Wayanad ನಲ್ಲಿ ಘೋರ ದೃಶ್ಯಗಳು: 156 ಕ್ಕೇರಿದ ಸಾವಿನ ಸಂಖ್ಯೆ

ಸ್ಥಳಕ್ಕೆ ಬರುತ್ತಿದ್ದ ಕೇರಳ ಸಚಿವೆಯ ಕಾರು ಅಪಘಾತ

Team Udayavani, Jul 31, 2024, 8:27 AM IST

1-vayanad-1

ವಯನಾಡ್ : ಭೀಕರ ಭೂಕುಸಿತಕ್ಕೆ ಸಿಲುಕಿ ನಲುಗಿ ಹೋಗಿರುವ ಕೇರಳದ ವಯನಾಡ್ ನಲ್ಲಿ ಸಾವನ್ನಪ್ಪಿದ ದುರ್ದೈವಿಗಳ ಸಂಖ್ಯೆ 156 ಕ್ಕೇರಿದೆ. ಒಟ್ಟು 45 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 3,069 ಜನರಿಗೆ ವಸತಿ ಕಲ್ಪಿಸಲಾಗಿದೆ.

ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದ ನಂತರ ಕನಿಷ್ಠ 156 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 130 ಜನರು ಗಾಯಗೊಂಡಿದ್ದಾರೆ ಎಂದು ಕೇರಳ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ಸುಮಾರು 100 ಜನರು ನಾಪತ್ತೆಯಾಗಿದ್ದಾರೆ.ಮಂಗಳವಾರ ನಾಲ್ಕು ಗಂಟೆಗಳ ಅವಧಿಯಲ್ಲಿ ವಯನಾಡ್‌ನಲ್ಲಿ ಮೂರು ಭೂಕುಸಿತಗಳು ಸಂಭವಿಸಿದ್ದವು.

ಸಚಿವೆಯ ಕಾರು ಅಪಘಾತ

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ವಾಹನ ಮಲಪ್ಪುರಂ ಜಿಲ್ಲೆಯ ಮಂಜೇರಿ ಬಳಿ ಸಣ್ಣ ಅಪಘಾತವಾಗಿದೆ. ವಯನಾಡಿಗೆ ಪ್ರಯಾಣಿಸುತ್ತಿದ್ದ ಸಚಿವೆಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಪೋಲೀಸರು ತಿಳಿಸಿದ್ದಾರೆ.

ಎರಡು ದಿನಗಳ ಶೋಕಾಚರಣೆ
ಭೂಕುಸಿತದಿಂದ ನೂರಾರು ಜನರು ಸಾವನ್ನಪ್ಪಿದ ನಂತರ ಕೇರಳದಲ್ಲಿ ಎರಡು ದಿನಗಳ ಶೋಕಾಚರಣೆಯನ್ನು ಆಚರಿಸಲಾಗುತ್ತಿದ್ದು, ಕೇರಳ ವಿಧಾನಸಭೆಯಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗಿದೆ.

ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲಾಗುತ್ತಿದೆ. ಎನ್‌ಡಿಆರ್‌ಎಫ್, ಕೇರಳ ಪೊಲೀಸ್‌ ಇಲಾಖೆ, ಅಗ್ನಿಶಾಮಕ ದಳ, ಭಾರತೀಯ ಸೇನಾ ಯೋಧರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಪರಿಹಾರ ಮತ್ತು ರಕ್ಷಣ ಕಾರ್ಯ ಕೈಗೊಳ್ಳಲು ಎನ್‌ಡಿಆರ್‌ಎಫ್ 4 ತಂಡಗಳನ್ನು ನಿಯೋಜಿಸಿದೆ. ಅವುಗಳು ಸಾಮಗ್ರಿ, ಯಂತ್ರಗಳು, ಆಧುನಿಕ ಬೋಟ್‌ಗಳು, ಔಷಧಗಳನ್ನು ಹೊಂದಿವೆ. ಪ್ರತೀ ತಂಡದಲ್ಲಿ 30 ಸದಸ್ಯರಿದ್ದು ಈಗಾಗಲೇ ಕಾರ್ಯಾಚರಣೆಯಲ್ಲಿ ತೊಡಗಿದೆ.

ಭಾರತೀಯ ಸೇನೆಯೂ ಭಾಗಿ: ಭೂಕುಸಿತದಲ್ಲಿ ಸಿಲುಕಿದವರ ರಕ್ಷಣೆ, ನಾಪತ್ತೆಯಾದವರ ಹುಡುಕಾಟಕ್ಕೆ ಭಾರತೀಯ ಸೇನೆಯೂ ಕೈಜೋಡಿಸಿದ್ದು ಮದ್ರಾಸ್‌ ಇನ್‌ಫ್ಯಾಂಟ್ರಿ ಬೆಟಾಲಿಯನ್‌ನ ಸೆಕೆಂಡ್‌ ಇನ್‌ ಕಮಾಂಡ್‌ನ‌ 43 ಯೋಧರ ತಂಡ ವಯನಾಡ್‌ನ‌ಲ್ಲಿ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದೆ. ಇದರಲ್ಲಿ ಓರ್ವ ಮೆಡಿಕಲ್‌ ಆಫೀಸರ್‌, ಇಬ್ಬರು ಜೂನಿಯರ್‌ ಕಮಿಷನ್ಡ್ ಅಧಿಕಾರಿ, 40 ಯೋಧರಿದ್ದು ತೀವ್ರ ಕಠಿನ ಪ್ರದೇಶದಲ್ಲಿ ನೆರವು ನೀಡಲು ಅಗತ್ಯ ಉಪಕರಣಗಳನ್ನು ಈ ತಂಡ ಹೊಂದಿದೆ. ಇದರ ಜತೆಗೆ ಸೇನಾ ಎಂಜಿನಿಯರಿಂಗ್‌ ತಂಡ ಕೂಡ ವಯನಾಡಿಗೆ ಬಂದಿದೆ. ಜತೆಗೆ 67 ಮಂದಿ ಡಿಫೆನ್ಸ್‌ ಸೆಕ್ಯುರಿಟಿ ಕಾರ್ಪ್ಸ್‌ ಯೋಧರು ಕಣ್ಣೂರಿನಿಂದ ಆ್ಯಂಬುಲೆನ್ಸ್‌, 3 ಟ್ರಕ್‌ ಲೋಡ್‌ ಸಾಮಗ್ರಿಗಳ ಜತೆ ಬಂದಿದ್ದಾರೆ. ಇದಲ್ಲದೆ ಎಳಿಮಾಲಾ ನೌಕಾ ಅಕಾಡೆಮಿಯ ನೌಕಾ ತಂಡ ಕೂಡ ವಯನಾಡಿಗೆ ಆಗಮಿಸಿದೆ. ಡ್ರೋನ್‌ ಮತ್ತು ಪೊಲೀಸ್‌ ಶ್ವಾನದಳವನ್ನು ರಕ್ಷಣ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದೆ.

ಟಾಪ್ ನ್ಯೂಸ್

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

1-gread

Manipur ಸಚಿವ ಖಶಿಮ್‌ ಮನೆ ಮೇಲೆ ಗ್ರೆನೇಡ್‌ ದಾಳಿ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.