನ ಹಲವು ವಸತಿ ಸಂಕೀರ್ಣ, ಮನೆಗಳು ಜಲಾವೃತವಾಗಿವೆ. ಮಠ ಹಿರ್ತಡ್ಕದಲ್ಲಿ ಸುಮಾರು 4-5 ಮನೆಗಳಿಗೆ ನದಿ ನೀರಿನಲ್ಲಿ ಮುಳುಗಡೆಯಾಗುವ ಭೀತಿಯಿದೆ.

ಬಂಡೆ ಕುಸಿತದ ಭೀತಿ: ಪಂಜಳದ ರಾಷ್ಟ್ರೀಯ ಹೆದ್ದಾರಿ ಬಳಿಯ ಪೆಟ್ರೋಲ್‌ ಪಂಪ್‌ವೊಂದರ ಸಮೀಪ ಹೆದ್ದಾರಿ ಚತುಷ್ಪಥ ಕಾಮಗಾರಿಗಾಗಿ ಗುಡ್ಡವನ್ನು ಅಗೆದಿದ್ದು, ಇದು ಮಳೆಗೆ ಇನ್ನಷ್ಟು ಜರಿಯುತ್ತಿದೆ. ಈ ಗುಡ್ಡದ ನಡುವಲ್ಲಿ ಎರಡು ಬೃಹತ್‌ ಬಂಡೆಕಲ್ಲುಗಳಿದ್ದು, ಅದರಡಿಯ ಮಣ್ಣು ಮಳೆಗೆ ಕರಗುತ್ತಿರುವುದರಿಂದ ಅದು ಕುಸಿದು ಬೀಳುವ ಆತಂಕ ಎದುರಾಗಿದೆ.

ಬಾಗಿನ ಸಮರ್ಪಣೆ, ಗಂಗಾಪೂಜೆ
ನೇತ್ರಾವತಿ   – ಕುಮಾರಧಾರಾ ನದಿಗಳೆರಡು ಶ್ರೀ ಸಹಸ್ರಲಿಂಗೇಶ್ವರ ದೇಗುಲದ ಮುಂಭಾಗದಲ್ಲಿ ಮತ್ತೆ ಸಂಗಮಿಸಿ ಆಗುವ ಪವಿತ್ರ ಸಂಗಮದ ವೇಳೆ ಶಾಸಕ ಅಶೋಕ್‌ ಕುಮಾರ್‌ ರೈ ಅವರ ಉಪಸ್ಥಿತಿಯಲ್ಲಿ ಬಾಗಿನ ಸಮರ್ಪಣೆ, ಗಂಗಾ ಪೂಜಾ ವಿಧಿ ವಿಧಾನಗಳು ಜರಗಿ ಪವಿತ್ರ ಸಂಗಮ ತೀರ್ಥ ಸ್ನಾನ ನೆರವೇರಿತು.

ಪ್ರಧಾನ ಅರ್ಚಕ ಹರೀಶ್‌ ಉಪಾಧ್ಯಾಯರವರ ವೇದಮಂತ್ರ ಘೋಷಣೆಯೊಂದಿಗೆ ಗಂಗಾ ಪೂಜೆ ನಡೆಯಿತು. ಗಂಗಾ ಮಾತೆಗೆ ಬಾಗಿನ ಸಮರ್ಪಿಸಿ ಪ್ರಾರ್ಥಿಸಲಾಯಿತು. ಗಂಗಾಮಾತೆಗೆ ಜೈಕಾರ ಹಾಕಿದ ಭಕ್ತರು ತೀರ್ಥ ಸಂಪ್ರೋಕ್ಷಣೆ ಗೈದರು. ಹಲವರು ತೀರ್ಥ ಸ್ನಾನ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರುಗಳಾದ ಸಂಜೀವ ಮಠಂದೂರು, ಅರುಣ್‌ ಕುಮಾರ್‌ ಪುತ್ತಿಲ, ತಹಶೀಲ್ದಾರ್‌ ಪುರಂದರ, ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ನಾಯಕ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.